ಮೋದಿ ಭಾವಚಿತ್ರವಿರೋ ಪೋಸ್ಟರ್ ಹಿಡಿಯಲು ಹಿಂದೇಟು; ಗ್ರಾಪಂ ಅಧ್ಯಕ್ಷೆ ಫರೀದಾ ಬೇಗಂರಿಂದ ಪ್ರಧಾನಿಗೆ ಅವಮಾನ?

Published : Jan 04, 2024, 12:21 PM IST
ಮೋದಿ ಭಾವಚಿತ್ರವಿರೋ ಪೋಸ್ಟರ್ ಹಿಡಿಯಲು ಹಿಂದೇಟು; ಗ್ರಾಪಂ ಅಧ್ಯಕ್ಷೆ ಫರೀದಾ ಬೇಗಂರಿಂದ ಪ್ರಧಾನಿಗೆ ಅವಮಾನ?

ಸಾರಾಂಶ

ಕೇಂದ್ರ ಸರ್ಕಾರದ‌ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಫರೀದಾ ಬೇಗಂ ಎಂಬಾಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾವಚಿತ್ರವಿರುವ ಪೋಸ್ಟರ್ ಹಿಡಿಯಲು ನಿರಾಕರಿಸಿದ ಘಟನೆ ಕೊಪ್ಪಳದ ಕುದರಿಮೋತಿ ಗ್ರಾಮದಲ್ಲಿ ನಡೆದಿದೆ. ಪಂಚಾಯ್ತಿ ಅಧ್ಯಕ್ಷೆ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಪ್ಪಳ ( ಜ.4): ಕೇಂದ್ರ ಸರ್ಕಾರದ‌ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಫರೀದಾ ಬೇಗಂ ಎಂಬಾಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾವಚಿತ್ರವಿರುವ ಪೋಸ್ಟರ್ ಹಿಡಿಯಲು ನಿರಾಕರಿಸಿದ ಘಟನೆ ಕೊಪ್ಪಳದ ಕುದರಿಮೋತಿ ಗ್ರಾಮದಲ್ಲಿ ನಡೆದಿದೆ. ಪಂಚಾಯ್ತಿ ಅಧ್ಯಕ್ಷೆ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ‌ ಕಾರ್ಯಕ್ರಮವಾ್ಗಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ. ಹಳ್ಳಿಹಳ್ಳಿಯಲ್ಲೂ ನಡೆಯುತ್ತಿರುವ ಕಾರ್ಯಕ್ರಮ ಆದರೆ ಪೋಸ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಇರುವ ಕಾರಣಕ್ಕೆ ಹಿಡಿದುಕೊಳ್ಳಲು ಹಿಂದೇಟು ಹಾಕಿದ ಫರೀದಾ ಬೇಗಂ.

ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯ ತಲುಪಿಸುವೆ: ಸಂಸದ ಸಂಗಣ್ಣ ಕರಡಿ

ಎಲ್ಲ ಸದಸ್ಯರು, ಕಾರ್ಯಕರ್ತರು ಪೋಸ್ಟರ್ ಹಿಡಿದು ಜನರಿಗೆ ಮಾಹಿತಿ ನೀಡ್ತಾ ಇದ್ರೂ, ಗ್ರಾಪಂ ಅಧ್ಯಕ್ಷೆ ಮಾತ್ರ ಡೋಂಟ್ ಕೇರ್. ಈ ವೇಳೆ ಕೈಗೆ ಪೋಸ್ಟರ್ ಕೊಡಲು ಬಂದಾಗ ಪದೇಪದೆ ನಿರಾಕರಿಸಿದ ಗ್ರಾಪಂ ಅಧ್ಯಕ್ಷೆ ಗ್ರಾಪಂ ಮೊದಲ ಪ್ರಜೆಯಾದ್ರೂ ರಾಜಕೀಯ ಮಾಡಿದ್ರಾ ಅಧ್ಯಕ್ಷೆ. ಗ್ರಾಮಪಂಚಾಯತ್ ಅಧ್ಯಕ್ಷೆಯ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ ಬಿಜೆಪಿ ಮುಖಂಡರು.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ಆಯೋಜಿಸಲಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯುವ ಫಲಾನುಭವಿಗಳು ದೇಶದ ಪ್ರತಿ ಮನೆಯಲ್ಲೂ ಇದ್ದಾರೆ. ಸಮಾಜದ ಕಟ್ಟಕಡೆಯ ಜನರಿಗೂ ತಲುಪಿಸುವುದೇ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಗುರಿಯಾಗಿದೆ. 

 

ಸ್ವಾತಂತ್ರ್ಯದ 100 ವರ್ಷಕ್ಕೆ ವಿಕಸಿತ ಭಾರತ: ಆರ್‌.ಅಶೋಕ್‌ ವಿಶೇಷ ಲೇಖನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!