'ನಾನೂ ಕೊಟ್ಟ ಸಲಹೆ ಎಂದೂ ಸಿಎಂ ನಿರಾಕರಿಸಿಲ್ಲ' : ವಿನಯ್ ಗುರೂಜಿ

Kannadaprabha News   | Asianet News
Published : Aug 27, 2020, 11:02 AM IST
'ನಾನೂ ಕೊಟ್ಟ ಸಲಹೆ ಎಂದೂ ಸಿಎಂ ನಿರಾಕರಿಸಿಲ್ಲ'  : ವಿನಯ್ ಗುರೂಜಿ

ಸಾರಾಂಶ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಗೌರಿ ಗದ್ದೆ ಅವಧೂತ ವಿನಯ್ ಗುರೂಜಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಬೆಂಗಳೂರು (ಆ.27): ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರುವಂತೆ ಗೌರಿಗದ್ದೆ ವಿನಯ್‌ ಗುರೂಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪಗೆ ಮನವಿ ಮಾಡಿದ್ದಾರೆ. ಬುಧವಾರ ಮುಖ್ಯಮಂತ್ರಿಗಳ ನಿವಾಸ ‘ಕಾವೇರಿ’ಯಲ್ಲಿ ಯಡಿ​ಯೂ​ರಪ್ಪ ಜೊತೆ ಚರ್ಚಿಸಿದ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಗುರೂಜಿ, ‘ಗೋ ಹತ್ಯೆ ನಿಷೇಧ ಕಾನೂನು ಅನಿವಾರ್ಯ. ತಾವು ಕೊಟ್ಟ ಸಲಹೆಗಳನ್ನು ಸಿಎಂ ಎಂದೂ ನಿರಾಕರಿಸಿಲ್ಲ ಎಂದ​ರು.

ಬೇಳೂರು ಟಾಸ್ಕ್‌ ಫೋರ್ಸ್‌ ಕಾರ್ಯಕ್ಕೆ ವಿನಯ್ ಗುರೂಜಿ ಶ್ಲಾಘನೆ...

ಎಂಜಲು ಪ್ರಸಾದಕ್ಕೆ ಸ್ಪಷ್ಟನೆ: ತಾವು ತಿಂದುಳಿದ ಅನ್ನವನ್ನು ಪ್ರಸಾದವಾಗಿ ಹಂಚುತ್ತಾರೆ ಎಂಬ ಎಂಎಲ್‌ಸಿ ರಘು ಆಚಾರ್‌ ಆರೋಪಕ್ಕೆ ಪ್ರತಿಕ್ರಿಯಿಸಿದ ಗುರೂಜಿ, ನಾನು ಊಟ ಮಾಡಿದ ಮೇಲೆ ತಟ್ಟೆಎಲ್ಲಿಟ್ಟಿದ್ದಾರೆ, ಲೋಟ ಎಲ್ಲಿಟ್ಟಿದ್ದಾರೆ ಎಂಬುದನ್ನು ನೋಡಲು ಆಗುವುದಿಲ್ಲ. ಅದು ನನ್ನ ಗಮನಕ್ಕೆ ಬರದೇ ನಡೆದಿರುವ ಪ್ರಸಂಗ. ಒಂದು ವೇಳೆ ಗಮನಕ್ಕೆ ಬಂದಿದ್ದರೆ ಗಾಂಧಿವಾದದ ರೀತಿಯಲ್ಲಿ ಖಂಡಿಸುತ್ತಿದೆ ಎಂದರು.

ಅವರವರ ಭಾವ ಅವರದ್ದು. ಆದರೆ, ಅವರು ಹೇಳಿದ ಸನ್ನಿವೇಶ ಅಲ್ಲಿರಲಿಲ್ಲ. ನಾನೇ ನಿಶ್ಚಯ ಮಾಡಿದ ಮದುವೆ ಅದಾಗಿತ್ತು. ಲಿಂಗಾಯತರಲ್ಲಿ ಒಂದು ಸಂಪ್ರದಾಯ ಇದೆ. ಗುರುಗಳು ಊಟ ಮಾಡಿದ ಮೇಲೆ ಭಕ್ತರು ಪ್ರಸಾದ ಸ್ವೀಕರಿಸುವ ಪದ್ಧತಿ ಇದೆ ಎಂದೂ ಅವರು ಇದೇ ಸಂದರ್ಭದಲ್ಲಿ ಉಲ್ಲೇಖಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!