ಡಿಸಿ ನಿವಾಸ ನವೀಕರಣ ವೇಳೆ ನಿಯಮ ಉಲ್ಲಂಘನೆ; ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಸರ್ಕಾರ ಆದೇಶ

Published : Sep 08, 2023, 05:00 AM IST
 ಡಿಸಿ ನಿವಾಸ ನವೀಕರಣ ವೇಳೆ ನಿಯಮ ಉಲ್ಲಂಘನೆ; ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಸರ್ಕಾರ ಆದೇಶ

ಸಾರಾಂಶ

ಮೈಸೂರು ಜಿಲ್ಲಾಧಿಕಾರಿ ನಿವಾಸದ ನವೀಕರಣ ಹಾಗೂ ಬಟ್ಟೆಬ್ಯಾಗ್‌ ಖರೀದಿಯಲ್ಲಿ ನಿಯಮ ಉಲ್ಲಂಘಿಸಿರುವ ಆರೋಪದಲ್ಲಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

ಮೈಸೂರು: ಮೈಸೂರು ಜಿಲ್ಲಾಧಿಕಾರಿ ನಿವಾಸದ ನವೀಕರಣ ಹಾಗೂ ಬಟ್ಟೆಬ್ಯಾಗ್‌ ಖರೀದಿಯಲ್ಲಿ ನಿಯಮ ಉಲ್ಲಂಘಿಸಿರುವ ಆರೋಪದಲ್ಲಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

ಸಿಂಧೂರಿ(Rohini sindhuri IAS)ಯವರು ಮೈಸೂರು ಜಿಲ್ಲಾಧಿಕಾರಿ ಆಗಿದ್ದ ವೇಳೆ ಮಾಡಿದ್ದ ಜಿಲ್ಲಾಧಿಕಾರಿ ನಿವಾಸದ ನವೀಕರಣ ಹಾಗೂ ಬಟ್ಟೆಬ್ಯಾಗ್‌ ಖರೀದಿಯಲ್ಲಿ ನಿಯಮ ಉಲ್ಲಂಘನೆ ಆರೋಪ ಈಗ ಸಾಬೀತಾಗಿದ್ದು, ಸರ್ಕಾರದ ಪ್ರಾಥಮಿಕ ತನಿಖಾ ವರದಿ ಪ್ರಕಾರ ಅವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲು ಡಿಪಿಎಆರ್‌ ಅಧೀನ ಕಾರ್ಯದರ್ಶಿ ಜೇಮ್ಸ… ಥಾರಖನ್‌ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದರನ್ವಯ ಸಮಗ್ರ ವಿಚಾರಣೆಗೆ ನಿವೃತ್ತ ಐಎಎಸ್‌ ಅಧಿಕಾರಿ ಯೋಗೇಂದ್ರ ತ್ರಿಪಾಠಿ ಅವರನ್ನು ನೇಮಿಸಲಾಗಿದೆ. ಬಿಬಿಎಂಪಿ ವಿಶೇಷ ಆಯುಕ್ತ ಉಜ್ವಲ್‌ ಕುಮಾರ್‌ ಘೋಷ್‌ ಅವರನ್ನು ಸರ್ಕಾರದ ಪರವಾಗಿ ಪ್ರಕರಣದ ವಿವರ ಒದಗಿಸಲು ನೇಮಿಸಲಾಗಿದೆ.

 

IAS Vs IPS: ಡಿ. ರೂಪಾ ಮೌದ್ಗಿಲ್‌ಗೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌, ರೋಹಿಣಿ ಸಿಂಧೂರಿಗೆ ಗೆಲುವು

ಜಿಲ್ಲಾಧಿಕಾರಿ ನಿವಾಸ ನವೀಕರಣಕ್ಕೆ ಯಾವ ಅನುಮತಿಯನ್ನೂ ಪಡೆದಿಲ್ಲ. ನವೀಕರಣಕ್ಕೆ ಬಳಿಸಿದ ಹಣಕ್ಕೂ ಆರ್ಥಿಕ ಇಲಾಖೆ ಅನುಮತಿ ಪಡೆದಿಲ್ಲ. ಇದು ನಿಯಮ ಉಲ್ಲಂಘನೆಯಾಗಿದ್ದು, ಇನ್ನು ಬಟ್ಟೆಬ್ಯಾಗ್‌ ಖರೀದಿಯಲ್ಲೂ ಯಾವ ನಿಯಮಾವಳಿ ಪಾಲನೆ ಆಗಿಲ್ಲ. ಆದ್ದರಿಂದ ಶಿಸ್ತುಕ್ರಮ ಜರುಗಿಸಿ ಎಂದು ಶಿಫಾರಸು ಮಾಡಲಾಗಿದೆ.

ಕೆ.ಆರ್‌.ನಗರ ಶಾಸಕರಾಗಿದ್ದ ಮಾಜಿ ಸಚಿವ ಸಾ.ರಾ.ಮಹೇಶ್‌ ಅವರು ರೋಹಿಣಿ ಸಿಂಧೂರಿ ಅವರ ವಿರುದ್ಧ ಈ ಸಂಬಂಧ ಆರೋಪ ಮಾಡಿದ್ದರು. ಅಲ್ಲದೇ ವಿಧಾನಸಭೆಯಲ್ಲೂ ಪ್ರಸ್ತಾಪಿಸಿದ್ದು ಇಲ್ಲಿ ಉಲ್ಲೇಖನೀಯ. 

ಸಿಂಧೂರಿ ಕೇಸ್‌: ರೂಪಾ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಜಡ್ಜ್‌

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಬೆಂಗಳೂರು ಏರ್ಪೋರ್ಟ್ ಹೊಸ ಪಿಕ್‌ಅಪ್‌, ಪಾರ್ಕಿಂಗ್ ರೂಲ್ಸ್; ಪ್ರಯಾಣಿಕರ ಸಮಸ್ಯೆ 30 ದಿನಗಳೊಳಗೆ ನಿವಾರಣೆ