ಪದೇಪದೆ ರೂಲ್ಸ್ ಬ್ರೇಕ್ ಮಾಡ್ತಿದ್ದ ವಾಹನ ಸವಾರರಿಗೆ ಬಿಗ್ ಶಾಕ್; ₹50,000+ ದಂಡ ಬಾಕಿ ಇದ್ದ 85 ವಾಹನ ಜಪ್ತಿ!

Published : Feb 18, 2024, 03:59 PM IST
ಪದೇಪದೆ ರೂಲ್ಸ್ ಬ್ರೇಕ್ ಮಾಡ್ತಿದ್ದ ವಾಹನ ಸವಾರರಿಗೆ ಬಿಗ್ ಶಾಕ್; ₹50,000+ ದಂಡ ಬಾಕಿ ಇದ್ದ 85 ವಾಹನ ಜಪ್ತಿ!

ಸಾರಾಂಶ

ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿ ₹50 ಸಾವಿರಕ್ಕಿಂತ ಅಧಿಕ ಮೊತ್ತದ ದಂಡ ಬಾಕಿ ಉಳಿಸಿಕೊಂಡಿದ್ದ ಕಾರು ಸೇರಿದಂತೆ 85 ವಾಹನಗಳನ್ನು ದಕ್ಷಿಣ ವಿಭಾಗ (ಸಂಚಾರ)ದ ಪೊಲೀಸರು ಜಪ್ತಿ ಮಾಡಿದ್ದಾರೆ.

ಬೆಂಗಳೂರು (ಫೆ.18): ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿ ₹50 ಸಾವಿರಕ್ಕಿಂತ ಅಧಿಕ ಮೊತ್ತದ ದಂಡ ಬಾಕಿ ಉಳಿಸಿಕೊಂಡಿದ್ದ ಕಾರು ಸೇರಿದಂತೆ 85 ವಾಹನಗಳನ್ನು ದಕ್ಷಿಣ ವಿಭಾಗ (ಸಂಚಾರ)ದ ಪೊಲೀಸರು ಜಪ್ತಿ ಮಾಡಿದ್ದಾರೆ.

ಈ ಎಲ್ಲ ವಾಹನಗಳ ಮೇಲೆ 10,210 ಪ್ರಕರಣಗಳು ದಾಖಲಾಗಿದ್ದು, ಸುಮಾರು ₹1.07 ಕೋಟಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಇವುಗಳ ಮೇಲೆ ಕ್ರಮ ಜರುಗಿಸಲಾಗುತ್ತದೆ ಎಂದು ಡಿಸಿಪಿ ಶಿವಪ್ರಕಾಶ್ ದೇವರಾಜ್ ತಿಳಿಸಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ₹50 ಸಾವಿರಕ್ಕಿಂತ ಅಧಿಕ ಮೊತ್ತದ ದಂಡ ಬಾಕಿ ಉಳಿಸಿಕೊಂಡ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳುವಂತೆ ಹಿರಿಯ ಅಧಿಕಾರಿಗಳು ಸೂಚಿಸಿದ್ದರು. ಅದರನ್ವಯ ದಕ್ಷಿಣ ವಿಭಾಗ ವ್ಯಾಪ್ತಿಯ 12 ಠಾಣೆಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು ಎಂದು ಡಿಸಿಪಿ ತಿಳಿಸಿದ್ದಾರೆ.

 

ಬೆಂಗಳೂರು: ಸ್ಕೂಟರ್ ಕೀ ಕಿತ್ತುಕೊಂಡ ಟ್ರಾಫಿಕ್ ಪೊಲೀಸ್ ಕೈ ಕಚ್ಚಿದ ವಾಹನ ಸವಾರ

ಠಾಣೆಗಳ ಪೈಕಿ ಜಯನಗರ-26, ಬನಶಂಕರಿ-9, ಕುಮಾರಸ್ವಾಮಿ ಲೇಔಟ್-5, ಬಸವನಗುಡಿ-4, ವಿ.ವಿ.ಪುರ-4, ಹುಳಿಮಾವು-11, ಆಡುಗೋಡಿ-11, ಮೈಕೋ ಲೇಔಟ್‌-6, ಮಡಿವಾಳ-1, ಎಚ್‌ಎಸ್‌ಆರ್ ಲೇಔಟ್‌-3, ಎಲೆಕ್ಟ್ರಾನಿಕ್ ಸಿಟಿ-3 ಹಾಗೂ ಬೆಳ್ಳಂದೂರು-2 ಸೇರಿ ಒಟ್ಟು 85 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಡಿಸಿಪಿ ಹೇಳಿದ್ದಾರೆ.

ಕೆಲವು ಪ್ರಕರಣಗಳ ಹೊರತುಪಡಿಸಿ ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಪೊಲೀಸರು ದಂಡ ವಿಧಿಸಿಲ್ಲ. ಬಹುತೇಕ ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳ ಮೇಲೆ ಜಂಕ್ಷನ್‌ಗಳಲ್ಲಿರುವ ಹೈ ರೆಸ್ಯೂಲೇಷನ್ ಕ್ಯಾಮೆರಾಗಳ ಫೋಟೋ ಆಧರಿಸಿ ದಂಡ ವಿಧಿಸಲಾಗಿದೆ. ಈಗ ಮಾಲಿಕರು ದಂಡ ಪಾವತಿಸಿ ವಾಹನ ಬಿಡಿಸಿಕೊಳ್ಳಬಹುದು. ದಂಡ ಪಾವತಿಸದೆ ಹೋದರೆ ವಾಹನಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನುಕ್ರಮ ಜರುಗಿಸಲಾಗುತ್ತದೆ ಎಂದರು.

HSRP ನಂಬರ್ ಪ್ಲೇಟ್ ಅಳವಡಿಕೆ ದಿನಾಂಕದ ಬಿಗ್‌ ಅಪ್ಡೇಟ್ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ!

ಹೆಲ್ಮೆಟ್ ಇಲ್ಲದ ಬೈಕ್‌ಗಳು: ಕಂಪನಿಗೆ ₹1 ಲಕ್ಷ ದಂಡ

ಜಪ್ತಿ ವಾಹನಗಳ ಪೈಕಿ ಖಾಸಗಿ ಕಂಪನಿಯೊಂದರ ಬೈಕ್‌ ಮೇಲೆ ₹1.44 ಲಕ್ಷ ದಂಡ ಬಾಕಿ ಇರುವುದು ಬೆಳಕಿದೆ ಬಂದಿದೆ.

ಕಳೆದ ಮೂರು ವರ್ಷಗಳಿಂದ ಆ ಕಂಪನಿಯ ಕೆಲಸಗಾರರು ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ತಪ್ಪಿಗೆ 284 ಪ್ರಕರಣಗಳು ದಾಖಲಾಗಿ ದಂಡ ಬಿದ್ದಿದೆ. ಈ ಬೈಕನ್ನು ಜಯನಗರ ಸಂಚಾರ ಪೊಲೀಸರು ವಶಪಡಿಸಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!