ಸಂಚಾರ ನಿಯಮ ಉಲ್ಲಂಘನೆ: 69 ವಾಹನ ಮಾಲೀಕರಿಂದ ₹5.27 ಲಕ್ಷ ದಂಡ ವಸೂಲಿ!

Published : Feb 24, 2024, 06:43 AM IST
ಸಂಚಾರ ನಿಯಮ ಉಲ್ಲಂಘನೆ: 69 ವಾಹನ ಮಾಲೀಕರಿಂದ ₹5.27 ಲಕ್ಷ ದಂಡ ವಸೂಲಿ!

ಸಾರಾಂಶ

:ನಗರ ಸಂಚಾರ ಪೂರ್ವ ವಿಭಾಗದ ವ್ಯಾಪ್ಯಿಯಲ್ಲಿ ರಸ್ತೆ ಸಂಚಾರ ನಿಯಮ ಉಲ್ಲಂಘಿಸಿ 50 ಸಾವಿರ ರು.ಗೂ ಅಧಿಕ ದಂಡ ಬಾಕಿ ಉಳಿಸಿಕೊಂಡಿರುವ 69 ವಾಹನಗಳ ಮಾಲೀಕರಿಂದ 5.27 ಲಕ್ಷ ರು. ದಂಡ ವಸೂಲಿ ಮಾಡಲಾಗಿದೆ.

ಬೆಂಗಳೂರು (ಫೆ.24) :ನಗರ ಸಂಚಾರ ಪೂರ್ವ ವಿಭಾಗದ ವ್ಯಾಪ್ಯಿಯಲ್ಲಿ ರಸ್ತೆ ಸಂಚಾರ ನಿಯಮ ಉಲ್ಲಂಘಿಸಿ 50 ಸಾವಿರ ರು.ಗೂ ಅಧಿಕ ದಂಡ ಬಾಕಿ ಉಳಿಸಿಕೊಂಡಿರುವ 69 ವಾಹನಗಳ ಮಾಲೀಕರಿಂದ 5.27 ಲಕ್ಷ ರು. ದಂಡ ವಸೂಲಿ ಮಾಡಲಾಗಿದೆ.

ಹಲವು ಬಾರಿ ರಸ್ತೆ ಸಂಚಾರ ನಿಯಮ ಉಲ್ಲಂಘಿಸಿ 50 ಸಾವಿರ ರು.ಗೂ ಅಧಿಕ ದಂಡದ ಮೊತ್ತ ಬಾಕಿ ಉಳಿಸಿಕೊಂಡಿರುವ ವಾಹನಗಳು ಹಾಗೂ ಅದರ ಮಾಲೀಕರ ಪತ್ತೆಗೆ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಕಳೆದ 15 ದಿನಗಳಲ್ಲಿ 69 ವಾಹನಗಳನ್ನು ಪತ್ತೆ ಮಾಡಲಾಗಿದೆ. ಈ 69 ವಾಹನಗಳ ವಿರುದ್ಧ 8,875 ಪ್ರಕರಣಗಳು ದಾಖಲಾಗಿದ್ದು, 47.15 ಲಕ್ಷ ರು. ದಂಡ ಬಾಕಿ ಇದೆ. ಈ ಪೈಕಿ 1,048 ಪ್ರಕರಣಗಳನ್ನು ಇತ್ಯರ್ಥಪಡಿಸಿ 5.27 ಲಕ್ಷ ರು. ದಂಡ ವಸೂಲಿ ಮಾಡಲಾಗಿದೆ.ಉಳಿದ ದಂಡ ಸಂಗ್ರಹಣೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಸಂಬಂಧಪಟ್ಟ ವಾಹನಗಳ ಮಾಲೀಕರಿಗೆ ಸಂಚಾರ ನಿಯಮಗಳ ಪಾಲನೆಯ ಮಹತ್ವದ ಬಗ್ಗೆ ಅರಿವು ಮೂಡಿಸಲಾಗಿದೆ ಎಂದು ಸಂಚಾರ ಪೂರ್ವ ವಿಭಾಗದ ಡಿಸಿಪಿ ಕುಲದೀಪ್‌ ಕುಮಾರ್‌ ಆರ್‌.ಜೈನ್‌ ತಿಳಿಸಿದ್ದಾರೆ.

ವಾಟರ್‌ ಟ್ಯಾಂಕರ್‌ಗಳ 506 ಪ್ರಕರಣ ದಾಖಲು: ₹2.64 ಲಕ್ಷ ದಂಡ ಸಂಗ್ರಹಕನ್ನಡಪ್ರಭ ವಾರ್ತೆ ಬೆಂಗಳೂರುನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಟರ್‌ ಟ್ಯಾಂಕರ್‌ಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರೆಸಿರುವ ನಗರ ಸಂಚಾರ ಪೊಲೀಸರು ಶುಕ್ರವಾರ 506 ಪ್ರಕರಣಗಳನ್ನು ದಾಖಲಿಸಿ, 2.64 ಲಕ್ಷ ರು. ದಂಡ ವಸೂಲಿ ಮಾಡಿದ್ದಾರೆ .ನಗರದ ಎಲ್ಲಾ ಸಂಚಾರ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 7 ಗಂಟೆಯಿಂದ 9 ಗಂಟೆ ವರೆಗೆ ಈ ವಿಶೇಷ ಕಾರ್ಯಾಚರಣೆ ನಡೆದಿದೆ. ವಾಟರ್‌ ಟ್ಯಾಂಕರ್‌ ಚಾಲಕರು ಸಮವಸ್ತ್ರ ಧರಿಸದಿರುವುದು 162, ಸೀಟ್‌ ಬೆಲ್ಟ್‌ ಧರಿಸದಿರುವುದು 39, ನೋ ಎಂಟ್ರಿ 120, ದೋಷಪೂರಿತ ನೋಂದಣಿ ಫಲಕ 56, ಪಥ ಶಿಸ್ತು ಉಲ್ಲಂಘನೆ 04, ನಿಲುಗಡೆ ನಿಷೇಧ 57, ಫುಟ್‌ಪಾತ್‌ ಪಾರ್ಕಿಂಗ್‌ 05, ಕರ್ಕಶ ಹಾರ್ನ್‌ 05, ಪಾನಮತ್ತ ಚಾಲನೆ 01, ಇತರೆ ನಿಯಮ ಉಲ್ಲಂಘನೆ 57 ಸೇರಿದಂತೆ ಒಟ್ಟು 506 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ