
ಬೆಂಗಳೂರು (ಜು.5) : ಸಂಚಾರ ನಿಯಮ ಉಲ್ಲಂಘನೆಗಾಗಿ ವಾಹನ ಸವಾರರಿಗೆ ವಿಧಿಸಲಾಗಿದ್ದ ದಂಡ ಮೊತ್ತದಲ್ಲಿ ಶೇ.50 ರಿಯಾಯಿತಿ ಘೋಷಣೆ ಮಾಡಲಾಗಿತ್ತು. ಚುನಾವಣೆ ಸಂದರ್ಭ ಈ ರಿಯಾಯಿತಿಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಶೇ.50 ರಿಯಾಯಿತಿ ಘೋಷಿಸಿ ಅವಕಾಶ ನೀಡಲಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆಯಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಸೆಪ್ಟೆಂಬರ್ 9 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ನರೇಂದ್ರ ಮಾಹಿತಿ ನೀಡಿದ್ದಾರೆ.
ಈ ಹಿಂದೆ 25 ದಿನಗಳ ಕಾಲ ರಿಯಾಯಿತಿ ನೀಡಿ ಆದೇಶ ಹೊರಡಿಸಲಾಗಿತ್ತು. ಇದೀಗ ಮತ್ತೆ ಅವಕಾಶ ನೀಡಿದ್ದು, ಸೆಪ್ಟೆಂಬರ್ 9 ರವರೆಗೆ ಅವಕಾಶ ನಿಡಲಾಗಿದೆ. ಸಂಚಾರಿ ಪೊಲೀಸ್ ಇಲಾಖೆಯ ಇ-ಚಲನ್ನಲ್ಲಿ ಫೆಬ್ರವರಿ 11, 2023ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಈ ಅವಕಾಶ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ