ಯುಗಾದಿ ಹಬ್ಬದಂದೇ ಗೃಹಲಕ್ಷ್ಮೀ ಹಣದಿಂದ ಫ್ರಿಡ್ಜ್ ಖರೀದಿಸಿದ ಮಹಿಳೆ!

Published : Apr 09, 2024, 05:38 PM ISTUpdated : Apr 09, 2024, 05:46 PM IST
ಯುಗಾದಿ ಹಬ್ಬದಂದೇ ಗೃಹಲಕ್ಷ್ಮೀ ಹಣದಿಂದ ಫ್ರಿಡ್ಜ್ ಖರೀದಿಸಿದ ಮಹಿಳೆ!

ಸಾರಾಂಶ

ಹಾವೇರಿ ಜಿಲ್ಲೆಯ ಶಿಂಗ್ಗಾವಿ ಪಟ್ಟಣದ ಮಹಿಳೆಯೊಬ್ಬರು ಪ್ರತಿತಿಂಗಳು ಬರುತ್ತಿದ್ದ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಖರ್ಚು ಮಾಡದೇ ಕೂಡಿಟ್ಟು ಯುಗಾದಿ ಹಬ್ಬದ ದಿನವೇ ಫ್ರಿಡ್ಜ್ ಖರೀದಿಸಿ ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡಿದ್ದಾರೆ. 

ಹಾವೇರಿ (ಏ.9): ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಐದು ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಮುಖ್ಯವಾಗಿರುವ, ಮನೆಯ ಯಜಮಾನತಿ ಪ್ರತಿ ತಿಂಗಳು 2000 ರೂಪಾಯಿ ನೀಡುವ 'ಗೃಹ ಲಕ್ಷ್ಮೀ' ಯೋಜನೆ ಅತ್ಯಂತ ಮಹತ್ವದ್ದಾಗಿದೆ. ಈ ಯೋಜನೆಯಿಂದ ಬಹಳಷ್ಟು ಬಡ ಕುಟುಂಬಗಳ ಜೀವನಮಟ್ಟ ಸುಧಾರಿಸಿದೆ. ಅದೆಷ್ಟೋ ಬಡ ಮಹಿಳೆಯರಿಗೆ ಆರ್ಥಿಕವಾಗಿ ಬಹಳಷ್ಟು ಸಹಾಯಕ್ಕೆ ಬಂದಿದೆ. ಗೃಹಲಕ್ಷ್ಮೀ ಯೋಜನೆಯಿಂದ ಬಡವರ ಚಿಕ್ಕಪುಟ್ಟ ಕನಸುಗಳು ನನಸಾಗಿವೆ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ.

ಹಾವೇರಿ ಜಿಲ್ಲೆಯ ಶಿಂಗ್ಗಾವಿ ಪಟ್ಟಣದ ಮಹಿಳೆಯೊಬ್ಬರು ಪ್ರತಿತಿಂಗಳು ಬರುತ್ತಿದ್ದ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಖರ್ಚು ಮಾಡದೇ ಕೂಡಿಟ್ಟು ಯುಗಾದಿ ಹಬ್ಬದ ದಿನವೇ ಫ್ರಿಡ್ಜ್ ಖರೀದಿಸಿ ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡಿದ್ದಾರೆ. 

ಮಗನ ಅಂತ್ಯಕ್ರಿಯೆ ವೇಳೆ ಗೃಹಲಕ್ಷ್ಮಿ ಬಗ್ಗೆ ತಾಯಿ ಭಾವುಕ ಮಾತು ವೈರಲ್‌!

ಗೃಹಲಕ್ಷ್ಮೀ ಫಲಾನುಭವಿಯಾಗಿರುವ ಲತಾ ಎಂಬ ಮಹಿಳೆ ಫ್ರಿಡ್ಜ್ ಖರೀದಿಸಿದ್ದಾರೆ. ರಾಜ್ಯ ಸರ್ಕಾರ ಗೃಹಲಕ್ಷ್ಮೀ ಜಾರಿ ಮಾಡಿದಾಗ, ಅಗತ್ಯ ದಾಖಲೆಗಳನ್ನು ನೀಡಿ ಯೋಜನೆಯ ಫಲಾನುಭವಿಯಾಗಿದ್ದ ಮಹಿಳೆ. ಯೋಜನೆ ಜಾರಿಯಾದಾಗಿನಿಂದಲೂ ಪ್ರತಿ ತಿಂಗಳು ಬರುತ್ತಿದ್ದ 2000 ರೂ. ಹಣ ಕೂಡಿಡುತ್ತ ಬಂದಿದ್ದ ಮಹಿಳೆ. ಇದೀಗ ಯುಗಾದಿ ಹಬ್ಬಕ್ಕೆ ಒಟ್ಟು ಸೇರಿಸಿ 17,500 ರೂಪಾಯಿ ಬೆಲೆಯ ಫ್ರಿಡ್ಜ್ ಖರೀದಿಸಿ ಜನರ ಗಮನ ಸೆಳೆದಿದ್ದಾರೆ.

ಫ್ರಿಡ್ಜ್ ಖರೀದಿಸಿದ ಬಳಿಕ 'ಗೃಹಲಕ್ಷ್ಮೀ ಫಲಾನುಭವಿ' ಎಂದು ಫ್ರಿಡ್ಜ್‌ಗೆ ಲಿಖಿತ ಫಲಕ ಹಾಕಿರುವ ಮಹಿಳೆ. ಮನೆಗೆ ತಂದು ಪೂಜೆ ಸಲ್ಲಿಸಿ ಬಳಕೆ ಮಾಡಿದ್ದಾರೆ. ಗೃಹಲಕ್ಷ್ಮೀ ಹಣ ಯಾವುದಕ್ಕೆ ಸಾಲೋದಿಲ್ಲ ಎಂಬುವವರಿಗೆ ಈ ಮಹಿಳೆ ಗೃಹಲಕ್ಷ್ಮೀ ಹಣ ಕೂಡಿಟ್ಟು ಏನೆಲ್ಲ ಖರೀದಿಸಬಹುದು ಎಂಬುದು ತೋರಿಸಿಕೊಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ