ವಿಷ್ಣುವರ್ಧನ್‌ ಸ್ಮಾರಕಕ್ಕೆ 10 ಗುಂಟೆ ಜಾಗ ಕೊಡಿ: ಸಿಎಂ ಸಿದ್ದರಾಮಯ್ಯಗೆ ಭಾರತಿ ಮನವಿ

Published : Sep 04, 2025, 10:53 AM IST
Bharathi Vishnuvardhan

ಸಾರಾಂಶ

ವಿಷ್ಣುವರ್ಧನ್‌ ಅವರ ಸಮಾಧಿ ಸ್ಥಳದಲ್ಲಿ 10 ಗುಂಟೆ ಜಾಗವನ್ನು ವಿಷ್ಣು ಸ್ಮಾರಕ ನಿರ್ಮಾಣಕ್ಕಾಗಿ ಮೀಸಲಿಡುವಂತೆ ಅವರ ಪತ್ನಿ ನಟಿ ಭಾರತಿ ವಿಷ್ಣುವರ್ಧನ್ ಮತ್ತು ಅಳಿಯ ಅನಿರುದ್ಧ್‌ ವಿಷ್ಣುವರ್ಧನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು (ಸೆ.04): ನಗರದ ಉತ್ತರಹಳ್ಳಿ ರಸ್ತೆಯ ಅಭಿಮಾನ್‌ ಸ್ಟುಡಿಯೋದಲ್ಲಿ ಸಾಹಸಸಿಂಹ ಡಾ.ವಿಷ್ಣುವರ್ಧನ್‌ ಅವರ ಸಮಾಧಿ ಸ್ಥಳದಲ್ಲಿ 10 ಗುಂಟೆ ಜಾಗವನ್ನು ವಿಷ್ಣು ಸ್ಮಾರಕ ನಿರ್ಮಾಣಕ್ಕಾಗಿ ಮೀಸಲಿಡುವಂತೆ ಅವರ ಪತ್ನಿ ನಟಿ ಭಾರತಿ ವಿಷ್ಣುವರ್ಧನ್ ಮತ್ತು ಅಳಿಯ ಅನಿರುದ್ಧ್‌ ವಿಷ್ಣುವರ್ಧನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಅವರು, ಸೆ.18ರಂದು ವಿಷ್ಣುವರ್ಷನ್‌ ಅವರ ಹುಟ್ಟುಹಬ್ಬವಿದೆ. ಅಷ್ಟರೊಳಗೆ 10 ಗುಂಟೆ ಭೂಮಿಯನ್ನು ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಮೀಸಲಿಡಲು ಅನುಮತಿಸಬೇಕು ಎಂದು ಕೋರಿಕೆ ಇಟ್ಟರು.

ಇದೇ ವೇಳೆ, ವಿಷ್ಣುವರ್ಧನ್‌ ಅವರಿಗೆ ‘ಕರ್ನಾಟಕ ರತ್ನ’ ಕೊಡಬೇಕೆಂದು ಕೂಡ ಇದೇ ವೇಳೆ ಮನವಿ ಮಾಡಿದರು. ಈ ವೇಳೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಇದ್ದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತಿ ಅವರು, ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕಾಗಿ ಸರ್ಕಾರದಿಂದ 10 ಗುಂಟೆ ಜಾಗ ಮೀಸಲಿಟ್ಟು ಅಭಿಮಾನಿಗಳು ಅಲ್ಲಿಗೆ ಬಂದು ವಿಷ್ಣು ಸಮಾಧಿಗೆ ನಮಸ್ಕಾರ ಮಾಡಿಕೊಂಡು ಹೋಗಲು ಅವಕಾಶ ನೀಡುವಂತೆ ಮನವಿ ಮಾಡಿದ್ದೇವೆ. ಇದು ವಿಷ್ಣು ಅಭಿಮಾನಿಗಳ ಆಸೆ ಹಾಗೂ ಕೋರಿಕೆಯಾಗಿದೆ. ಆದಷ್ಟು ಇದು ಸೆ.18ರ ಒಳಗೆ ಈ ಕುರಿತು ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಅವರಲ್ಲಿ ಮನಿವ ಮಾಡಿದ್ದೇವೆ. ಅವರು ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ ಎಂದರು.

ನಟ ಅನಿರುದ್ಧ್‌ ಮಾತನಾಡಿ, ವಿಷ್ಣುವರ್ಷನ್‌ ಅವರ ಸಮಾಧಿ ಸ್ಥಳದಲ್ಲಿ ಈ ಹಿಂದೆ ನಾವೇ ಮಂಟಪ ಕಟ್ಟಿದ್ದೆವು. ಆ ಜಾಗದ ವಿವಾದ ಆದ ಬಳಿಕ ಅದನ್ನು ಕೆಡವಲಾಗಿದೆ. ಸರ್ಕಾರ ಜಾಗ ನೀಡಿದರೆ ಮತ್ತೆ ಅಲ್ಲಿ ನಾವೇ ಮಂಟಪ ಕಟ್ಟುತ್ತೇವೆ. ಮುಖ್ಯಮಂತ್ರಿ ಅವರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದರೆ, ಸೆ.18ರೊಳಗೆ ಈ ಜಾಗ ಮೀಸಲಿಡಲು ಕಷ್ಟ ಆಗಬಹುದು. ಅರಣ್ಯ ಇಲಾಖೆಯೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ ಎಂದರು. ಸ್ಥಳದಲ್ಲೇ ಇದ್ದ ಇಲಾಖೆಯ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೇಜ್‌ ಅವರೊಂದಿಗೂ ಮಾತನಾಡಿದ್ದಾರೆ. ಅವರೂ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು ಎಂದು ತಿಳಿಸಿದರು.

ಭೂ ವಿವಾದದ ಹಿನ್ನೆಲೆಯಲ್ಲಿ ಅಭಿಮಾನ್‌ ಸ್ಟುಡಿಯೋದಲ್ಲಿದ್ದ ವಿಷ್ಣು ಸಮಾಧಿ ಧ್ವಂಸಗೊಳಿಸಿದ ಬಳಿಕ ಸರ್ಕಾರ ಈ ಜಾಗ ಅರಣ್ಯ ಇಲಾಖೆಗೆ ಸೇರಿದ್ದಾಗಿದ್ದು ಎಂದು ವಶಕ್ಕೆ ಪಡೆಯಲು ಮುಂದಾಗಿದೆ. ಈ ಜಾಗವನ್ನು 1970ರಲ್ಲಿ ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ ವರ್ಗಾಯಿಸಿ ನಟ ಬಾಲಣ್ಣ ಅವರ ಕುಟುಂಬಕ್ಕೆ ಅಭಿಮಾನ್‌ ಸ್ಟುಡಿಯೋ ನಿರ್ಮಾಣಕ್ಕೆ ಗುತ್ತಿಗೆ ನೀಡಲಾಗಿತ್ತು. ಆದರೆ, ಗುತ್ತಿಗೆ ನಿಯಮಾವಳಿ ಉಲ್ಲಂಘಿಸಿ ಈಗಾಗಲೇ 10 ಎಕರೆ ಮಾರಾಟ ಮಾಡಿದ್ದಾರೆ. ಉಳಿದ 10 ಎಕರೆಯನ್ನು ಮಾರಾಟ ಮಾಡಲು ಹಣ ಪಡೆದಿರುವ ಆರೋಪದ ಮೇಲೆ ಗುತ್ತಿಗೆ ರದ್ದು ಮಾಡಿ ವಶಕ್ಕೆ ಪಡೆಯಲು ಮುಂದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್