
ಕೊಪ್ಪಳ (ಡಿ.21): ಈಗಾಗಲೇ ಅನೇಕ ಕಾರಣಗಳಿಂದ ವಿವಿಧ ರಾಜ್ಯಗಳು ತೊಂದರೆಯಲ್ಲಿವೆ. ಆದರೂ ನಮ್ಮ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರಿಗೆ ಹಣ ಕೊಡುತ್ತಿದ್ದೇವೆ ಎಂದು ಹೇಳುವ ಮೂಲಕ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರು ಪರೋಕ್ಷವಾಗಿ ರಾಜ್ಯ ಸರ್ಕಾರ ಅರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂಬ ಸುಳಿವು ನೀಡಿದ್ದಾರೆ.
ನರೆಗಾ ಯೋಜನೆಯಲ್ಲಿ ಗಾಂಧೀಜಿ ಹೆಸರನ್ನು ಕೈಬಿಟ್ಟಿರುವ ಕುರಿತು ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸ್ವತಃ ತಮ್ಮ ಶ್ರೀಮತಿಗೆ ರಕ್ಷಣೆ ನೀಡದ ಪ್ರಧಾನಿ ನರೇಂದ್ರ ಮೋದಿಗೆ ರಾಮನ ಹೆಸರು ಹೇಳಲು ನೈತಿಕತೆ ಇದೇಯಾ? ರಾಮ ಬಯಸಿದ್ದು ಜಾತಿ, ವರ್ಗ ರಹಿತ ಸಮಾಜ. ಆದರೆ, ಮೋದಿ ಆ್ಯಂಡ್ ಟೀಂ ರಾಮನ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಪ್ರಧಾನಿ ವಿರುದ್ಧ ವೈಯಕ್ತಿಕ ಟೀಕೆ ಮಾಡಿದರು.
ಗಾಂಧೀಜಿ ಹೆಸರಿನಲ್ಲಿದ್ದ ಉದ್ಯೋಗಖಾತ್ರಿ ಯೋಜನೆಗೆ ‘ಜಿ ರಾಮ್ ಜಿ’ ಮರುನಾಮಕರಣ ಮಾಡಿ ಗಾಂಧೀಜಿಗೆ ಅಪಮಾನ ಮಾಡಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇಂದ್ರ ಸರ್ಕಾರ ತನಿಖಾ ಏಜೆನ್ಸಿ ದುರ್ಬಳಕೆ ಮಾಡಿಕೊಂಡಿದ್ದು, ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಉಗ್ರಪ್ಪ ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ