ಮಠ, ದೇವಾಲಯಗಳ ಆಸ್ತೀಲೂ ವಕ್ಫ್‌ ಹೆಸರು: ಸೋಮೇಶ್ವರ, ಬೀರೇಶ್ವರ ದೇಗುಲಕ್ಕೂ ಸಂಕಷ್ಟ

Published : Oct 30, 2024, 06:29 AM IST
ಮಠ, ದೇವಾಲಯಗಳ ಆಸ್ತೀಲೂ ವಕ್ಫ್‌ ಹೆಸರು: ಸೋಮೇಶ್ವರ, ಬೀರೇಶ್ವರ ದೇಗುಲಕ್ಕೂ ಸಂಕಷ್ಟ

ಸಾರಾಂಶ

ವಿಜಯಪುರ ಜಿಲ್ಲೆ ಸಿಂದಗಿಯ ವಿರಕ್ತಮಠದ 1.20 ಎಕರೆ ಭೂಮಿ ವಕ್ಫ್‌ ಬೋರ್ಡ್ ಹೆಸರಿಗೆ ಸೇರಿರುವ ವಿಚಾರ ಬೆಳಕಿಗೆ ಬಂದಿದೆ. ಇದೇ ವೇಳೆ, ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಪಡಗಾನೂರು ಗ್ರಾಮದಲ್ಲಿರುವ ಚಾಲುಕ್ಯರ ಕಾಲದ ಸೋಮೇಶ್ವರ ದೇವಸ್ಥಾನಕ್ಕೆ ವಕ್ಫ್‌ ಮಂಡಳಿ ಈ ಆಸ್ತಿ ತಮ್ಮದು ಎಂದು ನೋಟಿಸ್‌ ನೀಡಿದೆ. 

ವಿಜಯಪುರ/ಕಲಬುರಗಿ (ಅ.30): ವಿಜಯಪುರ ಜಿಲ್ಲೆ ಸಿಂದಗಿಯ ವಿರಕ್ತಮಠದ 1.20 ಎಕರೆ ಭೂಮಿ ವಕ್ಫ್‌ ಬೋರ್ಡ್ ಹೆಸರಿಗೆ ಸೇರಿರುವ ವಿಚಾರ ಬೆಳಕಿಗೆ ಬಂದಿದೆ. ಇದೇ ವೇಳೆ, ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಪಡಗಾನೂರು ಗ್ರಾಮದಲ್ಲಿರುವ ಚಾಲುಕ್ಯರ ಕಾಲದ ಸೋಮೇಶ್ವರ ದೇವಸ್ಥಾನಕ್ಕೆ ವಕ್ಫ್‌ ಮಂಡಳಿ ಈ ಆಸ್ತಿ ತಮ್ಮದು ಎಂದು ನೋಟಿಸ್‌ ನೀಡಿದೆ. ದೇಗುಲಕ್ಕೆ 1.13 ಎಕರೆ ಜಾಗವಿದೆ. ಇನ್ನು, ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಸಾವಳೇಶ್ವರ ದೇವಸ್ಥಾನದ ಕುರುಬ ಸಮಾಜದ ಬೀರದೇವರ ಗುಡಿಯ ಪಹಣಿಯಲ್ಲೂ ಇದು ವಕ್ಫ್‌ ಆಸ್ತಿ ಎಂದು ನಮೂದಾಗಿದೆ.

41 ಪಹಣಿಯಲ್ಲಿ ವಕ್ಫ್‌ ಹೆಸರು ಡಿಲೀಟ್: ವಕ್ಫ್‌ ಆಸ್ತಿಗೆ ಆಗಿರುವ ಒತ್ತುವರಿಯನ್ನು ತೆರವುಗೊಳಿಸಬೇಕು. ಜೊತೆಗೆ ಇಂದೀಕರಣ ಪೂರ್ಣಗೊಳಿಸಬೇಕೆಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು ಹೇಳಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್‌ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹತ್ತು ವರ್ಷಗಳಿಂದಲೂ ಪ್ರತಿ ವರ್ಷ ಇಂದೀಕರಣ ಆಗುತ್ತಾ ಬಂದಿದೆ. ಕೆಲವು ಕಡೆ ನೋಟಿಸ್ ನೀಡದೆ ಇಂದೀಕರಣ ಆಗಿರುವ ಪ್ರಕರಣಗಳು ಸಹ ಇವೆ. ಈಗ ಬಹಳಷ್ಟು ಪ್ರಕರಣಗಳು ಕಂದಾಯ ಇಲಾಖೆಗೆ ಬಂದು ಭೂ ನ್ಯಾಯ ಮಂಡಳಿಯಿಂದ ನಮಗೆ ವಕ್ಫ್‌ ಆಸ್ತಿ ಬಂದಿದೆ ಎಂದು ಮೇಲ್ಮನವಿ ಬರುತ್ತವೆ. ಅದಕ್ಕೆ ಭೂ ನ್ಯಾಯ ಮಂಡಳಿಯಿಂದ ಬಂದಿರುವ ದಾಖಲೆಗಳಿವೆ.

ಇನ್ನು ಕೆಲವು ಮೊದಲಿನಿಂದಲೂ ರೈತರ ಸ್ವಾಧೀನದಲ್ಲೇ ಇರುವ ಕುರಿತು ಕಂಡುಬರುತ್ತವೆ. ಈಗ ಸತ್ಯಾಂಶವನ್ನು ತಿಳಿಯಲು 124 ಆಸ್ತಿಗಳಿಗೆ ಸಂಬಂಧಿಸಿದಂತೆ 433 ರೈತರು, ಕೆಲವು ವ್ಯಕ್ತಿಗಳಿಗೆ ತಿಳುವಳಿಕೆ ನೋಟಿಸ್ ನೀಡಲಾಗಿದೆ. ಗೆಜೆಟ್‌ನಲ್ಲಿ ವಕ್ಫ್‌ ಆಸ್ತಿ ಎಂದು ಆಗಿರುವ ಕುರಿತು ದಾಖಲೆ ನೀಡಬೇಕು ಎಂದು ವಕ್ಫ್‌ ಅಧಿಕಾರಿಗಳಿಗೂ ಹಾಗೂ ತಮ್ಮ ಜಮೀನು ಎಂಬುದಕ್ಕೆ ದಾಖಲೆ ಒದಗಿಸಬೇಕು ಎಂದು ರೈತರಿಗೂ ನೋಟಿಸ್ ಕೊಡಲಾಗಿದೆ ಎಂದು ಹೇಳಿದರು.

ದೇಶದಲ್ಲಿ ಒಂದೇ ವರ್ಷ 2 ಲಕ್ಷ ಕಿರಾಣಿ ಅಂಗಡಿ ಬಂದ್‌: ಅಧ್ಯಯನದಲ್ಲಿ ಬೆಳಕಿಗೆ!

ಇದರಲ್ಲಿ 44 ಆಸ್ತಿಗಳಲ್ಲಿ ಕಾಲಂ 11ರಲ್ಲಿ ನೋಂದಣಿಯಾಗಿದ್ದು, ಅವುಗಳು ತಕ್ಷಣವೇ ಹಕ್ಕು ಬದಲಾವಣೆ ಆಗುವುದಿಲ್ಲ. ಆದಾಗಿಯೂ ನೋಟಿಸ್‌ ಕೊಡದೆ 41 ಪಹಣಿಯಲ್ಲಿ ಕರ್ನಾಟಕ ವಕ್ಫ್‌ ಬೋರ್ಡ್ ಇಂದೀಕರಣ ಮಾಡಲಾಗಿತ್ತು. ತಕ್ಷಣವೇ ನಾವು ರೈತರಿಂದ ಮೇಲ್ಮನವಿ ಪಡೆದು ಕಾಲಂ 11ರಲ್ಲಿ ಇಂದೀಕರಣ ಆಗಿರುವುದನ್ನು ತೆಗೆದು ಹಾಕಿದ್ದೇವೆ. ಅವರ ಪಹಣಿಯಲ್ಲಿ ಕಾಲಂ 11ರಲ್ಲಿ ಕರ್ನಾಟಕ ವಕ್ಫ್‌ ಬೋರ್ಡ್ ಎಂದು ಇಲ್ಲ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್