
ಉಡುಪಿ (ಫೆ.22): ಕ್ರಿಶ್ಚಿಯನ್ ಧರ್ಮ ಪ್ರಚಾರಕ್ಕೆ ಬಂದಿದ್ದ ಇಬ್ಬರು ಮಹಿಳೆಯರನ್ನ ಸ್ಥಳೀಯರು ಅಟ್ಟಾಡಿಸಿಕೊಂಡು ಹೋದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆಯಲ್ಲಿ ನಡೆದಿದೆ.
ಧರ್ಮ ಪ್ರಚಾರ ಮಾಡಲು ಉಪ್ಪಿನಕೋಟೆಗೆ ಬಂದಿದ್ದ ಇಬ್ಬರು ಮಹಿಳೆಯರು. ಸ್ಥಳೀಯರಿಗೆ ಕ್ರಿಶ್ಚಿಯನ್ ಮತದ ಬಗ್ಗೆ ಪ್ರಚಾರ ಮಾಡಲು ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯ ವ್ಯಕ್ತಿಯೊಬ್ಬ, ಮತಾಂತರ ಮಾಡಲು ಬಂದಿದ್ದೀರ ಎಂದು ಪ್ರಶ್ನಿಸಿದ್ದಾನೆ. ಮಹಿಳೆಯರ ಕೈಯಲ್ಲಿ ಪ್ರಚಾರದ ಪುಸ್ತಕಗಳಿರುವುದು ಕಂಡು ಆಕ್ರೋಶವ್ಯಕ್ತಪಡಿಸಿರುವ ಸ್ಥಳೀಯ ವ್ಯಕ್ತಿ, ದೊಣ್ಣೆ ಹಿಡಿದು ಇಲ್ಲಿಂದ ಹೊರ ನಡೆತಿರೋ ದೊಣ್ಣೆಯಿಂದ ಬಾರಿಸಲೋ ಎಂದು ಅವಾಜ್ ಹಾಕಿದ್ದಾನೆ. ಇನ್ನೊಮ್ಮೆ ಈ ಭಾಗಕ್ಕೆ ಬಾರದಂತೆ ಗದರಿಸಿ ಓಡಿಸಿದ್ದಾನೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದೆ.
ಅಂಗನವಾಡಿ ಕಾರ್ಯಕರ್ತೆಯಿಂದಲೇ ಮತಾಂತರ: 'ಮತಾಂತರ ನನ್ನಿಷ್ಟ' ಎಂದ ಮಹಿಳೆ ಅಧಿಕಾರಿಗಳ ಮುಂದೆ ಹೈಡ್ರಾಮಾ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ