'ಗಾಂಧೀಜಿ ಕೊಂದ RSS ಶಿಬಿರದಲ್ಲಿ ಪ್ರಣಬ್ ಭಾಷಣ ಮಾಡಿದ್ದು ನನಗೆ ಯಕ್ಷ ಪ್ರಶ್ನೆ'

By Suvarna NewsFirst Published Sep 1, 2020, 1:45 PM IST
Highlights

RSS ವಿರುದ್ಧ ಸಿದ್ದರಾಮಯ್ಯ ಕಿಡಿ| ಆರ್‌ಎಸ್‌ಎಸ್‌ ಕೋಮುವಾದಿ ಸಮಘಟನೆ| ಇಂತಹ ಸಂಘಟನೆ ನಡೆಸಿದ್ದ ಶಿಬಿರದಲ್ಲಿ ಮುಖರ್ಜಿ ಭಾಷಣ ಮಾಡಿದ್ದು ಯಕ್ಷ ಪ್ರಶ್ನ

ನವದೆಹಲಿ(ಸೆ.01): ಜಿ ರಾಷ್ಟ್ರಪತಿ ಹಾಗೂ ಭಾರತ ಕಂಡ ಓರ್ವ ಅದ್ಭುತ ರಾಜಕೀಯ ನೇತಾರ ಭಾರತ ರತ್ನ ಪ್ರಣಬ್ ಮುಖರ್ಜಿ ಅಸ್ತಂಗತರಾಗಿದ್ದಾರೆ. ರಾಷ್ಟ್ರಪತಿ ಕೋವಿಂದ್, ಪಿಎಂ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿ ಗಣ್ಯರೆಲ್ಲಾ ಮುಖರ್ಜಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಹೀಗಿರುವಾಗ ಕರ್ನಾಟಕ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಣಬ್ ಮುಖರ್ಜಿ ಕುರಿತು ಮಾತನಾಡುತ್ತಾ ಮಹಾತ್ಮ ಗಾಂಧೀಜಿಯವರನ್ನು ಕೊಂದ ಆರೆಸ್ಸೆಸ್ ಶಿಬಿರಕ್ಕೆ ಹೋಗಿ ಮುಖರ್ಜಿ ಭಾಷಣ ಮಾಡಿದ್ದು ನನಗೆ ಯಕ್ಷ ಪ್ರಶ್ನೆ ಎಂಬ ಹೇಳಿಕೆ ನೀಡಿರುವುದು ಸದ್ಯ ಭಾರೀ ಚರ್ಚೆಗೆ ಗ್ರಾಸವಾಗಿದೆ.

42 ವರ್ಷ ನಮ್ಮಿಬ್ಬರ ಒಡನಾಟ: ಹೈ-ಕ ಸ್ಥಾನಮಾನ ಸಹಿ ಅವರದೇ: ಖರ್ಗೆ

ಪ್ರಣಬ್ ಮುಖರ್ಜಿಯವರ ಕುರಿತು ಮಾತನಾಡುತ್ತಾ 'ರಾಜೀವ್ ಪ್ರಧಾನಿಯಾಗಿದ್ದಾಗ ಪಕ್ಷ ತೊರೆದು ರಾಷ್ಟ್ರೀಯ ಸಮಾಜವಾದಿ ಕಾಂಗ್ರೆಸ್ ಪಾರ್ಟಿ ಕಟ್ಟಿದ್ದರು. ಮುಂದೆ ಪ್ರಣಬ್ ಮುಖರ್ಜಿ ಹಣಕಾಸು ಸಚಿವರಾಗಿದ್ದರು, ಆಗ ಮನಮೋಹನ್ ರಿಸರ್ವ್ ಬ್ಯಾಂಕ್ ಗೌರ್ನರ್ ಆಗಿದ್ದರು. ಇನ್ನು ಮನಮೋಹನ್ ಪ್ರಧಾನಿಯಾಗಿದ್ದಾಗ, ಪ್ರಣಬ್ ಹಣಕಾಸು ಸಚಿವರಾಗಿದ್ದರು. ಹೀಗಿರುವಾಗ ಅವರು RSSಗೆ ಹೋಗಿದ್ದೇ ಯಕ್ಷಪ್ರಶ್ನೆ' ಎಂದಿದ್ದಾರೆ. 

ಪ್ರಣಬ್ ದಾ ನಿಧನ ಹಿನ್ನೆಲೆ, ಬಾಂಗ್ಲಾದಲ್ಲಿ 1 ದಿನ ರಾಷ್ಟ್ರೀಯ ಶೋಕಾಚರಣೆ!

ಆರ್ ಎಸ್ ಎಸ್ ಒಂದು  ಕೋಮುವಾದಿ ಸಂಘಟನೆ. 50 ವರ್ಷ ರಾಜಕಾರಣ ಮಾಡಿದವರು ಅಲ್ಲಿಗೆ ಹೋಗಿ ಭಾಷಣ ಮಾಡ್ತಾರೆ ಅಂದ್ರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಆರೆಸ್ಸೆಸ್ ಶಿಬಿರಕ್ಕೆ ಹೋಗಿ ಪ್ರಣಬ್ ಮುಖರ್ಜಿ ಭಾಷಣ ಮಾಡಿದ್ದು ನನಗೆ ಇಂದಿಗೂ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ ಎಂದಿದ್ದಾರೆ

click me!