ಭಾರೀ ಮಳೆ: ನದಿಗಳ ಮಟ್ಟ ಏರಿಕೆ, ಡ್ಯಾಮ್‌ಗಳಿಗೆ ಭರ್ಜರಿ ನೀರು..!

Published : Jul 09, 2023, 04:00 AM IST
ಭಾರೀ ಮಳೆ: ನದಿಗಳ ಮಟ್ಟ ಏರಿಕೆ, ಡ್ಯಾಮ್‌ಗಳಿಗೆ ಭರ್ಜರಿ ನೀರು..!

ಸಾರಾಂಶ

ಕರಾವಳಿ, ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಿಂದ ತುಂಬಿದ ನದಿಗಳು, ಕಣ್ಮನ ಸೆಳೆಯುತ್ತಿರುವ ಜೋಗ ಜಲಪಾತ

ಬೆಂಗಳೂರು(ಜು.09): ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ.

ಕೊಡಗಿನಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ಗೆ ಶನಿವಾರ ಒಂದೇ ದಿ​ನ​ದಲ್ಲಿ ಎ​ರಡು ಅಡಿ ನೀರು ಹ​ರಿದು ಬಂದಿ​ದ್ದು, ಜಲಾಶಯದ ನೀರಿನ ಮಟ್ಟ82 ಅಡಿಗೆ ಏರಿಕೆಯಾಗಿದೆ. ಮಡಿಕೇರಿ ಸಮೀಪದ ಅಬ್ಬಿ ಜಲಪಾತ ಹಾಗೂ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕೊಲ್ಲಿ ಅಬ್ಬಿಫಾಲ್ಸ್‌, ಶಿವಮೊಗ್ಗ ಜಿಲ್ಲೆ ಜೋಗ ಜಲಪಾತಗಳು ಮೈದುಂಬಿ ಧುಮುಕುತ್ತಿದ್ದು, ಸಾವಿರಾರು ಪ್ರವಾಸಿಗರು ಭೇಟಿ ನೀಡಿ ಜಲಪಾತದ ಸೊಬಗನ್ನು ಕಣ್ತುಂಬಿಸಿಕೊಳ್ಳುತ್ತಿದ್ದಾರೆ. ದ.ಕ.ಜಿಲ್ಲೆಯಲ್ಲಿ ಶನಿವಾರ ಕೂಡ ಕೆಲ ಖಾಸಗಿ ಶಾಲೆಗಳು ರಜೆ ನೀಡಿದ್ದವು.

ಕೊಡಗಿನಲ್ಲಿ ವಿಪರೀತ ಮಳೆ, ಮಡಿಕೇರಿ-ಮೈಸೂರು ನಡುವೆ ಸಂಚಾರ ಸ್ಥಗಿತ

ತುಂಗಾ, ಭದ್ರಾ, ಶರಾವತಿ, ನೇತ್ರಾವತಿ, ಹೇಮಾವತಿ ನದಿಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ1749.35 ಅಡಿ​ಗೆ, ಭದ್ರಾ ಜಲಾಶಯದ ನೀರಿ​ನ ​ಮಟ್ಟ139.8 ಅಡಿ​ಗಳಿಗೆ ಏರಿದೆ. ತುಂಗಾ ಜಲಾಶಯದಿಂದ 17,149 ಕ್ಯುಸೆಕ್‌ ನೀರನ್ನು ನದಿಗೆ ಬಿಡಲಾಗುತ್ತಿದೆ. ಕೊಡಗು, ಕರಾವಳಿ, ಮಲೆನಾಡು ಭಾಗದ ಹಲವೆಡೆ ಗುಡ್ಡ ಕುಸಿತ ಉಂಟಾಗಿದ್ದು, 50ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್‌ ಅವರು ಶನಿವಾರ ಕಡಲ್ಕೊರೆತದ ಸ್ಥಳಗಳಿಗೆ ಭೇಟಿ ನೀಡಿ ವೀಕ್ಷಣೆ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ