ಹಿಂದೂ ಸಮಾಜದ ಪೂಜನೀಯ ಕೋಕ್ತಿ ಕೆರೆಗೆ ಹರಿದು ಬಂದ ರಕ್ತ ಮಿಶ್ರಿತ ನೀರು!

Published : Jun 18, 2024, 11:56 PM ISTUpdated : Jun 19, 2024, 12:29 AM IST
ಹಿಂದೂ ಸಮಾಜದ ಪೂಜನೀಯ ಕೋಕ್ತಿ ಕೆರೆಗೆ ಹರಿದು ಬಂದ ರಕ್ತ ಮಿಶ್ರಿತ ನೀರು!

ಸಾರಾಂಶ

ಹಿಂದೂ ಸಮಾಜದ ಪೂಜನೀಯವಾದ ಕೋಕ್ತಿ ಮಹಾಸತಿ ದೇವಸ್ಥಾನದ ಕೆರೆಗೆ ರಕ್ತ ಮಿಶ್ರಿತ ನೀರು ಹರಿದು ಬಂದ ಘಟನೆ ಭಟ್ಕಳ ಪಟ್ಟಣದಲ್ಲಿ ನಡೆದಿದೆ. ಬಕ್ರೀದ್ ಹಬ್ಬದ ಹಿನ್ನೆಲೆ ಮುಸ್ಲಿಂ ಸಮುದಾಯದವರು ಪ್ರಾಣಿ ವಧೆ ನಡೆಸಿ ರಕ್ತವನ್ನು ಇನ್ನೂ ಸಂಪೂರ್ಣಗೊಳ್ಳದ ಚರಂಡಿಗೆ ಹರಿಸಿದ್ದರಿಂದ ಮಳೆನೀರಿನೊಂದಿಗೆ ಕೆರೆಗೆ ಸೇರಿಕೊಂಡಿದೆ.

ಕಾರವಾರ, ಉತ್ತರಕನ್ನಡ (ಜೂ.18): ಹಿಂದೂ ಸಮಾಜದ ಪೂಜನೀಯವಾದ ಕೋಕ್ತಿ ಮಹಾಸತಿ ದೇವಸ್ಥಾನದ ಕೆರೆಗೆ ರಕ್ತ ಮಿಶ್ರಿತ ನೀರು ಹರಿದು ಬಂದ ಘಟನೆ ಭಟ್ಕಳ ಪಟ್ಟಣದಲ್ಲಿ ನಡೆದಿದೆ.

ನಿನ್ನೆ ನಡೆದ ಬಕ್ರೀದ್ ಹಬ್ಬದ ಹಿನ್ನೆಲೆ ಮುಸ್ಲಿಂ ಸಮುದಾಯದವರು ಪ್ರಾಣಿ ವಧೆ ನಡೆಸಿ ರಕ್ತವನ್ನು ಇನ್ನೂ ಸಂಪೂರ್ಣಗೊಳ್ಳದ ಚರಂಡಿಗೆ ಹರಿಸಿದ್ದಾರೆ. ಬಂದರ್ ರೋಡ್ ಎರಡನೇ ಕ್ರಾಸ್ ಕೋಕ್ತಿ ನಗರದ ಅಕ್ಕಪಕ್ಕದ ಮುಸ್ಲಿಂ ಸಮುದಾಯದ ಮನೆಗಳಿಂದಲೇ ಜಾನುವಾರು, ಕುರಿಯ ರಕ್ತ ಹರಿಸಿದ್ದಾರೆ. ಮಳೆ ಸುರಿದ ಪರಿಣಾಮ ಮಳೆ ನೀರಿನ ಜೊತೆಗೆ ಅಪಾರ ಪ್ರಮಾಣದ ರಕ್ತ ಮಿಶ್ರಿತ ನೀರು ಕೆರೆಗೆ ಸೇರಿಕೊಂಡಿದೆ. ಧಾರ್ಮಿಕ ಕ್ಷೇತ್ರಕ್ಕೆ ಸಂಬಂಧಿಸಿದ ಕೆರೆಗೆ ರಕ್ತ ಮಿಶ್ರಿತ ನೀರು ಕಂಡು ಹಿಂದೂ ಸಮಾಜದವರು ಆಕ್ರೋಶಕ್ಕೆ ಕಾರಣವಾಗಿದೆ.

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಧಾರವಾಡ ಮೂಲದ ಯೋಧ!

ಬಿಗುವಿನ ವಾತಾವರಣ ನಿರ್ಮಾಣವಾಗುವುದನ್ನು ಎಚ್ಚೆತ್ತುಕೊಂಡ ರಕ್ತ ಮಿಶ್ರಿತ ನೀರು ಕೆರೆಗೆ ಹರಿದು ಬರುತ್ತಿರುವ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದ ಕೂಡಲೇ ಎಚ್ಚೆತ್ತ ಅಧಿಕಾರಿಗಳು ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದನ್ನ ತಪ್ಪಿಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪುರಸಭೆ ಅಧಿಕಾರಿಗಳು ಹಾಗೂ ಒಳಚರಂಡಿ ಇಲಾಖೆ ಅಧಿಕಾರಿಗಳು ಕೂಡಲೇ ಪುರಸಭೆ ಸಿಬ್ಬಂದಿ ಮೂಲಕ ರಕ್ತಮಿಶ್ರಿತ ನೀರನ್ನು ಟ್ಯಾಂಕರ್ ಮೂಲಕ ಬೇರೆಡೆ ಸಾಗಿಸಿದ್ದಾರೆ. ಸರಿಯಾಗಿ ವಿಲೇವಾರಿ ಮಾಡದೇ ಈ ರೀತಿ ಚರಂಡಿ ಮೂಲಕ ಹರಿಸಿರುವ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಉತ್ತರ ಕನ್ನಡ: ಅಕ್ರಮವಾಗಿ ಜಾನುವಾರು ಸಾಗಾಟ ಯತ್ನ; ಆರೋಪಿ ಬಂಧನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ