
ಮಂಗಳೂರು (ಸೆ.09): ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ಹಾಗೂ ಸಾಮಾಜಿಕ ರಂಗದ ಸೆಲೆಬ್ರೆಟಿಗಳ ನಾನಾ ವಿಧದ ಪ್ರತಿಮೆಗಳನ್ನು ರಚಿಸುವುದು ಸಾಮಾನ್ಯ. ಆದರೆ ಇಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕವೇ ಮೊದಲಾದ ರಂಗಗಳಲ್ಲಿ ಅಪೂರ್ವ ಸಾಧನೆ ಮಾಡಿದ ಸೆಲೆಬ್ರಿಟಿಯೊಬ್ಬರ ಮೇಣದ ಪ್ರತಿಮೆ ಭಾರಿ ಸದ್ದುಮಾಡುತ್ತಿದೆ. ರಾಜ್ಯಸಭಾ ಸದಸ್ಯ, ಧರ್ಮಸ್ಥಳ ಧರ್ಮಾಧಿಕಾರಿ, ರಾಜರ್ಷಿ ಡಾ.ವೀರೇಂದ್ರ ಹೆಗ್ಗಡೆ ಅವರ ಮೇಣದ ಪ್ರತಿರೂಪವನ್ನು ಬೆಂಗಳೂರಿನ ಭಕ್ತರೊಬ್ಬರು ಸಿದ್ಧಪಡಿಸಿದ್ದು, ಇದರ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
ಬೆಂಗಳೂರಿನ ಭಕ್ತರೊಬ್ಬರ ಕೋರಿಕೆ ಮೇರೆಗೆ ಸುಮಾರು ಒಂದು ವರ್ಷದಿಂದ ಬೆಂಗಳೂರಿನ ಶಿಲ್ಪಿಯೊಬ್ಬರು ಡಾ.ವೀರೇಂದ್ರ ಹೆಗ್ಗಡೆ ಅವರ ಮೇಣದ ಪ್ರತಿರೂಪ ಮೂಡಿಸಲು ಶ್ರಮಿಸಿದ್ದಾರೆ. ಡಾ.ಹೆಗ್ಗಡೆ ಅವರ ಸಾಂಪ್ರದಾಯಿಕ ದಿರಿಸಿನ ಫೋಟೋ ಮುಂದಿಟ್ಟುಕೊಂಡು ಮೇಣದ ಪ್ರತಿಮೆ ರಚಿಸಲಾಗಿದೆ. ಎರಡು ವಾರದ ಹಿಂದೆಯಷ್ಟೆ ಇದು ಅಂತಿಮಗೊಂಡಿದೆ. ಇದನ್ನು ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಡಾ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ವೀಕ್ಷಿಸಿ ಅಚ್ಚರಿ ಹೊಂದಿದ್ದು, ಅಪಾರ ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಚಿತ್ರವೂ ವೈರಲ್ ಆಗಿರುವ ವಿಡಿಯೋದಲ್ಲಿದೆ.
ಮೇಣದ ಎರಕದಲ್ಲಿ ಡಾ.ವೀರೇಂದ್ರ ಹೆಗ್ಗಡೆ ಅವರ ಪ್ರತಿರೂಪವನ್ನು ಅದ್ಭುತವಾಗಿ ಮೂಡಿಸಲಾಗಿದ್ದು, ಇದನ್ನು ವೀಕ್ಷಿಸಿದ ಡಾ.ಹೆಗ್ಗಡೆ ಅವರೇ ಅವಕ್ಕಾಗಿರುವುದು ವಿಡಿಯೋದಲ್ಲಿ ಕಂಡುಬರುತ್ತದೆ. ಮೇಣದ ಪ್ರತಿಮೆಯ ರೂವಾರಿಯ ಭಕ್ತರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಪ್ರತಿಮೆಯನ್ನು ಶೀಘ್ರವೇ ಹಸ್ತಾಂತರಿಸುವ ಬಗ್ಗೆ ಮಾತುಕತೆ ನಡೆಸುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ