ಕೇರಳ ಗುಡ್ಡ ಕುಸಿತ ದುರಂತ ಪ್ರಕರಣ; ಸಂಕಷ್ಟಕ್ಕೆ ಸಿಲುಕಿದ ಕರ್ನಾಟಕದ ಝಾನ್ಸಿರಾಣಿ ಕುಟುಂಬ!

Published : Jul 30, 2024, 08:35 PM ISTUpdated : Jul 31, 2024, 09:18 AM IST
ಕೇರಳ ಗುಡ್ಡ ಕುಸಿತ ದುರಂತ ಪ್ರಕರಣ; ಸಂಕಷ್ಟಕ್ಕೆ ಸಿಲುಕಿದ ಕರ್ನಾಟಕದ ಝಾನ್ಸಿರಾಣಿ ಕುಟುಂಬ!

ಸಾರಾಂಶ

ಕೇರಳ ಗುಡ್ಡ ಕುಸಿತ ದುರಂತ ಪ್ರಕರಣದಲ್ಲಿ ಕರ್ನಾಟಕದ ಝಾನ್ಸಿರಾಣಿ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಗುಡ್ಡ ಕುಸಿತದ ಬಳಿಕ ಅನಿಲ್ ತಾಯಿ ಲೀಲಾವತಿ(55) ಪುತ್ರ ನಿಹಾಲ್(2.5). ನಾಪತ್ತೆಯಾಗಿದ್ದಾರೆ. ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

Wayanad Landslide: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಮಣ್ಣಿನಲ್ಲಿ ಗ್ರಾಮಗಳೇ ಹೂತುಹೋಗಿವೆ. ಸಾವು ನೋವಿನ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿದೆ. ಮಕ್ಕಳು, ವಯಸ್ಕರ ಮೃತದೇಹಗಳು ನದಿಯಲ್ಲಿ ತೇಲುತ್ತಿರುವ ಭೀಕರ ದೃಶ್ಯ ಕಂಡು ದೇಶವೇ ಬೆಚ್ಚಿಬಿದ್ದಿದೆ. ಹಿಂದೆಂದೂ ಈ ರೀತಿಯ ಭೂಕುಸಿತ ಸಂಭವಿಸಿರಲಿಲ್ಲ. ಈ ದುರಂತದಲ್ಲಿ ಕರ್ನಾಟಕದ ಕುಟುಂಬವೊಂದು ನಾಪತ್ತೆಯಾಗಿದೆ.

Wayanad Landslide: ಚಿತ್ರಗಳಲ್ಲಿ ದೇವರನಾಡಿನ ಭೀಕರ ಭೂಕುಸಿತ!

ಹೌದು ಕೇರಳ ಗುಡ್ಡ ಕುಸಿತ ದುರಂತ ಪ್ರಕರಣದಲ್ಲಿ ಕರ್ನಾಟಕದ ಝಾನ್ಸಿರಾಣಿ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿ, ಮೈಸೂರಿನ ಸರಗೂರಿನ ಅನಿಲ್ ಕುಮಾರ್ ಎಂಬುವವರಿಗೆ ಮದುವೆ ಮಾಡಿಕೊಡಲಾಗಿತ್ತು.

 

Wayanad Landslide: ಸಾವಿನ ಸಂಖ್ಯೆ 115ಕ್ಕೆ ಏರಿಕೆ, ಶವಗಳಿಂದ ಆಸ್ಪತ್ರೆಗಳೇ ಭರ್ತಿ!

ಮದುವೆ ಬಳಿಕ ಇಬ್ಬರೂ ಕೇರಳದ ಮುಂಡಕೈಯಲ್ಲಿ ನೆಲೆಸಿದ್ದರು. ಅನಿಲ್, ಪತ್ನಿ ಝಾನ್ಸಿಯೊಂದಿಗೆ ಪುತ್ರ ನಿಹಾಲ್ ಹಾಗೂ ತಂದೆ-ತಾಯಿ ನೆಲೆಸಿದ್ದರು. ಆದರೆ ಗುಡ್ಡ ಕುಸಿತದ ಬಳಿಕ ನಾಪತ್ತೆಯಾಗಿರುವ ಅನಿಲ್ ತಾಯಿ ಲೀಲಾವತಿ(55) ಪುತ್ರ ನಿಹಾಲ್(2.5). ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮತ್ತೊಂದೆಡೆ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅನಿಲ್ ಹಾಗೂ ಪತ್ನಿ ಝಾನ್ಸಿ, ತಂದೆ ದೇವರಾಜು, ಮೂವರೂ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಸದ್ಯ ಮೂವರಿಗೆ ಕೇರಳದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದುರಂತ ಬಳಿಕ ಕುಟುಂಬಸ್ಥರನ್ನು ಕಾಣಲು ಕೇರಳಕ್ಕೆ ತೆರಳಿದ ಝಾನ್ಸಿರಾಣಿ ಕುಟುಂಬಸ್ಥರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ - ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್