ಇಷ್ಟು ದಿನ ಪಟ್ಟ ನೋವು ಫಲ ನೀಡಿದೆ: ಇಸ್ರೋ ಮುಖ್ಯಸ್ಥ ಸೋಮನಾಥ್‌

Published : Aug 24, 2023, 06:23 AM IST
ಇಷ್ಟು ದಿನ ಪಟ್ಟ ನೋವು ಫಲ ನೀಡಿದೆ:  ಇಸ್ರೋ ಮುಖ್ಯಸ್ಥ ಸೋಮನಾಥ್‌

ಸಾರಾಂಶ

ಚಂದ್ರಯಾನ-3 ಯಶಸ್ವಿ ಆಗಿದ್ದಕ್ಕೆ ಹರ್ಷ ವ್ಯಕ್ತಪಡಿಸಿರುವ ಇಸ್ರೋ ಮುಖ್ಯಸ್ಥ ಎಸ್‌. ಸೋಮನಾಥ್‌, ಇದೇ ವೇಳೆ ಈ ಯಾನದ ಯಶಸ್ಸಿಗಾಗಿ ವಿಜ್ಞಾನಿಗಳು ಪಟ್ಟನೋವನ್ನು ಕೂಡ ಜ್ಞಾಪಿಸಿಕೊಂಡು, ಅವರಿಗೆ ಯಾನದ ಯಶಸ್ಸಿನ ಶ್ರೇಯಸ್ಸು ಸಲ್ಲುತ್ತದೆ ಎಂದಿದ್ದಾರೆ.

ಬೆಂಗಳೂರು (ಆ.24): ಚಂದ್ರಯಾನ-3 ಯಶಸ್ವಿ ಆಗಿದ್ದಕ್ಕೆ ಹರ್ಷ ವ್ಯಕ್ತಪಡಿಸಿರುವ ಇಸ್ರೋ ಮುಖ್ಯಸ್ಥ ಎಸ್‌. ಸೋಮನಾಥ್‌, ಇದೇ ವೇಳೆ ಈ ಯಾನದ ಯಶಸ್ಸಿಗಾಗಿ ವಿಜ್ಞಾನಿಗಳು ಪಟ್ಟ ನೋವನ್ನು ಕೂಡ ಜ್ಞಾಪಿಸಿಕೊಂಡು, ಅವರಿಗೆ ಯಾನದ ಯಶಸ್ಸಿನ ಶ್ರೇಯಸ್ಸು ಸಲ್ಲುತ್ತದೆ ಎಂದಿದ್ದಾರೆ. ಇದೇ ವೇಳೆ, ಇಂಥದ್ದೇ ವ್ಯೋಮನೌಕೆಯನ್ನು ಮಂಗಳನ ಅನ್ವೇಷಣೆಗೂ ಹಾರಿ ಬಿಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬುಧವಾರ ಸಂಜೆ ಸುದ್ದಿಗಾರರ ಜತೆ ಮಾತನಾಡಿದ ಸೋಮನಾಥ್‌, ‘ದೇಶದ ಅಂತರಿಕ್ಷ ಕ್ಷೇತ್ರ ಅಭೂತಪೂರ್ವ ಪ್ರಗತಿ ಕಂಡಿದೆ. ಇಂದಿನ ಯಶಸ್ಸು ಹಿಂದೆಂದಿಗಿಂತ ದೊಡ್ಡದಾಗಿದೆ. ಇದು ಭವಿಷ್ಯದ ವ್ಯೋಮಯಾನಕ್ಕೆ ಉತ್ತೇಜನ ನೀಡಿದೆ’ ಎಂದು ಹರ್ಷಿಸಿದರು.

‘ಚಂದ್ರನ ಮೇಲೆ ಮೃದು ಭೂಸ್ಪರ್ಶ ಮಾಡುವುದು ಯಾವುದೇ ದೇಶಕ್ಕೆ ಅಷ್ಟು ಸುಲಭದ ಮಾತಲ್ಲ. ಎಷ್ಟೇ ಮುಂದುವರಿದ ತಂತ್ರಜ್ಞಾನ ಇದ್ದರೂ ಸುಲಭವಲ್ಲ. ಭಾರತ ಈ ಯಶಸ್ಸನ್ನು ಕೇವಲ 2 ಮಿಶನ್‌ಗಳಲ್ಲಿ ಕಂಡಿದೆ. ಚಂದ್ರಯಾನ-2ರಲ್ಲಿ ಕೂದಲೆಳೆ ಅಂತರದಲ್ಲಿ ವಿಫಲವಾದರೂ ಚಂದ್ರಯಾನ-3ರಲ್ಲಿ ಯಶ ಕಂಡಿದ್ದೇವೆ’ ಎಂದರು. ಚಂದ್ರಯಾನ-1, ಚಂದ್ರನ ಕಕ್ಷೆಗೆ ವ್ಯೋಮನೌಕೆಯನ್ನು ಸೇರಿಸುವ ಉದ್ದೇಶ ಮಾತ್ರ ಹೊಂದಿತ್ತು.

ತಿಂಗಳನ ಅಂಗಳದಲ್ಲಿ ಭಾ'ರಥ': ಇಸ್ರೋ ಮುಂದಿನ ಗುರಿ ಸೂರ್ಯ

ಇದೇ ವೇಳೆ, ,‘ಚಂದ್ರಯಾನ ಮಿಶನ್‌ ಯಶಸ್ಸಿಗೆ ಇಸ್ರೋದ ತಲೆಮಾರಿನ ನಾಯಕತ್ವ ಮತ್ತು ಅದರ ವಿಜ್ಞಾನಿಗಳ ಕೊಡುಗೆ ಸಾಕಷ್ಟಿದೆ. ಇದೊಂದು ಹೆಚ್ಚಿನ ಪ್ರಗತಿಯ ಬೃಹತ್‌ ಸಾಧನೆ. ಪ್ರಧಾನಿ ನರೇಂದ್ರ ಮೋದಿಯವರು ನನಗೆ ಕರೆ ಮಾಡಿ, ಇಸ್ರೋದಲ್ಲಿ ನೀವು ಮಾಡಿರುವ ಅದ್ಭುತ ಕಾರ್ಯಕ್ಕಾಗಿ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಶುಭಾಶಯಗಳನ್ನು ತಿಳಿಸಿದರು. ಅವರ ಬೆಂಬಲಕ್ಕೆ ಧನ್ಯವಾದಗಳು’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ