ಕ್ರೀಡಾ ಕ್ಷೇತ್ರದಲ್ಲಿ ಸಮಗ್ರ ಬದಲಾವಣೆಗೆ ಒತ್ತು : ಕೇಂದ್ರ ಕ್ರೀಡಾ ಸಚಿವ ರಿಜಿಜು

Suvarna News   | Asianet News
Published : Feb 21, 2021, 02:18 PM IST
ಕ್ರೀಡಾ ಕ್ಷೇತ್ರದಲ್ಲಿ ಸಮಗ್ರ ಬದಲಾವಣೆಗೆ ಒತ್ತು : ಕೇಂದ್ರ ಕ್ರೀಡಾ ಸಚಿವ ರಿಜಿಜು

ಸಾರಾಂಶ

ಯುವಕರನ್ನು ಹೆಚ್ಚು ಹೊಂದಿರುವ ನಾವು ಒಲಂಪಿಕ್‌ನಲ್ಲಿ ಹೆಚ್ಚು ಮೆಡಲ್‌ಗಳನ್ನು ಗೆಲ್ಲುವತ್ತ ಗಮನ ಹರಿಸಬೇಕು ಎಂದು ಕೇಂದ್ರ ಕ್ರೀಡಾ ಸಚಿವ ಕಿರನ್ ರಿಜಿಜು ಹೇಳಿದರು.

ಶಿವಮೊಗ್ಗ (ಫೆ.21): ಈ ಬಾರಿಯ 2024 ರ ಒಲಿಂಪಿಕ್ ಕ್ರೀಡೆಗಳಲ್ಲಿ ಭಾರತ ಪದಕಗಳನ್ನು ಗೆಲ್ಲಲೇ ಬೇಕಿದೆ. ಪ್ರಪಂಚದಲ್ಲಿ  ಯುವಕರನ್ನು ಹೊಂದಿರುವ ದೇಶ ನಮ್ಮದು ಎಂದು ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜಿಜು ಹೇಳಿದರು. 

ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಒಳಾಂಗಣ ಕ್ರೀಡಾಂಗಣ ನಿರ್ಮಾಣ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಂಡ  ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜೂಜಿ   ಕ್ರೀಡಾ ಚಟುವಟಿಕೆಗಳಲ್ಲಿ ಸಮಗ್ರ ಬದಲಾವಣೆ ತರಬೇಕಿದೆ ಎಂದರು.

ಜಗತ್ತಿನ ಅತಿದೊಡ್ಡ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಕ್ರಿಕೆಟಿಗರು ಫಿದಾ..!

ಇಡಿ ರಾಜ್ಯದಲ್ಲಿ ಶಿವಮೊಗ್ಗವನ್ನು ಕ್ರೀಡಾ ಚಟುವಟಿಕೆಗಳ ಕೇಂದ್ರ ವನ್ನಾಗಿ ರೂಪಿಸಲಾಗುತ್ತದೆ. ಶಿವಮೊಗ್ಗದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅತಿ ಹೆಚ್ಚಿನ ಸಾದನೆ ಮಾಡಬೇಕೆಂದು ಆಶಯ ನಮ್ಮದು.  ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನ ಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಎಂದರು. 

ಇನ್ನು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕ್ರೀಡಾ ಸಚಿವ ನಾರಾಯಣ ಗೌಡ ಮಾತನಾಡಿ ಸಂಸದ ಬಿ ವೈ ರಾಘವೇಂದ್ರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಒಳಾಂಗಣ ಕ್ರೀಡಾಂಗಣ ಕ್ಕೆ ಎರಡು ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!