ಕನ್ನಡ ಸಂಸ್ಕೃತಿ ಇಲಾಖೆಗೆ ಪವರ್, ಪವರ್ ಇಲಾಖೆಗೆ ಸಂಸ್ಕೃತಿ ಬರಬೇಕು: ಸುನೀಲ್ ಕುಮಾರ್

Published : Aug 11, 2021, 11:32 AM ISTUpdated : Aug 11, 2021, 11:55 AM IST
ಕನ್ನಡ ಸಂಸ್ಕೃತಿ ಇಲಾಖೆಗೆ ಪವರ್, ಪವರ್ ಇಲಾಖೆಗೆ ಸಂಸ್ಕೃತಿ ಬರಬೇಕು: ಸುನೀಲ್ ಕುಮಾರ್

ಸಾರಾಂಶ

ಕನ್ನಡ ಭಾಷೆ ಸಂಸ್ಕೃತಿ ಬಗ್ಗೆ ವಿಶೇಷ ಪ್ರೀತಿ ತೋರಿದ್ದೇನೆ ನನ್ನ ಕ್ಷೇತ್ರಕ್ಕೆ ಹೋಗುವಾಗ ಹಾರ ತುರಾಯಿ ಬದಲು ಕನ್ನಡ ಪುಸ್ತಕ ಕೊಡುವಂತೆ ಕೋರಿದ್ದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಯಾವ್ಯಾವ ರೀತಿಯ ಸುಧಾರಣೆ ತರಬೇಕು ಅದರ ಬಗ್ಗೆ ಚರ್ಚೆ ಮಾಡುತ್ತೇನೆ

ಬೆಂಗಳೂರು (ಆ.11):  ಕನ್ನಡ ಭಾಷೆ ಸಂಸ್ಕೃತಿ ಬಗ್ಗೆ ವಿಶೇಷ ಪ್ರೀತಿ ತೋರಿದ್ದೇನೆ. ನನ್ನ ಕ್ಷೇತ್ರಕ್ಕೆ ಹೋಗುವಾಗ ಹಾರ ತುರಾಯಿ ಬದಲು ಕನ್ನಡ ಪುಸ್ತಕ ಕೊಡುವಂತೆ ಕೋರಿದ್ದೆ. ಇದಕ್ಕೆ ಜನರಿಂದ ಒಳ್ಳೆಯ ಪ್ರತಿಕ್ರಿಯೆಯೂ ಬಂದಿದೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದರು.

ಬೆಂಗಳೂರಿನಲ್ಲಿಂದು ಮಾತನಾಡಿದ ಸಚಿವ ಸುನೀಲ್ ಕುಮಾರ್ ಮುಖ್ಯಮಂತ್ರಿಗಳು ಜವಬ್ದಾರಿಯನ್ನು ನೀಡಿದ್ದರು. ಕನ್ನಡ ಸಂಸ್ಕೃತಿ ಇಲಾಖೆಯಲ್ಲಿ ಪವರ್ ಬರಬೇಕು. ಪವರ್ ಇಲಾಖೆಯಲ್ಲಿ ಸಂಸ್ಕೃತಿ ಬರಬೇಕು. ಇಲಾಖೆಯಲ್ಲಿ ಯಾವ್ಯಾವ ರೀತಿಯ ಸುಧಾರಣೆ ತರಬೇಕು ಅದರ ಬಗ್ಗೆ ಚರ್ಚೆ ಮಾಡುತ್ತೇನೆ. ದೂರ ದೃಷ್ಟಿ ಚಿಂತನೆಯಿಂದ ಸುಧಾರಣೆ ಮಾಡುತ್ತೇನೆ ಎಂದು ಹೇಳಿದರು.  

ನನ್ನ ನೋಡಲು ಬರುವವರು ಒಂದು ಕನ್ನಡ ಪುಸ್ತಕ ತನ್ನಿ : ಸಚಿವ ಸುನಿಲ್ ಕುಮಾರ್

ನಾನು ಜನರಿಗೂ ಮನವಿ ಮಾಡುತ್ತೇನೆ. ಪ್ರತಿ ನಿತ್ಯ ಒಂದು ಕನ್ನಡ ಪೇಪರ್ ಓದೋಣ, ಕನ್ನಡ ಪುಸ್ತಕ ಓದೋಣ, ಕನ್ನಡ ಚಿತ್ರವನ್ನು ನೋಡೋಣ. ನಮ್ಮ ಸರ್ಕಾರ ಸುಧಾರಣೆಯನ್ನು ತರಲಿದೆ ಎಂದು ಹೇಳಿದರು. 

ಇನ್ನು ಇದೇ ವೇಳೆ ಸಚಿವರು ರವೀಂದ್ರ ಕಲಾಕ್ಷೇತ್ರದಲ್ಲಿ ಇರೋ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಪುಸ್ತಕ ಖರೀದಿ ಮಾಡಿದರು. 3 ಪುಸ್ತಕಗಳನ್ನು ಖರೀದಿ ಮಾಡಿದರು. 

>.ಕನಕಾವಲೋಕನ ಸಂಪುಟ 1
>.ಶಿವರಾಮ ಕಾರಂತರ ಸಾಹಿತ್ಯ ಶ್ರೇಣಿ ಸಂಪುಟ 26
>.ಡಿವಿಜಿ ಕೃತಿ ಶ್ರೇಣಿ ಸಂಪುಟ 11 ಪುಸ್ತಕ ಖರೀದಿ.
 
ಆನಂದ್ ಸಿಂಗ್ ರಾಜೀನಾಮೆ ವಿಚಾರ : ಆನಂದ್ ಸಿಂಗ್ ರಾಜೀನಾಮೇ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯಿಸಿದಲು ನಿರಾಕರಿಸಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

State News Live: ಸಿಎಂ ಡಿಕೆಶಿ ಬರ ವೀಕ್ಷಣೆ ವೈಖರಿಗೆ ಬಿವೈ ವಿಜಯೇಂದ್ರ ಆಕ್ಷೇಪ
Dr ಹಾಗೂ Profಗೆ ಇದೀಗ Tr ಹೊಸ ಸೇರ್ಪಡೆ, ರಾಜ್ಯದ ಶಿಕ್ಷಕರಿಗೆ ಇನ್ನು Tr ವಿಶೇಷಣದ ಗೌರವ