ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ

Kannadaprabha News   | Kannada Prabha
Published : Sep 07, 2025, 06:06 AM IST
CM Siddaramaiah

ಸಾರಾಂಶ

‘ರಾಜಕೀಯ ದುರುದ್ದೇಶದಿಂದ ಬಾನು ಮುಷ್ತಾಕ್‌ ಅವರು ನಾಡಹಬ್ಬ ಉದ್ಘಾಟಿಸುವುದನ್ನು ಬಿಜೆಪಿಯವರು ವಿರೋಧಿಸುತ್ತಿದ್ದಾರೆ. ಸರ್ಕಾರ ರಾಜಕೀಯವಾಗಿ ಉತ್ತರ ನೀಡುವ ಜತೆಗೆ ಕೋರ್ಟಿನಲ್ಲೂ ಪ್ರತ್ಯುತ್ತರ ನೀಡಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

 ವಿಜಯಪುರ :  ‘ರಾಜಕೀಯ ದುರುದ್ದೇಶದಿಂದ ಬಾನು ಮುಷ್ತಾಕ್‌ ಅವರು ನಾಡಹಬ್ಬ ಉದ್ಘಾಟಿಸುವುದನ್ನು ಬಿಜೆಪಿಯವರು ವಿರೋಧಿಸುತ್ತಿದ್ದಾರೆ. ಸರ್ಕಾರ ರಾಜಕೀಯವಾಗಿ ಉತ್ತರ ನೀಡುವ ಜತೆಗೆ ಕೋರ್ಟಿನಲ್ಲೂ ಪ್ರತ್ಯುತ್ತರ ನೀಡಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯ ಮಾಜಿ ಸಂಸದ ಪ್ರತಾಪ ಸಿಂಹ ಅವರು ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆ ಮಾಡುವ ವಿರುದ್ಧ ಕೋರ್ಟಿಗೆ ಹೋಗಿದ್ದನ್ನು ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪಿಸಿದ ಸಿದ್ದರಾಮಯ್ಯ, ‘ಈ ಹಿಂದೆ ಕವಿ ನಿಸಾರ್ ಅಹಮ್ಮದ್‌ ದಸರಾ ಉದ್ಘಾಟನೆಗೆ ಬಂದಾಗ ಏಕೆ ಕೋರ್ಟ್‌ಗೆ ಹೋಗಲಿಲ್ಲ? ಹೈದರಾಲಿ ಟಿಪ್ಪು, ಮಿರ್ಜಾ ಇಸ್ಮಾಯಿಲ್ ಮೆರವಣಿಗೆ ಮಾಡಿದಾಗ ಏಕೆ ವಿರೋಧ ಮಾಡಲಿಲ್ಲ?’ ಎಂದು ಪ್ರಶ್ನಿಸಿದರು. ಅಲ್ಲದೆ, ‘ಅವರಿಗೆ ನಾವು ನ್ಯಾಯಾಲಯದಲ್ಲಿಯೇ ಉತ್ತರ ನೀಡುತ್ತೇವೆ’ ಎಂದು ತಿಳಿಸಿದರು.

‘ಬಾನು ಮುಷ್ತಾಕ್‌ ಅವರು ಕನ್ನಡಾಂಬೆಯ ಬಗ್ಗೆ ಹೀಗಳೆದು ಮಾತನಾಡಿರುವ ಬಗ್ಗೆ ಯಾವ ಪುರಾವೆ ಇಲ್ಲ. ಅವರು ಕನ್ನಡದಲ್ಲಿ ಬರೆದ ಕೃತಿಯ ಅನುವಾದಕ್ಕೆ ಬುಕರ್‌ ಪ್ರಶಸ್ತಿ ಬಂದಿದೆ. ಹೀಗಾಗಿ ಸರ್ಕಾರ ಬಾನು ಮುಷ್ತಾಕ್‌ ಮತ್ತು ಆ ಕೃತಿ ಅನುವಾದಿಸಿದ ದೀಪಾ ಭಸ್ತಿಯವರಿಗೆ ಸನ್ಮಾನಿಸಲಾಗಿದೆ. ಬಾನು ಮುಷ್ತಾಕ್‌ ಕನ್ನಡ ಸಾಹಿತಿ ಆಗಿರುವುದರಿಂದ ದಸರಾ ಉದ್ಘಾಟಿಸಲಿದ್ದಾರೆ’ ಎಂದು ಸ್ಪಷ್ಟಪಡಿಸಿದರು.

ಪ್ರತಾಪ್‌ ಸಿಂಹ ಕೋರ್ಟಿಗೆ ಹೋಗಿದ್ದಕ್ಕೆ ಪ್ರತಿಕ್ರಿಯಿಸಿದ ಸಿಎಂ, ‘ಅವರು ರಾಜಕೀಯಕ್ಕಾಗಿ ಮಾಡುತ್ತಿದ್ದಾರೆ. ನಾವು ಅದನ್ನು ನ್ಯಾಯಾಲಯದಲ್ಲೇ ಹೋರಾಟ ಮಾಡುತ್ತಿದ್ದೇವೆ. ಬಾನು ಮುಷ್ತಾಕ್ ಅವರು ಕನ್ನಡ ರೈಟರ್. ಕನ್ನಡದಲ್ಲೇ ಎದೆಯ ಹಣತೆ ಬರೆದಿದ್ದಾರೆ. ಅದಕ್ಕೆ ಬುಕರ್‌ ಅವಾರ್ಡ್ ಕೂಡ ಬಂದಿದೆ’ ಎಂದರು.

ಸಿಎಂ ತಿರುಗೇಟು

- ಹೈದರಾಲಿ ಟಿಪ್ಪು, ಮಿರ್ಜಾ ಇಸ್ಮಾಯಿಲ್‌ರಿಂದ ಕೂಡ ದಸರೆ ಮೆರವಣಿಗೆ

- ಬಾನು ಮುಷ್ತಾಕ್‌ ಕನ್ನಡಾಂಬೆ ಬಗ್ಗೆ ಹೀಗಳೆದು ಮಾತಾಡಿದ ಸಾಕ್ಷ್ಯ ಇಲ್ಲ

- ಕನ್ನಡದಲ್ಲೇ ಎದೆಯ ಹಣತೆ ಬರೆದಿದ್ದಾರೆ. ಅದಕ್ಕೆ ಬುಕರ್‌ ಪ್ರಶಸ್ತಿ ಬಂದಿದೆ

- ಅದನ್ನು ಪರಿಗಣಿಸಿಯೇ ಅವರಿಂದ ದಸರಾ ಕಾರ್ಯಕ್ರಮ ಉದ್ಘಾಟನೆ

- ಈ ಬಗ್ಗೆ ಕಾನೂನು ಹಾಗೂ ರಾಜಕೀಯ ಮಾರ್ಗದಲ್ಲಿ ಹೋರಾಟ: ಸಿಎಂ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌