4 ದಿನ ರಾಜ್ಯದಲ್ಲಿ ಭಾರೀ ಮಳೆ : ಯಾವ ಜಿಲ್ಲೆಗಳಿಗೆ ಅಲರ್ಟ್..?

Suvarna News   | Asianet News
Published : Jul 18, 2021, 09:32 AM ISTUpdated : Jul 18, 2021, 09:47 AM IST
4 ದಿನ ರಾಜ್ಯದಲ್ಲಿ ಭಾರೀ ಮಳೆ : ಯಾವ ಜಿಲ್ಲೆಗಳಿಗೆ ಅಲರ್ಟ್..?

ಸಾರಾಂಶ

ರಾಜ್ಯದಲ್ಲಿ ಈಗಾಗಲೆ ವರುಣನ ಅಬ್ಬರ ಜೋರಾಗಿದೆ ಇನ್ನು 4 ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ  ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ

ಶಿವಮೊಗ್ಗ (ಜು.18):  ರಾಜ್ಯದಲ್ಲಿ ಈಗಾಗಲೆ ವರುಣನ ಅಬ್ಬರ ಜೋರಾಗಿದೆ.  ಇನ್ನು 4 ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು,  ಜುಲೈ  21ರವರೆಗೆ  ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗ ಕೆಲವೆಡೆ ಗುಡುಗು ಸಹಿತ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.   ಜು.18 ಮತ್ತು 21ರವರೆಗೆ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.  

4 ದಿನ ವ್ಯಾಪಕ ಮಳೆ ಸಾಧ್ಯತೆ : ಮಲೆನಾಡಿಗೆ ಆರೆಂಜ್‌ ಅಲರ್ಟ್‌

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಜುಲೈ 18ರಿಂದ 19ರವರೆಗೆ ಆರೆಂಜ್‌ ಅಲರ್ಟ್‌ ಇದ್ದು, ಜುಲೈ 20 ಮತ್ತು 21ರಂದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. 

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ ಇದ್ದು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಜು.19 ರಂದು  ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಬೆಳಗ್ಗೆಯಿಂದಲೂ ತುಂತುರು ಮಳೆಯಾಗುತ್ತಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ