
ಬೆಂಗಳೂರು: ಅಯ್ಯಯ್ಯಪ್ಪೋ ಏನ್ ಸೆಖೆ? ಕೂರಕ್ಕೆ ಆಗಲ್ಲ, ಹೊರ ಹೋಗಕ್ಕೆ ಅಗಲ್ಲ, ರಾತ್ರಿ ಮಲಗಕ್ಕೆ ಆಗಲ್ಲ... ಇದು ರಾಜ್ಯದ ಯಾವ ಭಾಗಕ್ಕೂ ಹೋದ್ರೂ ಕೇಳಿಬರೋ ಕಾಮನ್ ಡೈಲಾಗ್.
ಆದರೆ ರಾಜ್ಯದ ಕೆಲ ಭಾಗದ ಜನರಿಗೆ ಕೆಲವು ಗಂಟೆಗಳ ಮಟ್ಟಿಗೆ ಸ್ವಲ್ಪ ತಂಪಾಗುವ ಸುದ್ದಿಯೊಂದು ಬಂದಿದೆ. ಕೆಲವು ಕಡೆ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿಯು ಹೇಳಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಘಟಕ, ರಾಜ್ಯದ ದಕ್ಷಿಣ ಮತ್ತು ಆಗ್ನೇಯ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದಿದೆ.
ಮುಂದಿನ 24 ಗಂಟೆಯಲ್ಲಿ ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಮತ್ತು ಚಾಮರಾಜನಗರದಲ್ಲಿ ಲಘು ಅಥವಾ ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ.
ಆದರೆ, ಮೈಸೂರು ಜಿಲ್ಲೆಯ ದಕ್ಷಿಣ ಭಾಗ ಮತ್ತು ಚಾಮರಾಜನಗರದಲ್ಲಿ ಭಾರೀ ಮಳೆಯಾಗಬಹುದು, ಎಂದು ಇಲಾಖೆಯು ಹೇಳಿದೆ.
ಜನವರಿ ಮುಗಿಯುತ್ತಿದ್ದಂತೆ ರಾಜ್ಯಾದ್ಯಂತ ಸೆಖೆ ಆರಂಭವಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉಷ್ಣತೆ ಸರಿಸುಮಾರು 40 ಡಿಗ್ರಿಗಳನ್ನು ಮುಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ