
ಬೆಂಗಳೂರು (ಅ.11): ಕರ್ನಾಟಕ, ಗೋವಾ, ಕರಾವಳಿ ಪ್ರದೇಶದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 6 ದಿನಗಳವರೆಗೆ ರಾಜ್ಯಾದ್ಯಂತ ಎಲ್ಲೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಆಕ್ಟೊಬರ್ 11 ರಿಂದ 14 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಹಾವೇರಿ, ಗದಗ, ಚಿತ್ರದುರ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಗದಗ ದಾವಣಗೆರೆ, ಬಳ್ಳಾರಿ, ರಾಮನಗರದಲ್ಲಿ ಭಾರೀ ಮಳೆಯಾಗಲಿದೆ. ಇನ್ನು ದಕ್ಷಿಣ ಭಾಗದ ಕೆಲವು ಜಿಲ್ಲೆಗಳಲ್ಲಿ ಅಕ್ಟೊಬರ್ 12 ರಂದು ಭಾರೀ ಮಳೆ ಸಾಧ್ಯತೆಯಿದೆ ಎಂದು ತಿಳಿಸಿದೆ.
ಕರ್ನಾಟಕದಲ್ಲಿ ವರುಣನ ಅಬ್ಬರ, ಚಾರ್ಮಾಡಿ ಘಾಟ್ನಲ್ಲಿ ಭೂಕುಸಿತ: ಇನ್ನೂ ನಾಲ್ಕು ದಿನ ಮಳೆ
ಅ.15 ಮತ್ತು 16 ರಂದು ವ್ಯಾಪಕ ಮಳೆ:
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು,ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಅ.11 ರಿಂದ 16 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ