
ಹುಬ್ಬಳ್ಳಿ, (ಏ.25): ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು, ಇದನ್ನು ಮುಂದಿನ ವಾರ ವಿಸ್ತರಣೆ ಮಾಡಬೇಕೋ? ಬೇಡವೋ ಎನ್ನುವ ಬಗ್ಗೆ ಚಿಂತನೆ ನಡೆಸಿದೆ.
ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಸಿಎಂ ಬಿಎಸ್ ಯಡಿಯೂರಪ್ಪ ಅವರು ನಾಳೆ (ಸೋಮವಾರ) ಸಚಿವ ಸಂಪುಟ ಸಭೆ ಕರೆದಿದ್ದಾರೆ. ಆದ್ರೆ, ಸಂಪುಟ ಸಭೆಗೂ ಮುನ್ನವೇ ಸಚಿವ ಜಗದೀಶ್ ಶೆಟ್ಟರ್ ಅವರು ಮುಂದಿನ ವಾರವೂ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರೆಯುತ್ತದೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಮತ್ತಷ್ಟು ಟಫ್ ರೂಲ್ಸ್: ಮುಂಬೈ ಮಾದರಿಯಲ್ಲಿ ಕ್ರಮ!
ಹೌದು...ಇಂದು (ಭಾನುವಾರ) ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ಡೌನ್ ಬಗ್ಗೆಯೂ ಚರ್ಚೆ ನಡೀತಾ ಇದೆ. ನಾಳೆಯ (ಏ.26) ಕ್ಯಾಬಿನೆಟ್ ಸಭೆಯಲ್ಲಿ ಇದು ಚರ್ಚೆ ಆಗಲಿದೆ. ಕ್ಯಾಬಿನೆಟ್ನಲ್ಲಿ ಸಿಎಂ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.
ಇನ್ನು ಅತ್ತ ಬೆಂಗಳೂರಿನಲ್ಲಿ ಮಾತನಾಡಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ವೀಕೆಂಡ್ ಕರ್ಫ್ಯೂ ಮುಂದುವರೆಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಹೇಳಿದ್ದನ್ನು ಇಲ್ಲ ಸ್ಮರಿಸಬಹುದು.
ಮತ್ತೊಂದೆಡೆ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಅವರು ಮುಂಬೈ ಮಾದರಿಯಲ್ಲಿ ಜನತಾ ಕರ್ಫ್ಯೂ ಸುಳಿವು ಕೊಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ