ಬೆಂಗಳೂರು: ತಿಂಗಳಾದರೂ ಆರಂಭವಾಗದ ವೈಟ್‌ಟಾಪಿಂಗ್‌ ಕಾಮಗಾರಿ

Published : Oct 30, 2019, 10:40 AM ISTUpdated : Oct 30, 2019, 10:51 AM IST
ಬೆಂಗಳೂರು: ತಿಂಗಳಾದರೂ ಆರಂಭವಾಗದ ವೈಟ್‌ಟಾಪಿಂಗ್‌ ಕಾಮಗಾರಿ

ಸಾರಾಂಶ

ಪೊಲೀಸ್‌ ಇಲಾಖೆಯ ಅನುಮತಿ ಪಡೆದು ಅರ್ಧಕ್ಕೆ ಸ್ಥಗಿತಗೊಂಡ ವೈಟ್‌ಟಾಪಿಂಗ್‌ ಕಾಮಗಾರಿಯನ್ನು ಚುರುಕುಗೊಳಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ಕುಮಾರ್‌ ಹೇಳಿ ತಿಂಗಳಾಗುತ್ತಾ ಬಂದರೂ, ಕಾಮಗಾರಿ ಮಾತ್ರ ಇನ್ನೂ ಪುನಾರಂಭಗೊಂಡಿಲ್ಲ.

ಬೆಂಗಳೂರು(ಅ.30): ಪೊಲೀಸ್‌ ಇಲಾಖೆಯ ಅನುಮತಿ ಪಡೆದು ಅರ್ಧಕ್ಕೆ ಸ್ಥಗಿತಗೊಂಡ ವೈಟ್‌ಟಾಪಿಂಗ್‌ ಕಾಮಗಾರಿಯನ್ನು ಚುರುಕುಗೊಳಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ಕುಮಾರ್‌ ಹೇಳಿ ತಿಂಗಳಾಗುತ್ತಾ ಬಂದರೂ, ಕಾಮಗಾರಿ ಮಾತ್ರ ಇನ್ನೂ ಪುನಾರಂಭಗೊಂಡಿಲ್ಲ.

ಈಗಾಗಲೇ ನಗರದಲ್ಲಿ ಕೈಗೊಂಡಿರುವ ಮೊದಲ ಮತ್ತು ಎರಡನೇ ಹಂತದ ವೈಟ್‌ ಟಾಪಿಂಗ್‌ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸುವುದಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಅ.9ರಿಂದ ಬಾಕಿ ಉಳಿದಿರುವ ವೈಟ್‌ಟಾಪಿಂಗ್‌ ರಸ್ತೆಗಳ ಕಾಮಗಾರಿಗೆ ಪೊಲೀಸ್‌ ಇಲಾಖೆ ಅನುಮತಿ ನೀಡಲಿದೆ ಎಂದು ಆಯುಕ್ತರು ತಿಂಗಳ ಆರಂಭದಲ್ಲೇ ಹೇಳಿದ್ದರು. ಆದರೆ, ಇಲ್ಲಿಯವರೆಗೆ ಯಾವುದೇ ಕಾಮಗಾರಿ ಚುರುಕು ಪಡೆದುಕೊಂಡಿಲ್ಲ. ವೈಟ್‌ಟಾಪಿಂಗ್‌ ಕಾಮಗಾರಿ ಸ್ಥಗಿತಗೊಂಡ ರಸ್ತೆಗಳಲ್ಲಿ ಟ್ರಾಫಿಕ್‌ ಸಮಸ್ಯೆಮುಂದುವರೆದಿದ್ದು, ಸಾರ್ವಜನಿಕರು ನಿತ್ಯತೊಂದರೆ ಅನುಭವಿಸಬೇಕಾಗಿದೆ.

ಭ್ರಷ್ಟರಿಗೆ ದುಸ್ವಪ್ನವಾಗಿದ್ದ ಮಾಜಿ ಲೋಕಾಯುಕ್ತ ಎನ್.ವೆಂಕಟಾಚಲ ಇನ್ನಿಲ್ಲ

ಈ ಕುರಿತು ಮಂಗಳವಾರ ಪ್ರತಿಕ್ರಿಯೆ ನೀಡಿದ ಆಯುಕ್ತರು, ಸಂಚಾರಿ ಪೊಲೀಸರು ಅರ್ಧಕ್ಕೆ ಸ್ಥಗಿತಗೊಂಡ ವೈಟ್‌ಟಾಪಿಂಗ್‌ ಕಾಮಗಾರಿ ಪೂರ್ಣಗೊಳಿಸುವುದಕ್ಕೆ ಕಳೆದ ಸೋಮವಾರ ಒಪ್ಪಿಗೆ ನೀಡಿದ್ದಾರೆ. ತ್ವರಿತವಾಗಿ ಕಾಮಗಾರಿ ಆರಂಭಿಸುವುದಕ್ಕೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ವರ್ಷದಿಂದ ಕಾಮಗಾರಿ ಸ್ಥಗಿತ

ಒಂದು ವರ್ಷದ ಹಿಂದೆ ಪ್ರಾರಂಭಗೊಂಡ ವೈಟ್‌ಟಾಪಿಂಕ್‌ ಕಾಮಗಾರಿ ಈವರೆಗೂ ಪೂರ್ಣಗೊಂಡಿಲ್ಲ. ಜಲ ಮಂಡಳಿ ಕೊಳವೆ ಅಳವಡಿಕೆ ಕಾಮಗಾರಿ ನಡೆಸುವುದಕ್ಕೆ ಹೊರ ರಾಜ್ಯದವರಿಗೆ ಗುತ್ತಿಗೆ ನೀಡಿದ್ದು, ಕಾಮಗಾರಿಗೆ ಹಣ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಕಾಮಗಾರಿ ನಿಲ್ಲಿಸಲಾಗಿದೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಬಿಬಿಎಂಪಿ ಮತ್ತು ಜಲ ಮಂಡಳಿಯ ಅಧಿಕಾರಿಗಳು ಯಾವುದೇ ಸ್ಪಷ್ಟನೆ ನೀಡುತ್ತಿಲ್ಲ . ಉದ್ದೇಶಪೂರ್ವಕವಾಗಿಯೇ ವೈಟ್‌ಟಾಪಿಂಗ್‌ ಕಾಮಗಾರಿ ವಿಳಂಬ ಮಾಡಲಾಗತ್ತಿದೆ ಎಂದು ವಿಶ್ವೇಶ್ವರಪುರ ವಾರ್ಡ್‌ನ ಸದಸ್ಯೆ ವಾಣಿ. ವಿ. ರಾವ್‌ ಆರೋಪಿಸಿದ್ದಾರೆ.

ಗುತ್ತಲ: ಕರಿಹರಿಯುವ ಮುನ್ನ ಗೌಳಿಗರ ಎಮ್ಮೆಗಳ ಮೆರವಣಿಗೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ