Threat Message To Aaditya Thackeray : ಮಹಾ ಸಿಎಂ ಪುತ್ರನಿಗೆ ಬೆದರಿಕೆ : ಬೆಂಗಳೂರು ವ್ಯಕ್ತಿಯ ಬಂಧನ

Kannadaprabha News   | Asianet News
Published : Dec 24, 2021, 09:16 AM IST
Threat Message To Aaditya Thackeray :  ಮಹಾ ಸಿಎಂ ಪುತ್ರನಿಗೆ ಬೆದರಿಕೆ : ಬೆಂಗಳೂರು ವ್ಯಕ್ತಿಯ ಬಂಧನ

ಸಾರಾಂಶ

 ಮಹಾ ಸಿಎಂ ಪುತ್ರನಿಗೆ ಬೆದರಿಕೆ : ಬೆಂಗಳೂರು ವ್ಯಕ್ತಿಯ ಬಂಧನ  ಬೆಂಗಳೂರಿಗೇ ಬಂದು ಬಂಧಿಸಿದ ಮುಂಬೈ ಪೊಲೀಸ್‌  ಗೌರಿ ಲಂಕೇಶ್‌ ಪ್ರಕರಣಕ್ಕೆ ತಳುಕು ಹಾಕಿದ ಶಿವಸೇನೆ

 ಮುಂಬೈ (ಡಿ.24):   ಕರ್ನಾಟಕ- ಮಹಾರಾಷ್ಟ್ರ (Karnataka - Maharashtra) ನಡುವೆ ಬೆಳಗಾವಿ (Belagavi) ಜಟಾಪಟಿ ನಡೆಯುತ್ತಿರುವ ಸಂದರ್ಭದಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ (Uddhav Thackeray)  ಅವರ ಪುತ್ರ, ಹಾಲಿ ಸಚಿವ ಆದಿತ್ಯ ಠಾಕ್ರೆ ಅವರಿಗೆ ಬೆದರಿಕೆ ಸಂದೇಶ ಕಳುಹಿಸಿದ್ದ ವ್ಯಕ್ತಿಯೊಬ್ಬನನ್ನು ಬೆಂಗಳೂರಿನಲ್ಲಿ (Bengaluru)  ಬಂಧಿಸಲಾಗಿದೆ.  ಜೈಸಿಂಗ್‌ ರಜಪೂತ್‌ ಬಂಧಿತ. ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅಭಿಮಾನಿಯಾದ ಈತ, ಡಿ.8ರಂದು ಮಹಾರಾಷ್ಟ್ರದ (Maharashtra) ಪರಿಸರ ಹಾಗೂ ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಅವರಿಗೆ ಕರೆ ಮಾಡಿದ್ದ. ಅವರು ಕರೆ ಸ್ವೀಕರಿಸಿರಲಿಲ್ಲ. ಬಳಿಕ ಬೆದರಿಕೆಯ ಸಂದೇಶವನ್ನು ಕಳುಹಿಸಿದ್ದ.

ಮೊಬೈಲ್‌ (Mobile)  ಸಂಖ್ಯೆ ಆಧರಿಸಿ ಆತನನ್ನು ಮುಂಬೈ ಅಪರಾಧ ವಿಭಾಗದ ಸೈಬರ್‌ ತಂಡ ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ಬಂಧಿಸಿ ಮುಂಬೈಗೆ ಕರೆ ತಂದಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆತನನ್ನು ಪೊಲೀಸ್‌ ವಶಕ್ಕೆ ಪಡೆಯಲಾಗಿದೆ ಎಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಗೃಹ ಸಚಿವ ದಿಲೀಪ್‌ ವಾಲ್ಸೆ ಪಾಟೀಲ್‌ ತಿಳಿಸಿದರು.

ಈ ನಡುವೆ, ಆದಿತ್ಯ ಅವರಿಗೆ ಬೆದರಿಕೆ ಹಾಕಿದ ಪ್ರಕರಣವನ್ನು ಹಿರಿಯ ಸಾಹಿತಿ ಎಂ.ಎಂ.ಕಲಬುರಗಿ, ಪತ್ರಕರ್ತೆ ಗೌರಿ ಲಂಕೇಶ್‌, ವಿಚಾರವಾದಿಗಳಾದ ಗೋವಿಂದ ಪಾನ್ಸರೆ ಹಾಗೂ ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣಗಳ ಜತೆ ತಳಕು ಹಾಕಲು ಶಿವಸೇನೆ ಶಾಸಕ ಸುನೀಲ್‌ ಪ್ರಭು ಯತ್ನಿಸಿದರು. ಕರ್ನಾಟಕದಲ್ಲಿ ಬಿಜೆಪಿ ಆಳ್ವಿಕೆ ಇದೆ. ಈ ನಾಲ್ವರ ಹತ್ಯೆಗೂ ಕರ್ನಾಟಕ ನಂಟಿತ್ತು. ಈಗ ಆದಿತ್ಯ ಅವರಿಗೆ ಬೆದರಿಕೆ ಹಾಕಿದ ವ್ಯಕ್ತಿಯೂ ಸಿಕ್ಕಿರುವುದೂ ಬೆಂಗಳೂರಿನಲ್ಲೇ. ಇದರ ಹಿಂದೆ ಬೃಹತ್‌ ಸಂಚು ಅಡಗಿದೆಯೇ ಎಂದು ಪ್ರಶ್ನಿಸಿದರು.

ಕೆರಳಿ ಕೆಂಡವಾದ ಶಿವಸೇನೆ :   #BabyPenguin ಈ ಹ್ಯಾಶ್‌ಟ್ಯಾಗ್ ಹಲವರಿಗೆ ಆಶ್ಚರ್ಯ, ಹಲವರಲ್ಲಿ ನಗು, ಇನ್ನು ಕೆಲವರಲ್ಲಿ ಆಕ್ರೋಶ ಸೃಷ್ಟಿಸಿದೆ. ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಬೇಬಿ ಪೆಂಗ್ವಿನ್ ಭಾರಿ ಟ್ರೆಂಡ್ ಆಗಿದೆ. ಇಷ್ಟೇ ಅಲ್ಲ ಕೋಲಾಹಲ ಸೃಷ್ಟಿಸಿದೆ. ಮಹಾರಾಷ್ಟ್ರ ಪ್ರವಾಸೋದ್ಯಮ ಇಲಾಖೆ ಸಚಿವ ಆದಿತ್ಯ ಠಾಕ್ರೆಯನ್ನು ಬೇಬಿ ಪೆಂಗ್ವಿನ್ ಎಂದು ಕರೆಯಲಾಗಿದೆ. ಇಷ್ಟೇ ಅಲ್ಲ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಆಧುನಿಕ ಔರಂಗಜೇಬ್ ಎಂದು ಕರೆಯಲಾಗಿದೆ.

ಟ್ವಿಟರ್‌ನಲ್ಲಿ ಸಮೀತ್ ಥಕ್ಕರ್ ಅನ್ನೋ ವ್ಯಕ್ತಿ ಆದಿತ್ಯ ಠಾಕ್ರೆ ಕಾರ್ಯವನ್ನು ಟೀಕಿಸಲು ಬೇಬಿ ಪೆಂಗ್ವಿನ್ ಹೆಸರನ್ನು ಬಳಸಿಕೊಂಡಿದ್ದಾರೆ. ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಸಮೀತ್ ಟ್ವೀಟ್ ವಿರುದ್ಧ ಕೆಂಡಾಮಂಡಲವಾಗಿರುವ ಶಿವಸೇನಾ ಇದೀಗ ದೂರು ದಾಖಲಿಸಿದೆ. ಶಿವ ಸೇನೆಯ ಯುವ ಸೇನಾ ವಿಭಾಗದ ಧರ್ಮೆಂದ್ರ ಮಿಶ್ರಾ ಅವರು ವಿಪಿ ರೋಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಮೀತ್ ಥಕ್ಕರ್ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಫಾಲೋ ಮಾಡುತ್ತಿರುವ ಸಮೀತ್ ಥಕ್ಕರ್ ಹಲವು ಭಾರಿ ರಾಜಕೀಯ ಮುಖಂಡರ ವಿರುದ್ಧ ಈ ರೀತಿ ಪದ ಬಳಕೆ ಮಾಡಿದ್ದಾರೆ. ಹೀಗಾಗಿ  ದೂರು ನೀಡಿದ್ದೇನೆ ಎಂದು ಧರ್ಮೇಂದ್ರ ಮಿಶ್ರಾ ಹೇಳಿದ್ದಾರೆ.

ಆದಿತ್ಯ ಠಾಕ್ರೆಗೆ ಬೇಬಿ ಪೆಂಗ್ವಿನ್ ಎಂದು ಹೆಸರಿಡಲು ಕಾರಣವೇನು?
ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಮುಂಬೈನ ಮೃಗಾಲಯಕ್ಕೆ ಪೆಂಗ್ವಿನ್ ತರಿಸಿ ಭಾರಿ ವಿವಾದ ಸೃಷ್ಟಿಸಿದ್ದಾರೆ. ಆದಿತ್ಯ ಠಾಕ್ರೆ ಬಹುನಿರೀಕ್ಷಿಯ ಯೋಜನೆಯಡಿ ಮುಂಬೈನ ಬೈಕುಲಾ ಝೂಗೆ ವಿದೇಶದಿಂದ ಪೆಂಗ್ವಿನ್ ತರಿಸಲಾಗಿದೆ. ಪೆಂಗ್ವಿನ್‌ಗಾಗಿ ಕೃತಕ ವಾತಾವಾರಣ ಸೃಷ್ಟಿಸಲಾಗಿದೆ. ಇದಕ್ಕಾಗಿ 2.5 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. 8 ಪೆಂಗ್ವಿನ್‌ ಖರೀದಿ ಮಾಡಿ ಝೂಗೆ ಸೇರಿಲಾಗಿತ್ತು.

ಝೂ ಅಧಿಕಾರಿಗಳು, ತಜ್ಞರು ಇದಕ್ಕೆ ಭಾರಿ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಆದಿತ್ಯ ಠಾಕ್ರೆ ತಮ್ಮ ಕಾರ್ಯಸಾಧಿಸಿದ್ದರು. ಕೃತಕ ವಾತಾವರಣ ನಿರ್ಮಾಣದಿಂದ ಒಂದೇ ವಾರದಲ್ಲಿ ಒಂದು ಪೆಂಗ್ವಿನ್ ಸತ್ತಿತ್ತು. ಇನ್ನು ಎರಡು ವಾರದ ಬಳಿಕ ಪೆಂಗ್ವಿನ್ ಮರಿಯೊಂದು ಸತ್ತಿತ್ತು. ತಂಪಾದ, ಹಿಮದ ವಾತಾರವಣದಲ್ಲಿ ಇರುವ ಪೆಂಗ್ವಿನ್‌ಗಳನ್ನು ಮುಂಬೈನಂತ ಸುಡು ಬಿಲಿಸಿನ ವಾತಾವರಣದಲ್ಲಿ ಬೆಳೆಸುವುದು ಅಸಾಧ್ಯ. ಇಷ್ಟೇ ಅಲ್ಲ ಪೆಂಗ್ವಿನ್ ಆರೈಕೆ ಮಾಡಲು ಝೂನ ಅಧಿಕಾರಿಗಳು ಸರಿಯಾದ ತರಬೇತಿ ಇಲ್ಲ ಎಂದು ತಜ್ಞರು ಹೇಳಿದ್ದರು.

ತಜ್ಞರ ಸಲಹೆ ಧಿಕ್ಕರಿ, ಗೊತ್ತು ಗುರಿ ಇಲ್ಲದ ಕಾರ್ಯಸಾಧನೆಗೆ ಇಳಿದ ಆದಿತ್ಯ ಠಾಕ್ರೆ ವಿರುದ್ಧ ಆಕ್ರೋಶಗಳು ಕೇಳಿ ಬಂದಿತ್ತು. ಇದೇ ಪೆಂಗ್ವಿನ್ ಕತೆಯನ್ನು ಮೂಲವಾಗಿಟ್ಟುಕೊಂಡು ಆದಿತ್ಯ ಠಾಕ್ರೆ ಹಾಗೂ ಸಿಎಂ ಉದ್ಧವ್ ಠಾಕ್ರೆಯನ್ನು ನಿರ್ಧಾರಗಳನ್ನು ಸಮೀತ್ ಥಕ್ಕರ್ ಸಾಮಾಜಿಕ ಜಾಲತಾಣಲ್ಲಿ ಟೀಕಿಸಿದ್ದಾರೆ. 

ದೂರಿನ ಕುರಿತು ಪ್ರತಿಕ್ರಿಯೆ ನೀಡಿರುವ ಸಮೀತ್ ಥಕ್ಕರ್, ನಾನು ಯಾವುದೇ ಆಕ್ಷೇಪಾರ್ಹ ಪದ ಬಳಕೆ ಮಾಡಿಲ್ಲ. ಸರ್ಕಾರದ ತಪ್ಪುಗಳನ್ನು ಟೀಕಿಸುವುದು ಭಾರತೀಯ ಪ್ರಜೆಗಿರುವ ಹಕ್ಕು. ಯಾವುದೇ ಆಕ್ಷೇಪಾರ್ಹ ಪದವಿದ್ದರೆ ಟ್ವಿಟರ್ ಖಾತೆ ಬ್ಲಾಕ್ ಆಗುತ್ತಿತ್ತು. ಟ್ವಿಟರ್ ಯಾಕೆ ಮಾಡಿಲ್ಲ. ಹೀಗಾಗಿ ನಾನು ಯಾವ ಟ್ವೀಟ್ ಕೂಡ ಡೀಲಿಟ್ ಮಾಡುವುದಿಲ್ಲ. ಸದ್ಯ ಲಾಕ್‌ಡೌನ್ ಇರುವ ಕಾರಣ ಪೊಲೀಸ್ ಠಾಣೆಗೆ ಭೇಟಿ ನೀಡಲು ಸಾಧ್ಯವಿಲ್ಲ. ಈ ಕುರಿತು ವಿವರವಾಗಿ ಪೊಲೀಸ್ ಕಮಿಷನರ್‌ಗೆ ಇ ಮೇಲ್ ಮಾಡಿದ್ದೇನೆ ಎಂದು ಸಮೀತ್ ಥಕ್ಕರ್ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ