Karnataka Politics: ಈ ಮೂವರ ಪೈಕಿ ಕರ್ನಾಟಕದ ಮುಂದಿನ ವಿಧಾನಸಭಾ ಸ್ಪೀಕರ್ ಯಾರು?

Kannadaprabha News   | Kannada Prabha
Published : Aug 03, 2026, 08:08 AM IST
who will be next karnataka assembly speaker What did NS Bosaraju say at koppal

ಸಾರಾಂಶ

ವಿಧಾನಸಭೆ ಸ್ಪೀಕರ್ ಹುದ್ದೆಗೆ ಎಚ್.ಕೆ.ಪಾಟೀಲ್, ಬಸವರಾಜ ರಾಯರೆಡ್ಡಿ ಹಾಗೂ ಆರ್.ವಿ.ದೇಶಪಾಂಡೆ ಅವರ ಹೆಸರುಗಳು ಮುಂಚೂಣಿಯಲ್ಲಿವೆ ಎಂದು ಮಾಜಿ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದೇನು? ಮೂವರ ಪೈಕಿ ಯಾರಾಗಲಿದ್ದಾರೆ ಸ್ಪೀಕರ್?

ಕನಕಗಿರಿ(ಆ.3): ವಿಧಾನಸಭೆ ಸ್ಪೀಕರ್‌ಗೆ ಮೂವರ ಹೆಸರು ಮುಂಚೂಣಿಯಲ್ಲಿದ್ದು, ಸರ್ಕಾರ ಎಲ್ಲ ಅಂಶ ಅಳೆದು ತೂಗಿ ಸಭಾಧ್ಯಕ್ಷರ ಹೆಸರನ್ನು ಘೋಷಣೆ ಮಾಡಲಿದೆ ಎಂದು ಮಾಜಿ ಸಚಿವ ಎನ್.ಎಸ್.ಬೋಸರಾಜು(NS Bosaraju) ಸ್ಪಷ್ಟಪಡಿಸಿದ್ದಾರೆ.

ಈ ಮೂವರಲ್ಲಿ ಮುಂದಿನ ಸ್ಪೀಕರ್ ಯಾರು?

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಭಾನುವಾರ ಪತ್ರಕರ್ತರ ಜತೆ ಮಾತನಾಡಿ, ಸ್ಪೀಕರ್ ಹುದ್ದೆಗೆ ಎಚ್.ಕೆ.ಪಾಟೀಲ್, ಬಸವರಾಜ ರಾಯರೆಡ್ಡಿ ಹಾಗೂ ಆರ್.ವಿ.ದೇಶಪಾಂಡೆ ಹೆಸರು ಮುಂಚೂಣಿಯಲ್ಲಿದ್ದು, ಈ ಮೂವರಲ್ಲಿ ಒಬ್ಬರನ್ನು ವಿಧಾನ ಸಭೆಯ ಸಭಾಧ್ಯಕ್ಷರನ್ನಾಗಿ ಆಯ್ಕೆ ಮಾಡುವುದು ನಿಶ್ಚಿತ. ಇದರಲ್ಲಿ ಯಾರು ಸಚಿವರಾಗುತ್ತಾರೋ ಗೊತ್ತಿಲ್ಲ. ಒಬ್ಬರಂತೂ ಸ್ಪೀಕರ್ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ:Karnataka Bandh: ಕಾವೇರಿ ನೀರಿಗಾಗಿ ಮತ್ತೆ ಹೋರಾಟ 13ರಂದು ಕರ್ನಾಟಕ ಬಂದ್ ಫಿಕ್ಸ್, ವಾಪಸ್ ಮಾತೇ ಇಲ್ಲ: ವಾಟಾಳ್

ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದೇನೆ:

ಅಲ್ಲದೇ, ನಾನು ಶಾಸಕನಲ್ಲದಿದ್ದರೂ ಪರಿಷತ್ ಸದಸ್ಯನನ್ನಾಗಿ ಮಾಡಿ ಸಚಿವನಾಗಿ ಮಾಡಿ ರಾಜ್ಯದ ಜನರ ಸೇವೆ ಮಾಡಲು ಹೈಕಮಾಂಡ್‌ ಅವಕಾಶ ಕೊಟ್ಟಿತ್ತು. ನನ್ನ ಅಧಿಕಾರವಧಿಯಲ್ಲಿ ಮಾಡಿದ ಅಭಿವೃದ್ಧಿ, ಜನಸೇವೆ ನನಗೆ ತೃಪ್ತಿ ತಂದಿದೆ. ಸದ್ಯ ಸಚಿವಕಾಂಕ್ಷಿ ನಾನಲ್ಲ. ಸದ್ಯ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Bengaluru: ಜೀವನಾಂಶದ ಒಪ್ಪಂದ ಮುರಿದ ಮಗಳು: ಹೈಕೋರ್ಟ್ ಕೊಟ್ಟ ಮಹತ್ವದ ತೀರ್ಪೇನು?
Karnataka Bandh: ಕಾವೇರಿ ನೀರಿಗಾಗಿ ಮತ್ತೆ ಹೋರಾಟ 13ರಂದು ಕರ್ನಾಟಕ ಬಂದ್ ಫಿಕ್ಸ್, ವಾಪಸ್ ಮಾತೇ ಇಲ್ಲ: ವಾಟಾಳ್