ರಾಮನಗರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು..?

Published : Oct 06, 2018, 09:10 AM IST
ರಾಮನಗರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು..?

ಸಾರಾಂಶ

ಇದೀಗ ರಾಮನಗರ ವಿಧಾನಸಭಾ ಚುನಾವಣಾ ಕಣ ಹೆಚ್ಚು ಹೆಚ್ಚು ರಂಗೇರುತ್ತಿದೆ. ಇದೀಗ ಎಲ್ಲಾ ಪಕ್ಷಗಳಿಂದಲೂ ಕೂಡ ಅಭ್ಯರ್ಥಿಗಳ ಆಯ್ಕೆ ಕುರಿತು ಹೆಚ್ಚಿನ ಚರ್ಚೆ ನಡೆಯುತ್ತಿದ್ದು ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಕಣಕ್ಕಿಳಿಸಬೇಕೋ ಬೇಡವೋ ಎನ್ನುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ. 

ರಾಮನಗರ: ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೋ ಅಥವಾ ಬೇಡವೋ ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಸಂಸದ ಡಿ.ಕೆ. ಸುರೇಶ್‌ ಪ್ರತಿಕ್ರಿಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಂದಾಣಿಕೆ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟದ್ದು. ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ ಇಲ್ಲ. ಚುನಾವಣೆಗಾಗಿಯೇ ಸಿದ್ಧತೆ ಮಾಡಿಕೊಳ್ಳಬೇಕಾಗಿಲ್ಲ. ಕಾಂಗ್ರೆಸ್‌ ಕಾರ್ಯಕರ್ತರ ಪಡೆ ಯಾವಾಗಲೂ ಸಿದ್ಧವಾಗಿರುತ್ತದೆ. ಚುನಾವಣೆ ಘೋಷಣೆಯಾದ ಮೇಲೆ ಬರುತ್ತೇವೆ. ಅಭ್ಯರ್ಥಿ ಸ್ಪರ್ಧೆ ಕುರಿತಂತೆ ಕಾರ್ಯಕರ್ತರೊಂದಿಗೆ ಸೇರಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಪುತ್ರಿ ಶಾಂಭವಿ ಸ್ಪರ್ಧಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸುರೇಶ್‌, ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು. ಹಾಗಾಗಿ ಯಾರು ಬೇಕಾದರೂ ಸ್ಪರ್ಧೆ ಮಾಡಲಿ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್