ಯಾರು ಏನೇ ಹೇಳಿದರೂ ನಾನೇ ರೈತ ಸಂಘದ ಅಧ್ಯಕ್ಷ: ಕೋಡಿಹಳ್ಳಿ

Published : Jun 26, 2022, 07:55 AM IST
ಯಾರು ಏನೇ ಹೇಳಿದರೂ ನಾನೇ ರೈತ ಸಂಘದ ಅಧ್ಯಕ್ಷ: ಕೋಡಿಹಳ್ಳಿ

ಸಾರಾಂಶ

*  ರೈತ ಸಂಘದಲ್ಲಿ ಯಾವುದೇ ಬಿರುಕು ಇಲ್ಲ, ಎಲ್ಲವೂ ಸರಿಯಾಗಿಯೇ ಇದೆ *  ಬೇರೆಯವರು ಸುಳ್ಳು ಹೇಳಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ *  ಪಠ್ಯ ಪುಸ್ತಕ ವಿವಾದ ಬೇಡ 

ಬೆಂಗಳೂರು(ಜೂ.26):  ಭ್ರಷ್ಟಾಚಾರದ ಆರೋಪ ಕೇಳಿ ಬಂದಾಗ ಆ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪು ಸಾಬೀತಾದರೆ ಅವರಿಗೆ ತಕ್ಕ ಶಿಕ್ಷೆ ಆಗಬೇಕು. ನಾನು ತಪ್ಪು ಮಾಡಿದ್ದರೆ ನನಗೂ ಶಿಕ್ಷೆಯಾಗಲಿ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದಾರೆ. 

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತ ಸಂಘದಲ್ಲಿ ಯಾವುದೇ ಬಿರುಕು ಇಲ್ಲ, ಎಲ್ಲವೂ ಸರಿಯಾಗಿಯೇ ಇದೆ. ಯಾರು ಏನು ಹೇಳಿದರೂ ತಾವೇ ರೈತ ಸಂಘದ ಅಧ್ಯಕ್ಷನಾಗಿ ಅಧಿಕಾರದಲ್ಲಿದ್ದೇನೆ. ಬೇರೆಯವರು ಸುಳ್ಳು ಹೇಳಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದರು. ರಾಜಕಾರಣದಲ್ಲಿ ಭ್ರಷ್ಟಾಚಾರ ತುಂಬಿದ್ದು, ಒಂದು ಪಕ್ಷದ ಭ್ರಷ್ಟಾಚಾರಕ್ಕೆ ಪ್ರತಿಯಾಗಿ ಮತ್ತೊಂದು ಪಕ್ಷದ ಭ್ರಷ್ಟಾಚಾರ ತೋರಿಸಿ ಬಾಯಿ ಮುಚ್ಚಿಸುವ ಕೆಲಸವನ್ನು ಎರಡು ಪಕ್ಷದ ನಡುವೆ ನಡೆಯುತ್ತಿದೆ ಎಂದು ಆರೋಪಿಸಿದರು.

ಕೋಡಿಹಳ್ಳಿ ಬಣದ ರೈತರ ಮೇಲೆ ಜೆಡಿಎಸ್‌ನ ಮಸಿ: ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು!

ಸೂಕ್ತ ಬೆಂಬಲ ಬೆಲೆ ನೀಡಿ:

ದೇಶಾದ್ಯಂತ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎಂದು ಘೋಷಿಸಿದ್ದು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಯೋಜನೆಯನ್ನು ಸರಿಯಾಗಿ ಜಾರಿಗೊಳಿಸಿ ರೈತರಿಗೆ ಉಪಯೋಗ ಆಗುವಂತೆ ಹಾಗೂ ತಲುಪುವಂತೆ ಮಾಡಬೇಕು. ಮುಂಗಾರು ಆರಂಭವಾಗಿದ್ದು, ರಾಸಾಯನಿಕ ಗೊಬ್ಬರಗಳ ಬೆಲೆ ಗಗನಕ್ಕೆ ಏರುತ್ತಿರುವುದರಿಮದ ರೈತರು ಕಂಗಾಲಾಗಿದ್ದಾರೆ. ಆದರೆ ಕೃಷಿ ಇಲಾಖೆ ಇತ್ತ ಗಮನ ನೀಡಿಲ್ಲ. ಮತ್ತೊಂದು ಹಾವೇರಿ ಗೋಲಿಬಾರ್‌ ಘಟನೆ ನಡೆಯದ ಹಾಗೇ ನೋಡಿಕೊಳ್ಳಿ ಎಂದು ಮುಖ್ಯಮಂತ್ರಿಗಳಿಗೆ ಕೋಡಿಹಳ್ಳಿ ಚಂದ್ರಶೇಖರ್‌ ವಿನಂತಿಸಿಕೊಂಡರು.

ಪಠ್ಯ ಪುಸ್ತಕ ವಿವಾದ ಬೇಡ :

ಪಠ್ಯ ಪುಸ್ತಕ ಪರಿಷ್ಕರಣೆ ವಾದ ವಿವಾದ ಮಕ್ಕಳ ಮೇಲೆ ಪರಿಣಾಮ ಬೀರುತ್ತಿದೆ. ಇದರಿಂದ ಮಕ್ಕಳ ಭವಿಷ್ಯಕ್ಕೆ ತೊಂದರೆ ಆಗುತ್ತಿದೆ. ಪಠ್ಯ ಪುಸ್ತಕ ಪರಿಷ್ಕರಣೆಯನ್ನು ಸೂಕ್ತ ರೀತಿಯಲ್ಲಿ ಮಾಡಿ ಎಂದು ಅವರು ಹೇಳಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 15 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!