'ನನ್ನ ಹೆಸರು ದೇಶಕ್ಕೇ ಗೊತ್ತಾಗಬೇಕು!'

Published : Jan 23, 2020, 07:32 AM ISTUpdated : Jan 23, 2020, 11:12 AM IST
'ನನ್ನ ಹೆಸರು ದೇಶಕ್ಕೇ ಗೊತ್ತಾಗಬೇಕು!'

ಸಾರಾಂಶ

ನನ್ನ ಹೆಸರು ದೇಶಕ್ಕೇ ಗೊತ್ತಾಗಬೇಕು| ಆರೋಪಿ ಆದಿತ್ಯರಾವ್‌ ತಪ್ಪೊಪ್ಪಿಗೆ ಹೇಳಿಕೆ 

ಬೆಂಗಳೂರು[ಜ.23]: ‘ದೇಶಕ್ಕೆ ನನ್ನ ಹೆಸರು ಗೊತ್ತಾಗಬೇಕು. ಅದಕ್ಕಾಗಿಯೇ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಡಲು ಯೋಜಿಸಿದೆ’ ಎಂದು ಆರೋಪಿ ಆದಿತ್ಯರಾವ್‌ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದ್ದರೂ ಪೊಲೀಸ್‌ ಮೂಲಗಳು ಅದನ್ನು ನಿರಾಕರಿಸಿವೆ.

ಮಂಗಳೂರು ಬಾಂಬ್‌ ಪತ್ತೆ ಪ್ರಕರಣದಲ್ಲಿ ಶರಣಾದ ಆರೋಪಿಯನ್ನು ವಶಕ್ಕೆ ಪಡೆದ ಹಲಸೂರು ಗೇಟ್‌ ಪೊಲೀಸರು, ಬಳಿಕ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು. ಆ ವೇಳೆ ತನ್ನ ಕೃತ್ಯವನ್ನು ಆತ ಸಮರ್ಥಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಕೆಲಸಕ್ಕಿದ್ದ ಹೊಟೇಲ್‌ನಲ್ಲೇ ಬಾಂಬ್‌ ತಯಾರಿಸಿದ್ದನೇ ಆದಿತ್ಯ?

ಆದರೆ ಕೇಂದ್ರ ವಿಭಾಗದ ಡಿಸಿಪಿ ಚೇತನ್‌ ಸಿಂಗ್‌ ರಾಥೋಡ್‌ ಅವರು, ಆರೋಪಿ ತಪ್ಪೊಪ್ಪಿಗೆ ಹೇಳಿಕೆ ನೀಡಿರುವ ಸಂಗತಿಯನ್ನು ಬಲವಾಗಿ ನಿರಾಕರಿಸಿದ್ದಾರೆ.

ಆದಿತ್ಯರಾವ್‌ ವಿರುದ್ಧ ಮಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮ ಸರಹದ್ದಿನಲ್ಲಿ ನಗರದಲ್ಲಿ ಆತ ಪತ್ತೆಯಾಗಿದ್ದರಿಂದ ಸುಪರ್ದಿಗೆ ಪಡೆಲಾಯಿತು. ಬಳಿಕ ಆರೋಪಿಯ ವರ್ಗಾವಣೆ ಪ್ರಕ್ರಿಯೆ ನಡೆಸಿ ಸಂಜೆ ಹೊತ್ತಿಗೆ ಆತನನ್ನು ಮಂಗಳೂರು ಪೊಲೀಸರಿಗೊಪ್ಪಿಸಲಾಗಿದೆ. ನಾವು ತನಿಖೆ ನಡೆಸದ ಕಾರಣ ವಿಚಾರಣೆ ಅಗತ್ಯವಿಲ್ಲ ಎಂದು ಡಿಸಿಪಿ ಸ್ಪಷ್ಟಪಡಿಸಿದರು.

'ಬಾಂಬರ್‌ ಬೆಂಗಳೂರಿಗೆ ಬಂದು ಶರಣಾಗಿದ್ದೇಕೆ? ಇದೊಂದು ನಾಟಕ'

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ