
ಬೆಂಗಳೂರು (ಏ.21): ಹಿಜಾಬ್ ವಿಚಾರದಲ್ಲಿ ಪ್ರತಿಕ್ರಿಯೆ ನೀಡುವಾಗ ಮುಂಚೂಣಿಯಲ್ಲಿದ್ದ ನಮ್ಮ ಪಕ್ಷದ ನಾಯಕರು, ಬ್ರಾಹ್ಮಣರಿಗೆ ಅಪಮಾನವಾದಾಗ ಏಕೆ ಸುಮ್ಮನಿದ್ದಾರೆಂದು ನನಗೆ ಅಚ್ಚರಿಯಾಗುತ್ತಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಶಂಕರ ಗುಹಾ ದ್ವಾರಕಾನಾಥ್ ಸ್ವಪಕ್ಷೀಯರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೀದರ್ ಜಿಲ್ಲೆಯ ಸಿಇಟಿ ಪರೀಕ್ಷಾ ಕೇಂದ್ರವೊಂದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪ್ರಕರಣ ಸಂಬಂಧ ಜಿಲ್ಲಾ ಉಸ್ತುವಾರಿಯೂ ಆದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಪತ್ರ ಬರೆದಿರುವ ಅವರು, ಘಟನೆ ಸಂಬಂಧ ಜಿಲ್ಲಾಧಿಕಾರಿ ವರದಿ ಸಲ್ಲಿಸಿದ್ದರೂ ತಪ್ಪಿತಸ್ಥರ ವಿರುದ್ಧ ಈವರೆಗೂ ಕ್ರಮ ತೆಗೆದುಕೊಳ್ಳದಿರುವುದು ಬೇಸರದ ಸಂಗತಿ. ಇದು ಇಡೀ ರಾಜ್ಯ ಮತ್ತು ದೇಶದ ಬ್ರಾಹ್ಮಣ ಸಮುದಾಯಕ್ಕೆ ಮಾಡಿರುವ ಅವಮಾನ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಬ್ರಾಹ್ಮಣರಿಗೆ ಅಪಮಾನ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಬೇಕೆಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಧಾರವಾಡದಲ್ಲೂ ವಿದ್ಯಾರ್ಥಿ ಜನಿವಾರಕ್ಕೆ ಸಿಬ್ಬಂದಿ ಕತ್ತರಿ! ಕಾಂಗ್ರೆಸ್ ಸರ್ಕಾರದಿಂದಲೇ ವ್ಯವಸ್ಥಿತ ಷಡ್ಯಂತ್ರ?
ನಾನು ಈ ಪತ್ರವನ್ನು ತಮಗೆ ತೀರ ಬೇಸರದಿಂದ ಬರೆಯುತ್ತಿದ್ದೇನೆ. ನಾನು ಬೇರೆ ಜಾತಿ ಧರ್ಮಗಳ ಬಗ್ಗೆ ಮಾತಾಡುವುದು ಸರಿಯಲ್ಲ. ಆದರೆ ಮತ್ಯಾರಿಗೆ ಆದರೂ ಈ ರೀತಿಯ ಘಟನೆ ನಡೆದಿದ್ದರೆ ಸರ್ಕಾರದ ನಿಲುವು ಏನಾಗುತ್ತಿತ್ತು. ಹಿಜಾಬ್ ವಿಷಯದಲ್ಲಿ ನಮ್ಮ ಪಕ್ಷ ಸಾಕಷ್ಟು ಮುಂಚೂಣಿಯಲ್ಲಿತ್ತು. ಆದರೆ ಬ್ರಾಹ್ಮಣರಿಗೆ ಅಪಮಾನವಾದಾಗ ಎಲ್ಲರೂ ಏಕೆ ಸುಮ್ಮನಿದ್ದಾರೆ? ಕೂಡಲೆ ಬೀದರ್ ಜಿಲ್ಲಾಧಿಕಾರಿಗಳಿಗೆ ತಾವು ಆದೇಶ ಕೊಟ್ಟು ಇಂಥ ನೀಚ ಕೆಲಸ ಮಾಡಿದಂತಹ ವ್ಯಕ್ತಿಗೆ ಶಿಕ್ಷೆ ಆಗಬೇಕೆಂದು ತಮ್ಮಲ್ಲಿ ವಿನಂತಿಸುತ್ತೇನೆ. ಅಲ್ಲದೆ, ಈ ವಿಷಯದಲ್ಲಿ ಸರ್ಕಾರದ ನಿಲುವು ಏನೆಂಬುದು ಕೂಡ ಸರಿಯಾಗಿ ನಮಗೆ ತಿಳಿದು ಬಂದಿಲ್ಲ. ಸರ್ಕಾರದ ನಿಲುವನ್ನೂ ತಿಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ: ಪೇಜಾವರ ಶ್ರೀ ಸೇರಿ ನಾಲ್ವರು ಶ್ರೀಗಳು ಏನು ಹೇಳಿದ್ರು?
ಬ್ರಾಹ್ಮಣರಿಗೆ ಯಜ್ಞೋಪವೀತ (ಜನಿವಾರ) ಪರಮ ಪವಿತ್ರವಾದಂತಹ ಒಂದು ವಸ್ತು. ಒಬ್ಬ ಹುಡುಗನಿಗೆ ಗಾಯತ್ರಿ ಮಂತ್ರ ಉಪದೇಶ ಮಾಡಿ ಸಂಸ್ಕಾರ ಕೊಟ್ಟು ಅವನಿಂದ ಸಮಾಜಕ್ಕೆ ಒಳ್ಳೆಯದಾಗಲೆಂದು ಮಾಡುವಂತಹ ಒಂದು ಕ್ರಿಯೆ ಇದು. ಇಂತಹ ಪವಿತ್ರ ವಸ್ತುವನ್ನು ವಿನಾ ಕಾರಣ ತೆಗೆಸಿ ಬೇಕಂತಲೇ ಬ್ರಾಹ್ಮಣರಿಗೆ ಹಾಗೂ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಬೇಕೆಂದು ಮಾಡಿರುವಂತಹ ಕೃತ್ಯಕ್ಕೆ ನಮ್ಮ ಧಿಕ್ಕಾರ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ