
ಅಥಣಿ: ತಾಯಿತನ ಅನ್ನುವುದು ಇಲ್ಲದಿದ್ದರೆ ಯಾವ ಶರಣ, ಸಮಾಜ ಚಿಂತಕ, ಧರ್ಮಗುರುಗಳಾಗಲು ಅಸಾಧ್ಯ.
ಹೀಗಿರುವಾಗ ಮಠಗಳ ಗರ್ಭಗುಡಿಯಲ್ಲಿ ಮಹಿಳೆಯರಿಗೆ ಪ್ರವೇಶ ನಿರ್ಬಂಧ ಏಕೆ ಎಂದು ಹಂಪಿಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಮಲ್ಲಿಕಾ ಘಂಟಿ ಅವರು ಪ್ರಶ್ನಿಸಿದ್ದಾರೆ.
ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಒಂದು ದಿನದ ವಚನ ವರ್ತನಮಾನ ಎಂಬ ವಿಷಯದ ಚಿಂತನ ಸಮಾವೇಶ ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧರ್ಮವೆಂದರೆ ತನ್ನೊಳಗೆ ತಾನು ಜಾಗೃತಿಯ ವೈಚಾರಿಕೆ ಪ್ರಜ್ಞೆಯನ್ನು ಒಳಗು ಬೆಳೆಗಿಸಿ ಕೊಳ್ಳುವುದು. ಅದುವೇ ನಿಜವಾದ ಧರ್ಮ ಎಂದು ವಿಶ್ಲೇಷಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ