ಕಾಫಿನಾಡಲ್ಲಿ ಅರಣ್ಯ ಇಲಾಖೆಯಿಂದ ಎಡವಟ್ಟು; ಅರವಳಿಕೆ ಚುಚ್ಚುಮದ್ದಿಗೆ ಕಾಡಾನೆ ಬಲಿ!

Published : Dec 03, 2023, 10:43 AM IST
ಕಾಫಿನಾಡಲ್ಲಿ ಅರಣ್ಯ ಇಲಾಖೆಯಿಂದ ಎಡವಟ್ಟು; ಅರವಳಿಕೆ ಚುಚ್ಚುಮದ್ದಿಗೆ ಕಾಡಾನೆ ಬಲಿ!

ಸಾರಾಂಶ

ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ನೀಡಿದ್ದ ಅರವಳಿಕೆ ಚುಚ್ಚುಮದ್ದಿ ಕಾಡಾನೆ ಸಾವಿಗೀಡಾದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಭೈರಾಪುರದ ದೊಡ್ಡಗೊಳ್ಳ ಎಂಬಲ್ಲಿ ನಡೆದಿದೆ.

ಚಿಕ್ಕಮಗಳೂರು (ಡಿ.3): ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ನೀಡಿದ್ದ ಅರವಳಿಕೆ ಚುಚ್ಚುಮದ್ದಿ ಕಾಡಾನೆ ಸಾವಿಗೀಡಾದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಭೈರಾಪುರದ ದೊಡ್ಡಗೊಳ್ಳ ಎಂಬಲ್ಲಿ ನಡೆದಿದೆ.

ರಾತ್ರಿಯ‌ ವೇಳೆ ಕಾರ್ಯಚಾರಣೆ, ಅರವಳಿಕೆ ಹೆಚ್ಚಿನ ಪ್ರಮಾಣದಲ್ಲಿ ನೀಡಿದ ಪರಿಣಾಮ ಸಾವು? ಅರಣ್ಯ ಇಲಾಖೆಯ ನಿರ್ಲಕ್ಷ್ಯ, ಅವೈಜ್ಞಾನಿಕ ಕಾಡಾನೆ ಸೆರೆಯಿಂದಾಗ ಸಲಗ ಬಲಿಯಾಗಿದೆ. ಕಾಡಾನೆ ಸಾವಿಗೆ ಅರಣ್ಯ ಇಲಾಖೆ ಅಧಿಕಾರಿಗಳೇ ಹೊಣೆ ಎಂದು ಅರಣ್ಯ ಇಲಾಖೆಯ ವಿರುದ್ಧ ಪರಿಸರವಾದಿಗಳಿಂದ‌‌ ಆಕ್ರೋಶ ವ್ಯಕ್ತವಾಗಿದೆ.

ಗೋವಾದಿಂದ 'ಪುಷ್ಪ' ಸಿನಿಮಾ ಸ್ಟೈಲ್‌ನಲ್ಲಿ ಮದ್ಯ ಸಾಗಾಟ; ಗೂಡ್ಸ್ ವಾಹನ ಜಪ್ತಿ

ಆನೆ ಕಾರ್ಯಪಡೆ ಸಿಬ್ಬಂದಿ ಕಾರ್ತಿಕ ಗೌಡ ಸೇರಿದಂತೆ ಒಂಟಿ ಸಲಗ ದಾಳಿಯಿಂದ ಮೂವರು ಬಲಿಯಾಗಿದ್ದರು. ಕಾಡಾನೆ ಸೆರೆಹಿಡಿಯುವಂತೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ನರಹಂತಕ ಕಾಡಾನೆ ಸೇರಿದಂತೆ ಮೂರು ಕಾಡಾನೆ ಸೆರೆಗೆ ಸರ್ಕಾರ ಆದೇಶ ಮಾಡಿತ್ತು. ಸರ್ಕಾರದ ಆದೇಶದ ಅನ್ವಯ 9 ಸಾಕಾನೆಗಳ ಮೂಲಕ ಮೂಡಿಗೆರೆ ಭಾಗದಲ್ಲಿ ಕಾರ್ಯಚರಣೆ ಅರಣ್ಯಾಧಿಕಾರಿಗಳು. ರಾತ್ರಿ ಕಾರ್ಯಾಚರಣೆ ವೇಳೆ ಕಾಡಾನೆಗೆ ಹೆಚ್ಚಿನ ಪ್ರಮಾಣದಲ್ಲಿ ಚುಚ್ಚುಮದ್ದು ನೀಡಿದ್ದರಿಂದ ಕಾಡಾನೆ ಮೃತಪಟ್ಟಿದೆ ಎಂದು ಆರೋಪಿಸಲಾಗಿದೆ. 

ತಾಯಿಯನ್ನು ನಿಂದಿಸಿದನೆಂದು ಅಜ್ಜನನ್ನೇ ಕೊಂದ ಮೊಮ್ಮಗ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ