ರಾಜ್ಯದ 10 ವರ್ಷದ ಬಾಲಕನ ಚಿತ್ರಕ್ಕೆ ಲಂಡನ್‌ ಪ್ರಶಸ್ತಿ!

Published : Oct 22, 2023, 05:47 AM IST
ರಾಜ್ಯದ 10 ವರ್ಷದ ಬಾಲಕನ ಚಿತ್ರಕ್ಕೆ ಲಂಡನ್‌ ಪ್ರಶಸ್ತಿ!

ಸಾರಾಂಶ

ಲಂಡನ್‌ನ ನ್ಯಾಚುರಲ್‌ ಹಿಸ್ಟರಿ ಮ್ಯೂಸಿಯಂ ಆಯೋಜಿಸುವ ಜಾಗತಿಕ ಅತ್ಯುತ್ತಮ ವನ್ಯಜೀವಿ ಛಾಯಾಚಿತ್ರಗಳ ಪ್ರದರ್ಶನದಲ್ಲಿ ರಾಜ್ಯದ ವಿಹಾನ್‌ ತಾಳ್ಯ ವಿಕಾಸ್‌ಗೆ 10 ವರ್ಷದೊಳಗಿನ ವಿಭಾಗದಲ್ಲಿ 2023ನೇ ಸಾಲಿನ ವನ್ಯಜೀವಿ ಛಾಯಾಗ್ರಾಹಕ ಪ್ರಶಸ್ತಿ ಲಭಿಸಿದೆ

ಬೆಂಗಳೂರು (ಅ.22) : ಲಂಡನ್‌ನ ನ್ಯಾಚುರಲ್‌ ಹಿಸ್ಟರಿ ಮ್ಯೂಸಿಯಂ ಆಯೋಜಿಸುವ ಜಾಗತಿಕ ಅತ್ಯುತ್ತಮ ವನ್ಯಜೀವಿ ಛಾಯಾಚಿತ್ರಗಳ ಪ್ರದರ್ಶನದಲ್ಲಿ ರಾಜ್ಯದ ವಿಹಾನ್‌ ತಾಳ್ಯ ವಿಕಾಸ್‌ಗೆ 10 ವರ್ಷದೊಳಗಿನ ವಿಭಾಗದಲ್ಲಿ 2023ನೇ ಸಾಲಿನ ವನ್ಯಜೀವಿ ಛಾಯಾಗ್ರಾಹಕ ಪ್ರಶಸ್ತಿ ಲಭಿಸಿದೆ.

ಕರ್ನಾಟಕದ ನಲ್ಲೂರಿನ ಪಾರಂಪರಿಕ ಹುಣಸೆ ತೋಪಿನ ಬಳಿಯ ಪುರಾತನ ದೇವಸ್ಥಾನದ ಗೋಡೆ ಮೇಲೆ ಮರದ ಕಾಂಡದ ಜೇಡವು ತನ್ನ ಬೇಟೆ ತಪ್ಪಿಸಿಕೊಳ್ಳದಂತೆ ತಡೆಯುವ ಚಿತ್ರವನ್ನು ಸೆರೆ ಹಿಡಿದಿದ್ದ ವಿಹಾನ್‌ ತಾಳ್ಯ ವಿಕಾಸ್‌ ಲಂಡನ್‌ನ ನ್ಯಾಚುರಲ್‌ ಹಿಸ್ಟರಿ ಮ್ಯೂಸಿಯಂನ ಅತ್ಯುತ್ತಮ ವನ್ಯಜೀವಿ ಛಾಯಾಗ್ರಹಣ ಪ್ರದರ್ಶನಕ್ಕೆ ಕಳುಹಿಸಿದ್ದರು. ಇದೀಗ ಆ ಛಾಯಾಚಿತ್ರಕ್ಕೆ 10 ವರ್ಷದೊಳಗಿನ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ.

ಬಂಡೆ ಮೇಲೆ ಜೊತೆಯಾಗಿ ಫೋಸ್ ಕೊಟ್ಟ ಬ್ಲ್ಯಾಕ್ ಪ್ಯಾಂಥರ್, ಚಿರತೆ: ಅಪರೂಪದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ಸ್ಪರ್ಧೆಯ ಕೆಲವು ವಿವರ:

ಲಂಡನ್‌ನ ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂ ಆಯೋಜಿಸುವ ಜಾಗತಿಕವಾಗಿ ಹೆಸರಾಂತ ಸ್ಪರ್ಧೆಯು ಪ್ರಪಂಚದಾದ್ಯಂತದ ಅತ್ಯುತ್ತಮ ವನ್ಯಜೀವಿ ಛಾಯಾಚಿತ್ರವನ್ನು ಪ್ರದರ್ಶಿಸುತ್ತದೆ. ಜಗತ್ತಿನಾದ್ಯಂತ ಅರ್ಧಕ್ಕಿಂತ ಹೆಚ್ಚು ದೇಶಗಳನ್ನು ಪ್ರತಿನಿಧಿಸುತ್ತದೆ. ಪ್ರತಿ ವರ್ಷ ಸ್ಪರ್ಧೆಗೆ ಸಾವಿರಾರು ಚಿತ್ರಗಳನ್ನು ಪಡೆಯುತ್ತದೆ. ಈ ಪೈಕಿ, ಕೇವಲ 100 ಚಿತ್ರಗಳನ್ನು ಗುರುತಿಸುವಿಕೆ ಮತ್ತು ಪ್ರಶಸ್ತಿಗಳಿಗಾಗಿ ಶಾರ್ಟ್‌ಲಿಸ್ಟ್ ಮಾಡುತ್ತದೆ. ಈ ವರ್ಷದ ಸ್ಪರ್ಧೆಗೆ 95 ದೇಶಗಳಿಂದ 50ಸಾವಿರ ಚಿತ್ರಗಳನ್ನು ಸ್ವೀಕರಿಸಿದೆ.

 

ಇದು ದೇವಭೂಮಿ; ಉತ್ತರಾಖಂಡದ ಈ 10 ದೇವಾಲಯಗಳು ಹಿಂದೂಗಳಿಗೆ ಬಲು ಪವಿತ್ರ

ವರ್ಷದ ವನ್ಯಜೀವಿ ಛಾಯಾಗ್ರಾಹಕ ಸ್ಪರ್ಧೆಯನ್ನು ಮೂಲತಃ ಬಿಬಿಸಿ ಆಯೋಜಿಸಿತ್ತು. 1984ರಿಂದ ನೈಸರ್ಗಿಕ ಇತಿಹಾಸ ವಸ್ತುಸಂಗ್ರಹಾಲಯವು ಈ ಪ್ರತಿಷ್ಠಿತ ಕಾರ್ಯಕ್ರಮವನ್ನು ಆಯೋಜಿಸುವ ಚುಕ್ಕಾಣಿ ಹಿಡಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗಡೀಪಾರು ಸಂಕಷ್ಟದಲ್ಲಿ Mahesh Shetty Timarodi: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರಾರ್ಥನೆ
ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!