ಯಾವ ಶಾಸಕರಾದರೂ 5 ಲಕ್ಷ ತೆಗೆದುಕೊಳ್ತಾರಾ? ಚಂದ್ರು ಲಮಾಣಿ ಪರ ಶ್ರೀರಾಮುಲು ಬ್ಯಾಟಿಂಗ್

Published : Feb 23, 2026, 06:54 AM IST
Chandru Lamani Sriramulu

ಸಾರಾಂಶ

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ಶ್ರೀರಾಮುಲು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರನ್ನು ಮಾತ್ರ ಬಂಧಿಸಿ, ಉಳಿದವರನ್ನು ರಕ್ಷಿಸಲಾಗುತ್ತಿದೆ ಎಂದು ಆರೋಪಿಸಿದರು.

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ ತಮ್ಮ ಸರ್ಕಾರ ಇದೆಯಂದು ಕೆಲವರನ್ನ ಮಾತ್ರ ಅರೆಸ್ಟ್ ಮಾಡಿದ್ದಾರೆ, ಉಳಿದವರನ್ನು ಅರೆಸ್ಟ್ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಒಂದು ವೇಳೆ ಹಿಂದೂ ಕಾರ್ಯಕರ್ತರನ್ನು ಬಂಧಿಸಲು ಮುಂದಾದರೆ ನಾವು ಸುಮ್ಮನಿರಲ್ಲ, ಬೀದಿಗಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಮುಲು, ಸರ್ಕಾರ ಕತ್ತೆ ಕಾಯ್ತಿದೆಯಾ? ರಾಜ್ಯದಲ್ಲಿ ಲಾ ಅಂಡ್ ಅರ್ಡರ್ ಫೇಲ್ ಆಗಿದೆ. ಗೃಹ ಮಂತ್ರಿಗಳು ಏನೂ ಗೊತ್ತಿಲ್ಲ ಅಂತಾರೆ. ಈ ಸರ್ಕಾರ ಬಂದ್ಮೇಲೆ ಗಬ್ಬೆದ್ದು ಹೋಗಿದೆ ಎಂದು ಹರಿಹಾಯ್ದರು.

ರಕ್ತ ಸುರಿದರೂ ಅವರು ಕಲ್ಲು ತೂರಾಟ ಒಪ್ಪಿಕೊಳ್ತಿಲ್ಲ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ನೇರವಾಗಿ ಕಲ್ಲು, ಚಪ್ಪಲ್ಲಿ ತೂರಿದ್ದಾರೆ, ಹಿಂದೂ ಕಾರ್ಯಕರ್ತರು ಘೋಷಣೆ ಹಾಕುತ್ತ ಹೋಗುತ್ತಿದ್ದರೆ ಕಲ್ಲು, ಚಪ್ಪಲಿ ಎಸೆದಿದ್ದಾರೆ. ಕಲ್ಲು ಎಸ್.ಪಿ ಅವರಿಗೂ ಬಿದ್ದಿದೆ, ರಕ್ತ ಸುರಿದ್ದ್ದರೂ ಅವರು ಕಲ್ಲು ತೂರಾಟ ಒಪ್ಪಿಕೊಳ್ತಿಲ್ಲ, ಇಲ್ಲ ಒಂದು ಕಲ್ಲು ಬಿದ್ದಿದೆ, ನನಗೇನು ಆಗಿಲ್ಲ ಅಂತಾರೆ, ಧರ್ಮದಲ್ಲೇ ಶಿವಾಜಿ ಮಹಾರಾಜರ ಹೆಸರು ಇದೆ. ಕ್ಷುಲ್ಲಕ ಕಾರಣದಿಂದ ಅವರು ಕಲ್ಲು ತೂರಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಗೌಡ, ಎಚ್‌ಡಿಕೆ ಜಾತಿವಾದಿಗಳಲ್ಲ, ಕುಟುಂಬವಾದಿಗಳು : ಸಿದ್ದರಾಮಯ್ಯ ತರಾಟೆ

ಕಿಡಿಗೇಡಿಗಳ ಬಂಧನ ಆಗಬೇಕು, ಜೈಲಿಗೆ ಹಾಕಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಸರ್ಕಾರ ದ್ವೇಷ ಹರಡುವವರ ಪರ ಇದೆ.ಈ ಬಗ್ಗೆ ನಾವು ಸೀರಿಯಸ್ ಆಗಿದ್ದೇವೆ. ಕಲ್ಲು ಎಸೆದ ತನ್ವೀರ್ ನಿಗೆ ಶಿಕ್ಷೆ ಆಗಬೇಕು, ಅವರನ್ನು ಬಿಟ್ಟು ನಮ್ಮ ಯುವಕರನ್ನು ಅರೆಸ್ಟ್ ಯಾಕೆ ಮಾಡ್ತೀರಿ ಎಂದು ಪ್ರಶ್ನಿಸಿದ ಶ್ರೀರಾಮುಲು ಹಿಂದೂ ಕಾರ್ಯಕರ್ತರನ್ನು ಬಂಧಿಸಲು ಮುಂದಾದರೆ ನಾವೂ ಸುಮ್ಮನಿರಲ್ಲ ಎಂದರು.

₹5 ಲಕ್ಷ ಪಡೆಯುವಂತಹ ಮನುಷ್ಯ ಅವರಲ್ಲ

ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದ ವಿಚಾರಕ್ಕೆ ಪ್ರತಿಕ್ರಿಯಿಸಿ, ₹5 ಲಕ್ಷ ಪಡೆಯುವಂತಹ ಮನುಷ್ಯ ಅವರಲ್ಲ. ಯಾವ ಶಾಸಕರಾದರೂ ಐದು ಲಕ್ಷ ತೆಗೆದುಕೊಳ್ತಾರಾ. ಅವರು ವೈದ್ಯರು ಅವರಿಗೆ ದುಡ್ಡಿನ ಅವಶ್ಯಕತೆ ಇಲ್ಲ. ಇದು ವ್ಯವಸ್ಥಿತ ಪ್ಲಾನ್‌, ಅವರನ್ನು ಸಿಲುಕಿಸುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಆಸ್ಪತ್ರೆಗೆ ಭೇಟಿ

ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ಕಲ್ಲು ಎಸೆತ ಪ್ರಕರಣದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಬೈಕ್ ಓಡಿಸುವಾಗ ಬಿದ್ದು ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತ ಅಶೋಕ ಬಾರಕೇರ ಆರೋಗ್ಯ ವಿಚಾರಸಿದ ಮಾಜಿ ಸಚಿವ ಶ್ರೀರಾಮುಲು ಸಾಂತ್ವನ ಹೇಳಿದರು.

ಇದನ್ನೂ ಓದಿ: ಲಂಚ ಪಡೆದು ಶಾಸಕ ಲಮಾಣಿ ಜೈಲಿಗೆ, ಇದರ ಬೆನ್ನಲ್ಲೇ ಗುತ್ತಿಗೆದಾರನಿಗೆ ಧಮ್ಕಿ ಹಾಕೋ ಆಡಿಯೋ ವೈರಲ್, ಎಲ್ಲಾ ಬೀಪ್ ಸೌಂಡ್!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

₹ 5 ಅಕ್ರಮದಲ್ಲಿ ಪಾರಾಗಿದ್ದ ಲಮಾಣಿ ₹5 ಲಕ್ಷ ಕೇಸ್‌ನಲ್ಲಿ ಲೋಕಾ ಖೆಡ್ಡಾಕ್ಕೆ!
Karnataka News Live: ಯಾವ ಶಾಸಕರಾದರೂ 5 ಲಕ್ಷ ತೆಗೆದುಕೊಳ್ತಾರಾ? ಚಂದ್ರು ಲಮಾಣಿ ಪರ ಶ್ರೀರಾಮುಲು ಬ್ಯಾಟಿಂಗ್