Siddaramaiah vs DK Shivakumar: ಡಿಕೆ ಸಿಎಂ ಭವಿಷ್ಯ ಕೇಳಿದ ಬಿಜೆಪಿ: ಗಿಳಿ ಶಾಸ್ತ್ರದಲ್ಲಿ ಚೊಂಬು ಕಾರ್ಡು!

Kannadaprabha News, Ravi Janekal |   | Kannada Prabha
Published : Nov 24, 2025, 07:31 AM IST
Will DK Shivakumar Become CM Mandya Parrot Picks Chombu Card

ಸಾರಾಂಶ

Parrot astrology for Karnataka CM :ಮಂಡ್ಯದಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುமார் ಮುಂದಿನ ಮುಖ್ಯಮಂತ್ರಿಯಾಗುತ್ತಾರೆಯೇ ಎಂದು ತಿಳಿಯಲು ಬಿಜೆಪಿ ಕಾರ್ಯಕರ್ತರು ಗಿಳಿ ಶಾಸ್ತ್ರದ ಮೊರೆ ಹೋಗಿದ್ದಾರೆ. ಪಂಜರದಿಂದ ಹೊರಬಂದ ಗಿಳಿಯು 'ಚೊಂಬು' ಮತ್ತು 'ಚೆಂಡು ಹೂವು'  ಕಾರ್ಡ್‌ ತೋರಿಸಿದೆ.

ಮಂಡ್ಯ (ನ.24): ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆಯ (ಪವರ್‌ಶೇರಿಂಗ್) ಕಿತ್ತಾಟ ತಾರಕಕ್ಕೇರಿರುವ ಬೆನ್ನಲ್ಲೇ, ಸಕ್ಕರೆ ನಾಡು ಮಂಡ್ಯದಲ್ಲಿ ರಾಜಕೀಯ ಹೈಡ್ರಾಮಾ ಮತ್ತು ವ್ಯಂಗ್ಯದ ಪ್ರಸಂಗವೊಂದು ನಡೆದಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗುತ್ತಾರಾ ಎಂಬ ಪ್ರಶ್ನೆಗೆ ಬಿಜೆಪಿ ಕಾರ್ಯಕರ್ತರು 'ಗಿಳಿ ಶಾಸ್ತ್ರ'ದ ಮೊರೆ ಹೋಗಿದ್ದು, ಫಲಿತಾಂಶ ಕಂಡು ದಂಗಾಗಿದ್ದಾರೆ.

ಡಿಕೆಶಿಗೆ ಚೊಂಬೇ ಗತಿ : ಗಿಳಿ ಭವಿಷ್ಯ

​ಮಂಡ್ಯದ ನಗರಸಭೆ ಕಚೇರಿ ಮುಂಭಾಗ ಕುಳಿತಿದ್ದ ಗಿಳಿಶಾಸ್ತ್ರ ಹೇಳುವ ವ್ಯಕ್ತಿಯ ಬಳಿ ತೆರಳಿದ ಬಿಜೆಪಿ ಕಾರ್ಯಕರ್ತರು, ಎಂದಿನ ಸಂಪ್ರದಾಯದಂತೆ ಎಲೆ-ಅಡಿಕೆ ಮತ್ತು ದಕ್ಷಿಣೆ ಇಟ್ಟು ಭವಿಷ್ಯ ಕೇಳಿದ್ದಾರೆ. 'ಕರ್ನಾಟಕದ ಮುಂದಿನ ಸಿಎಂ ಯಾರಾಗುತ್ತಾರೆ? ಡಿಕೆಶಿಯವರು ಮುಖ್ಯಮಂತ್ರಿಯಾದರೆ ರಾಜ್ಯಕ್ಕೆ ಒಳ್ಳೆಯದಾಗುತ್ತಾ?' ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.

ಗಿಳಿಶಾಸ್ತ್ರದ ವಿಡಿಯೋ ವೈರಲ್:

​ಪಂಜರದಿಂದ ಹೊರಬಂದ ಗಿಳಿ ತೆಗೆದ ಕಾರ್ಡ್‌ ಅಲ್ಲಿ ನೆರೆದಿದ್ದವರಲ್ಲಿ ಅಚ್ಚರಿ ಮತ್ತು ನಗೆಯುಕ್ಕಿಸಿದೆ. ಗಿಳಿಯು 'ಚೊಂಬು' ಮತ್ತು 'ಚೆಂಡು ಹೂವು' ಇರುವ ಕಾರ್ಡ್‌ಗಳನ್ನು ಆಯ್ದುಕೊಂಡಿದೆ. ಇದನ್ನು ವಿಶ್ಲೇಷಿಸಿದ ಬಿಜೆಪಿ ಕಾರ್ಯಕರ್ತರು, 'ಡಿಕೆಶಿ ಅವರಿಗೆ ಸಿಎಂ ಪಟ್ಟ ಸಿಗುವುದಿಲ್ಲ, ಅವರಿಗೆ ಅಂತಿಮವಾಗಿ ಸಿಗುವುದು 'ಚೊಂಬೇ' ಗತಿ ಎಂದು ಭವಿಷ್ಯ ನುಡಿದು ವ್ಯಂಗ್ಯವಾಡಿದ್ದಾರೆ. ಪ್ರಸ್ತುತ ಈ ಗಿಳಿ ಶಾಸ್ತ್ರದ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆಗೆ ಗ್ರಾಸವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ