
ಬೆಂಗಳೂರು, (ಜೂನ್.28): ಕಾಸರಗೋಡಿನಲ್ಲಿರುವ ಬರುವ ಗ್ರಾಮದ ಕನ್ನಡದ ಹೆಸರುಗಳನ್ನು ಬದಲಾವಣೆ ಮಾಡುವುದಿಲ್ಲವೆಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದೆ.
ಯಾವುದೇ ಗ್ರಾಮಗಳ ಹೆಸರನ್ನು ಬದಲಾವಣೆ ಮಾಡುವುದಿಲ್ಲ. ಕಾಸರಗೋಡು, ಮಂಜೇಶ್ವರ ಗ್ರಾಮಗಳ ಹೆಸರನ್ನು ಬದಲಾಯಿಸುವುದಿಲ್ಲ. ಕೇರಳ ಸರ್ಕಾರದ ಬಳಿ ಅಂತಹ ಯಾವುದೇ ಪ್ರಸ್ತಾಪವಿಲ್ಲ. ಗ್ರಾಮಗಳ ಹೆಸರು ಬದಲಾವಣೆ ಮಾಡಲಾಗುತ್ತಿದೆ ಎನ್ನುವುದು ವದಂತಿ ಎಂದು ಎಂದಿದೆ.
ಗ್ರಾಮಗಳ ಹೆಸರು ಬದಲಾವಣೆ: ಕೇರಳ ಸಿಎಂಗೆ ಪತ್ರ ಬರೆದು 'ಭಾಷಾ ಸಾಮರಸ್ಯ' ಉಳಿಸೋಣ ಎಂದ HDK
ಕಾಸರಗೋಡು ತಾಲೂಕಿನ ಕನ್ನಡ ಗ್ರಾಮಗಳ ಹೆಸರನ್ನು ಮಲಯಾಳಂಗೆ ಬದಲಾಯಿಸಲು ಕೇರಳ ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿತ್ತು. ಇದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧಗಳು ವ್ಯಕ್ತವಾಗಿತ್ತು.
ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಸೇರಿದಂತೆ ಹಲವು ಪ್ರಮುಖರು ಕನ್ನಡ ಗ್ರಾಮಗಳ ಹೆಸರನ್ನು ಬದಲಾವಣೆ ಮಾಡಬಾರದು ಎಂದು ಒತ್ತಾಯಿಸಿದ್ದರು.
ಈ ಬಗ್ಗೆ ಎಚ್ಡಿ ಕುಮಾರಸ್ವಾಮಿ ಹಾಗೂ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕೇರಳ ಸರ್ಕಾರಕ್ಕೆ ಪತ್ರ ಬರೆದು ಕಾಸರಗೋಡಿನಲ್ಲಿ ಬರುವ ಯಾವುದೇ ಗ್ರಾಮಗಳ ಕನ್ನಡದ ಹೆರುಗಳನ್ನ ಬದಲಿಸದಂತೆ ಮನವಿ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ