ಕಾಸರಗೋಡಿನಲ್ಲಿನ ಗ್ರಾಮಗಳ ಕನ್ನಡದ ಹೆಸರು ಬದಲಾವಣೆ ಇಲ್ಲ, ಕೇರಳ ಸರ್ಕಾರ ಸ್ಪಷ್ಟನೆ

Published : Jun 28, 2021, 09:19 PM ISTUpdated : Jun 28, 2021, 09:25 PM IST
ಕಾಸರಗೋಡಿನಲ್ಲಿನ ಗ್ರಾಮಗಳ ಕನ್ನಡದ ಹೆಸರು ಬದಲಾವಣೆ ಇಲ್ಲ, ಕೇರಳ ಸರ್ಕಾರ ಸ್ಪಷ್ಟನೆ

ಸಾರಾಂಶ

 * ಕಾಸರಗೋಡಿನ ಗ್ರಾಮದ ಕನ್ನಡದ ಹೆಸರು ಬದಲಾವಣೆ ವಿಚಾರ * ಸ್ಪಷ್ಟನೆ ಕೊಟ್ಟ ಕೇರಳ ಸರ್ಕಾರ * ಕರ್ನಾಟಕದ ಒತ್ತಾಯ, ಮನವಿಗೆ ಸ್ಪಂದಿಸಿದ ಪಿಣರಾಯಿ ವಿಜಯನ್ ಸರ್ಕಾರ 

ಬೆಂಗಳೂರು, (ಜೂನ್.28): ಕಾಸರಗೋಡಿನಲ್ಲಿರುವ ಬರುವ ಗ್ರಾಮದ ಕನ್ನಡದ ಹೆಸರುಗಳನ್ನು ಬದಲಾವಣೆ ಮಾಡುವುದಿಲ್ಲವೆಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದೆ.

ಯಾವುದೇ ಗ್ರಾಮಗಳ ಹೆಸರನ್ನು ಬದಲಾವಣೆ ಮಾಡುವುದಿಲ್ಲ. ಕಾಸರಗೋಡು, ಮಂಜೇಶ್ವರ ಗ್ರಾಮಗಳ ಹೆಸರನ್ನು ಬದಲಾಯಿಸುವುದಿಲ್ಲ. ಕೇರಳ ಸರ್ಕಾರದ ಬಳಿ ಅಂತಹ ಯಾವುದೇ ಪ್ರಸ್ತಾಪವಿಲ್ಲ. ಗ್ರಾಮಗಳ ಹೆಸರು ಬದಲಾವಣೆ ಮಾಡಲಾಗುತ್ತಿದೆ ಎನ್ನುವುದು ವದಂತಿ ಎಂದು ಎಂದಿದೆ.

ಗ್ರಾಮಗಳ ಹೆಸರು ಬದಲಾವಣೆ: ಕೇರಳ ಸಿಎಂಗೆ ಪತ್ರ ಬರೆದು 'ಭಾಷಾ ಸಾಮರಸ್ಯ' ಉಳಿಸೋಣ ಎಂದ HDK

ಕಾಸರಗೋಡು ತಾಲೂಕಿನ ಕನ್ನಡ ಗ್ರಾಮಗಳ ಹೆಸರನ್ನು ಮಲಯಾಳಂಗೆ ಬದಲಾಯಿಸಲು ಕೇರಳ ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿತ್ತು. ಇದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧಗಳು ವ್ಯಕ್ತವಾಗಿತ್ತು.

ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಸೇರಿದಂತೆ ಹಲವು ಪ್ರಮುಖರು ಕನ್ನಡ ಗ್ರಾಮಗಳ ಹೆಸರನ್ನು ಬದಲಾವಣೆ ಮಾಡಬಾರದು ಎಂದು ಒತ್ತಾಯಿಸಿದ್ದರು.

ಈ ಬಗ್ಗೆ ಎಚ್‌ಡಿ ಕುಮಾರಸ್ವಾಮಿ ಹಾಗೂ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕೇರಳ ಸರ್ಕಾರಕ್ಕೆ ಪತ್ರ ಬರೆದು ಕಾಸರಗೋಡಿನಲ್ಲಿ ಬರುವ ಯಾವುದೇ ಗ್ರಾಮಗಳ ಕನ್ನಡದ ಹೆರುಗಳನ್ನ ಬದಲಿಸದಂತೆ ಮನವಿ ಮಾಡಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!