ಬಹುವರ್ಷಗಳ ಬೇಡಿಕೆಯಾದ ಆಲಮಟ್ಟಿಜಲಾಶಯದ ಎತ್ತರವನ್ನು ಹೆಚ್ಚಿಸಬೇಕೆಂಬ ಆಗ್ರಹ| ಸಾಲ ಮಾಡಿ ಆದರೂ ಆಲಮಟ್ಟಿ ಎತ್ತರ ಹೆಚ್ಚಿಸುತ್ತೇವೆ: ಬಿಎಸ್ವೈ|
ವಿಜಯಪುರ(ಆ.26): ಉತ್ತರ ಕರ್ನಾಟಕ ಭಾಗದ ಬಹುವರ್ಷಗಳ ಬೇಡಿಕೆಯಾದ ಆಲಮಟ್ಟಿಜಲಾಶಯದ ಎತ್ತರವನ್ನು ಹೆಚ್ಚಿಸಬೇಕೆಂಬ ಆಗ್ರಹದ ಈಡೇರಿಕೆಗೆ ರಾಜ್ಯ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಜತೆಗೆ, ಸಾಲ ಮಾಡಿಯಾದರೂ ಆಲಮಟ್ಟಿಅಣೆಕಟ್ಟೆಯನ್ನು ಎತ್ತರಿಸಲಾಗುವುದು ಎಂದೂ ಭರವಸೆ ನೀಡಿದ್ದಾರೆ.
ಮಂಗಳವಾರ ಆಲಮಟ್ಟಿಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಆಲಮಟ್ಟಿಅಣೆಕಟ್ಟೆಎತ್ತರವನ್ನು 524.256 ಮೀಟರ್ವರೆಗೆ ಹೆಚ್ಚಿಸಲು ಸರ್ಕಾರ ಬದ್ಧವಿದೆ. ನ್ಯಾಯಾಧಿಕರಣದ ತೀರ್ಪಿನ ಅನ್ವಯ ರಾಜ್ಯಕ್ಕೆ ದೊರೆತಿರುವ 130 ಟಿಎಂಸಿ ನೀರಿನ ಸದ್ಬಳಕೆಗೆ ಸರ್ಕಾರ ಆದ್ಯತೆ ನೀಡಲಿದೆ ಎಂದು ಹೇಳಿದರು.
Karnataka CM BS Yeddyurappa today offered a special prayer (Bagina) to the Alamatti reservoir.
Deputy CM Govinda Karajola, Revenue Minister R. Ashok, Water Resources Minister Ramesh Jarakihi, MLA Murugesh Nirani & legislative council Oppn leader SR Patil was also present. pic.twitter.com/n0C5wkUKwn
ಈಗಾಗಲೇ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೇಂದ್ರದ ಜಲ ಸಂಪನ್ಮೂಲ ಇಲಾಖೆ ಸಭೆಯಲ್ಲಿ ಆಲಮಟ್ಟಿ ಅಣೆಕಟ್ಟೆಎತ್ತರ ಹೆಚ್ಚಳಕ್ಕೆ ಅಧಿಸೂಚನೆ ಹೊರಡಿಸುವ ಕುರಿತು ಗಮನ ಸೆಳೆದಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆ(ಯುಕೆಪಿ)ಯ 3ನೇ ಹಂತದ ಯೋಜನಾ ಕಾಮಗಾರಿಗಳು ಹಾಗೂ ಆಲಮಟ್ಟಿಅಣೆಕಟ್ಟೆಎತ್ತರ ಹೆಚ್ಚಳಕ್ಕೆ ಸಂಬಂಧಿಸಿ ಸದ್ಯದಲ್ಲೇ ನಾನೂ ಪ್ರಧಾನಿ ಅವರನ್ನು ಭೇಟಿಯಾಗಿ ಚರ್ಚಿಸುತ್ತೇನೆ ಎಂದರು.