
6 ಬಾರಿ ಬೆಂಗಳೂರು ದಕ್ಷಿಣದಿಂದ ಗೆದ್ದಿದ್ದ ಅನಂತಕುಮಾರ್ ಮಣಿಸಲು ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರ ಪತ್ನಿ ವರಲಕ್ಷ್ಮೀ ಗುಂಡೂರಾವ್ ಅವರಿಂದ ಮೊದಲುಗೊಂಡು ಐಟಿ ದಿಗ್ಗಜ ನಂದನ್ ನಿಲೇಕಣಿವರೆಗೂ ಹಲವು ದಿಗ್ಗಜರನ್ನು ಕಣಕ್ಕಿಳಿಸಿತ್ತು. ಆದರೆ ಅನಂತ್ ಕುಮಾರ್ ನಾಯಕತ್ವದೆದುರು ಇವರೆಲ್ಲರೂ ಮಂಡಿಯೂರಿದ್ದರು. ಆದರೀಗ ಅನಂತ್ ಕುಮಾರ್ ಅಸ್ತಂಗತರಾಗಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಸೀಮಿತವಾದಂತೆ ಅವರ ಸ್ಥಾನವನ್ನು ಯಾರು ತುಂಬ ಬೇಕು ಎಂಬ ಗೊಂದಲ ಬಿಜೆಪಿಯಲ್ಲಿದೆ. ಹೀಗಿರುವಾಗ ಸದ್ಯ ಎಲ್ಲರ ದೃಷ್ಟಿ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿಯವರ ಮೇಲಿದೆ.
ಇದನ್ನೂ ಓದಿ: ಸಹಪಾಠಿಯನ್ನೇ ಬಾಳ ಸಂಗಾತಿ ಮಾಡಿಕೊಂಡ ಅನಂತ್
1996 ರಿಂದ ಸತತವಾಗಿ ಬೆಂಗಳೂರು ದಕ್ಷಿಣದಿಂದ ಗೆದ್ದಿದ್ದ ಅನಂತಕುಮಾರ್ ಸಾವಿನ ನಂತರ ಮುಂದಿನ ಚುನಾವಣೆಯಲ್ಲಿ ಅವರ ಪತ್ನಿ ತೇಜಸ್ವಿನಿ ನಿಲ್ಲುತ್ತಾರಾ ಎಂಬ ಚರ್ಚೆ ದಿಲ್ಲಿ ಬಿಜೆಪಿ ವಲಯದಲ್ಲೂ ನಡೆಯುತ್ತಿದೆ. ಗಂಡನಿಗೆ ಸದಾ ಬೆನ್ನೆಲುಬಾಗಿ ನಿಂತಿದ್ದ ತೇಜಸ್ವಿನಿ ಅನಂತ್ ಕುಮಾರ್ಗೆ ಟಿಕೆಟ್ ನೀಡುವುದೇ ಒಳ್ಳೆಯದು, ಈ ಮೂಲಕ ಸುಲಭವಾಗಿ ಗೆಲುವು ಸಾಧಿಸಬಹುದು ಎಂಬುವುದು ಆರ್ಎಸ್ಎಸ್ ಮತ್ತು ದಿಲ್ಲಿ ಬಿಜೆಪಿ ನಾಯಕರ ಅಭಿಪ್ರಾಯವಾಗಿದೆ.
ಇದನ್ನೂ ಓದಿ: ಮೂರು ತಿಂಗಳ ಕಾಯಕ ನಂತರ ಕೈಲಾಸ: ಅನಂತ್ ಮಾತು!
ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿರುವ ತೇಜಸ್ವಿನಿ ತಮಗೆ ರಾಜಕೀಯ ಸೇರುವುದು ಇಷ್ಟವಿದೆಯೋ ಇಲ್ಲವೋ ಎಂದು ಯಾರಿಗೂ ಹೇಳಿಲ್ಲ. ಅದರೆ ಬಿಜೆಪಿ ಮಾತ್ರ ಬೆಂಗಳೂರು ದಕ್ಷಿಣದಲ್ಲಿ ಗೆಲ್ಲಲು ಅವರ ಮನವೊಲಿಸಲು ಯತ್ನಿಸುವುದರಲ್ಲಿ ಅನುಮಾನವಿಲ್ಲ. ಹೀಗಿದ್ದರೂ ತೇಜಸ್ವಿನಿ ಬರಲು ಇಚ್ಛಿಸದಿದ್ದರೆ ಯಾರನ್ನು ಕಣಕ್ಕೆ ಇಳಿಸಬೇಕು ಎಂಬ ವಿಚಾರ ಬಿಜೆಪಿಗೆ ಮತ್ತೆ ತಲೆನೋವಾಗಲಿದೆ.
[ಪ್ರಶಾಂತ್ ನಾತು ಅವರ ಇಂಡಿಯಾ ಗೇಟ್ ಅಂಕಣದ ಆಯ್ದ ಭಾಗ]
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ