ಸ್ವಯಂಪ್ರೇರಿತ ತನಿಖಾ ಅಧಿಕಾರಕ್ಕೆ ರಾಜ್ಯದ ಕತ್ತರಿ: ಸಿಬಿಐ ಮೇಲೆಯೇ ಸಿದ್ದರಾಮಯ್ಯ ದಾಳಿ..!

Published : Sep 27, 2024, 06:36 AM IST
ಸ್ವಯಂಪ್ರೇರಿತ ತನಿಖಾ ಅಧಿಕಾರಕ್ಕೆ ರಾಜ್ಯದ ಕತ್ತರಿ:  ಸಿಬಿಐ ಮೇಲೆಯೇ ಸಿದ್ದರಾಮಯ್ಯ ದಾಳಿ..!

ಸಾರಾಂಶ

ದೆಹಲಿ ಪೊಲೀಸ್ ಎಸ್ಟಾಬ್ಲಿಷ್‌ಮೆಂಟ್‌ -1946 ಅಡಿ ಸಿಬಿಐಗೆ ನೀಡಿದ್ದ ಮುಕ್ತ ಅನುಮತಿ ಹಿಂಪಡೆಯಲಾಗಿದೆ. ಇದರಿಂದಾಗಿ ಕರ್ನಾಟಕದ ಭೂಭಾಗದ ಒಳಗೆ ನ್ಯಾಯಾಲಯದ ಆದೇಶ ಅಥವಾ ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಸ್ವಯಂ ಪ್ರೇರಿತವಾಗಿ ತನಿಖೆ ನಡೆಸುವ ಅಧಿಕಾರವನ್ನು ಸಿಬಿಐ ಕಳೆದುಕೊಳ್ಳಲಿದೆ. ಮುಖ್ಯಮಂತ್ರಿಗಳ ವಿರುದ್ದದ ಮುಡಾ ಪ್ರಕರಣ ಹಾಗೂ ವಾಲ್ಮೀಕಿ ನಿಗಮದ ಹಗರಣಗಳು ಚರ್ಚೆಯಲ್ಲಿರುವಾಗಲೇ ಸರ್ಕಾರ ತೆಗೆದುಕೊಂಡಿರುವ ಈ ನಿರ್ಧಾರ ಕುತೂಹಲ ಕೆರಳಿಸಿದೆ. 

ಬೆಂಗಳೂರು(ಸೆ.27):  ಕರ್ನಾಟಕ ರಾಜ್ಯದ ಅಪರಾಧ ಪ್ರಕರಣಗಳ ತನಿಖೆ ನಡೆಸಲು ಕೇಂದ್ರೀಯ ತನಿಖಾ ಸಂಸ್ಥೆಗೆ (ಸಿಬಿಐ) ಮುಕ್ತ ಅನುಮತಿ ನೀಡಿದ್ದ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. 

ದೆಹಲಿ ಪೊಲೀಸ್ ಎಸ್ಟಾಬ್ಲಿಷ್‌ಮೆಂಟ್‌ -1946 ಅಡಿ ಸಿಬಿಐಗೆ ನೀಡಿದ್ದ ಮುಕ್ತ ಅನುಮತಿ ಹಿಂಪಡೆಯಲಾಗಿದೆ. ಇದರಿಂದಾಗಿ ಕರ್ನಾಟಕದ ಭೂಭಾಗದ ಒಳಗೆ ನ್ಯಾಯಾಲಯದ ಆದೇಶ ಅಥವಾ ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಸ್ವಯಂ ಪ್ರೇರಿತವಾಗಿ ತನಿಖೆ ನಡೆಸುವ ಅಧಿಕಾರವನ್ನು ಸಿಬಿಐ ಕಳೆದುಕೊಳ್ಳಲಿದೆ. ಮುಖ್ಯಮಂತ್ರಿಗಳ ವಿರುದ್ದದ ಮುಡಾ ಪ್ರಕರಣ ಹಾಗೂ ವಾಲ್ಮೀಕಿ ನಿಗಮದ ಹಗರಣಗಳು ಚರ್ಚೆಯಲ್ಲಿರುವಾಗಲೇ ಸರ್ಕಾರ ತೆಗೆದುಕೊಂಡಿರುವ ಈ ನಿರ್ಧಾರ ಕುತೂಹಲ ಕೆರಳಿಸಿದೆ. 

ತೀರ್ಪನ್ನು ಒಪ್ಪಲ್ಲ ಎಂದ್ರೆ ಕೋರ್ಟನ್ನೇ ಮುಚ್ಚಿ ಬಿಡಿ: ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಕಿಡಿ

ಸಂಪುಟದ ನಿರ್ಧಾರವನ್ನು ಸಮರ್ಥಿಸಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಎಚ್.ಕೆ.ಪಾಟೀಲ್, 'ನಾವುಭಯದಿಂದ ಈತೀರ್ಮಾನಮಾಡಿಲ್ಲ. ಭಯ ಉತ್ಪಾದಿಸಲು ಯತ್ನಿಸುತ್ತಿರುವವರನ್ನು ನಿಗ್ರಹಿಸಲು ಈ ನಿರ್ಧಾರ ಮಾಡಿದ್ದೇವೆ. ಇದು ಭಯೋತ್ಪಾದನಾ ನಿಗ್ರಹ ನಡೆ. ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ಅಂಗಸಂಸ್ಥೆಗಳು ಹಾಗೂ ರಾಜಭವನ ಕೆಲಸ ಮಾಡುತ್ತಿವೆ. ಇದಕ್ಕೆ ಉತ್ತರವಾಗಿ ಈ ತೀರ್ಮಾನ ತೆಗೆದುಕೊಂಡಿದ್ದೇವೆ' ಎಂದು ಸ್ಪಷ್ಟಪಡಿಸಿದರು.

ಕೇಂದ್ರದ ಸಿಬಿಐ ಪೂರ್ವಾಗ್ರಹ ಪೀಡಿತವಾಗಿದೆ: 

ಈ ನಿರ್ಧಾರದ ಅಗತ್ಯವೇನಿತ್ತು ಎಂಬ ಪ್ರಶ್ನೆಗೆ, ಕೇಂದ್ರ ಸರ್ಕಾರವು ಸಿಬಿಐಯನ್ನು ಕಾನೂನಾತ್ಮಕ ವಾಗಿ ಬಳಕೆ ಮಾಡುತ್ತಿಲ್ಲ. ಸಿಬಿಐ ಸಂಪೂರ್ಣ ಪೂರ್ವಾಗ್ರಹಪೀಡಿತವಾಗಿದೆ. ಹೀಗಾಗಿ ಪ್ರತಿ ಪ್ರಕರಣವನ್ನು ಪರಿಶೀಲಿಸಿ, ಅಗತ್ಯವಿದ್ದರೆ ಮಾತ್ರ ಸಿಬಿಐ ತನಿಖೆಗೆ ನೀಡುತ್ತೇವೆ. ಸ್ವಯಂ ಪ್ರೇರಿತವಾಗಿ ತನಿಖೆ ಕೈಗೆತ್ತಿಕೊಳ್ಳುವ ಅನುಮತಿ ಹಿಂಪಡೆದಿದ್ದೇವೆ. ನ್ಯಾಯಾಲಯವೇ ಸಿಬಿಐ ತನಿಖೆಗೆ ನೀಡಿದರೆ ನಮ್ಮ ಈ ನಿರ್ಧಾರ ಅಡ್ಡಿಯಾಗುವುದಿಲ್ಲ ಎಂದು ಎಚ್. ಕೆ.ಪಾಟೀಲ್ ಸ್ಪಷ್ಟಪಡಿಸಿದರು. 

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ರಕ್ಷಣೆಗೆ ಈ ಕ್ರಮವೇ ಎಂಬ ಪ್ರಶ್ನೆಗೆ, ಮುಡಾ ಪ್ರಕರಣಕ್ಕೂ ಇದಕ್ಕೂ ಸಂಬಂಧವಿಲ್ಲ. ಮುಡಾ ಬಗ್ಗೆ ಲೋಕಾಯುಕ್ತ ತನಿಖೆಗೆ ನ್ಯಾಯಾಲಯವೇ ಅನುಮತಿ ನೀಡಿದೆ. ಆದರೆ ಸಿಬಿಐಗೆ ರಾಜ್ಯ ಸರ್ಕಾರ ನೀಡಿರುವ ಹಲವು ಪ್ರಕರಣಗಳ ಬಗ್ಗೆ ಎಂಟು ತಿಂಗಳಾದರೂ ಸಿಬಿಐ ಚಾರ್ಜ್‌ ಶೀಟ್ ಕೂಡ ಸಲ್ಲಿಕೆ ಮಾಡಿಲ್ಲ. ಅದೇ ಸಿಬಿಐ ಪೂರ್ವಾಗ್ರಹ ಪೀಡಿತವಾಗಿ ಒಂದು ಪಕ್ಷದವರನ್ನು ಗುರಿಯಾಗಿಸಿ ಸಿಬಿಐ ಕೆಲಸ ಮಾಡುತ್ತಿದೆ. ಚುನಾವಣೆ ಸಮಯದಲ್ಲೂ ಒಂದೇ ಪಕ್ಷದವರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಕಳೆದ ಎರಡು ವರ್ಷದಲ್ಲೇ ಇಂತಹ ನೂರಾರು ಉದಾಹರಣೆಗಳಿವೆ. ವಾರ್ಯವಾಗಿ ಈ ನಿರ್ಧಾರ ಮಾಡಿದ್ದೇವೆ ಎಂದು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು. 

ಡಿ.ಕೆ.ರವಿ, ಎಂ.ಕೆ.ಗಣಪತಿ ಪ್ರಕರಣದಲ್ಲಿ ಸಿಬಿಐ ನಿಮ್ಮ ಸರ್ಕಾರದ ಪರವೇ ವರದಿ ನೀಡಿಲ್ಲವೇ ಎಂಬ ಪ್ರಶ್ನೆಗೆ, ಅದು ಬೇರೆ ಪ್ರಶ್ನೆ. ಈಗ ಕಳೆದ ಎರಡು ವರ್ಷದಿಂದ ಸಿಬಿಐ ನಡೆಯನ್ನು ಗಮನಿಸಿ. ತನಿಖಾ ಸಂಸ್ಥೆಗಳನ್ನು ಕೇಂದ್ರ ಹೇಗೆ ಬಳಸಿಕೊಳ್ಳುತ್ತಿದೆ ಎಂಬುದನ್ನು ಗಮನಿಸಿ ಎಂದರು.

ಸಿಬಿಐ ಸಂಪೂರ್ಣ ಪೂರ್ವಾಗ್ರಹಪೀಡಿತ ಕೇಂದ್ರ ಸರ್ಕಾರವು ಸಿಬಿಐಯನ್ನು ಕಾನೂ ನಾತ್ಮಕವಾಗಿ ಬಳಕೆ ಮಾಡುತ್ತಿಲ್ಲ. ಸಿಬಿಐ ಸಂಪೂರ್ಣ ಪೂರ್ವಾಗ್ರಹ ಪೀಡಿತವಾಗಿದೆ. ಹೀಗಾಗಿ ಅನಿವಾರ್ಯವಾಗಿ ಈ ನಿರ್ಧಾರ ಮಾಡಿದ್ದೇವೆ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. 

ಮುಡಾ ಪ್ರಕರಣದಿಂದ ಪಕ್ಷಕ್ಕೆ ಮುಜುಗರ, ಸಿದ್ದರಾಮಯ್ಯ ರಾಜೀನಾಮೆಗೆ ಕಾಂಗ್ರೆಸ್‌ನಲ್ಲೆ ಒತ್ತಾಯ!

ಸಿಬಿಐ ತನಿಖೆಗೆ ಅಂಕುಶ: ಕರ್ನಾಟಕ 8ನೇ ರಾಜ್ಯ ದೇಶದ ಏಳು ರಾಜ್ಯಗಳಲ್ಲಿ ಸಿಬಿಐ ತನಿಖೆಗೆ ಮುಕ್ತ ಅನುಮತಿಯನ್ನು ಹಿಂಪಡೆಯಲಾಗಿದೆ. ಅವೆಂದರೆ- ಪಂಜಾಬ್, ಜಾರ್ಖಂಡ್, ಕೇರಳ, ಪಶ್ಚಿಮ ಬಂಗಾಳ, ತೆಲಂಗಾಣ, ಮೇಘಾಲಯ, ತಮಿಳುನಾಡು. ಕರ್ನಾಟಕ 8ನೇ ರಾಜ್ಯವಾಗಿದೆ.

ಸರ್ಕಾರದ ವಾದವೇನು? 

• ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ಕೇಂದ್ರದ ಸಂಸ್ಥೆಗಳು, ರಾಜಭವನ ಗಳು ಕೆಲಸ ಮಾಡುತ್ತಿವೆ . ಇದಕ್ಕೆ ಉತ್ತರವಾಗಿ ಸಿಬಿಐಗೆ ನೀಡಿದ್ದ ಮುಕ್ತ ಅನುಮತಿಯನ್ನು ವಾಪಸ್ ಪಡೆಯಲಾಗಿದೆ 
• ಭಯದಿಂದ ಈ ತೀರ್ಮಾನ ಮಾಡಿಲ್ಲ, ಭಯ ಉತ್ಪಾದಿಸುವವ ರನ್ನು ನಿಗ್ರಹಿಸಲು ಈ ಕ್ರಮ 
• ಸಿಬಿಐ ಪೂರ್ವಾಗ್ರಹಪೀಡಿತ ವಾಗಿದೆ. ಪ್ರತಿ ಪ್ರಕರಣವನ್ನು ಪರಿಶೀಲಿಸಿ ಅಗತ್ಯಬಿದ್ದರೆ ಸಮ್ಮತಿ 
• ನ್ಯಾಯಾಲಯವೇ ಸಿಬಿಐ ತನಿಖೆಗೆ ಅನುಮತಿ ನೀಡಿದರೆ ಈ ನಿರ್ಧಾರ ದಿಂದ ಅಡ್ಡಿಯಾಗುವುದಿಲ್ಲ 
• ಮುಡಾ ಪ್ರಕರಣಕ್ಕೂ ಈ ತೀರ್ಮಾನಕ್ಕೂ ಯಾವುದೇ ಸಂಬಂಧವಿಲ್ಲ: ಎಚ್.ಕೆ.ಪಾಟೀಲ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!