
ಬೆಂಗಳೂರು (ಜೂ.20): ಲಗೇಜ್ ವಿಚಾರಕ್ಕೆ ವಿಮಾನದಲ್ಲಿ ಸಿಬ್ಬಂದಿ ಮತ್ತು ಪ್ರಯಾಣಿಕರೊಂದಿಗೆ ರಂಪಾಟ ಮಾಡಿದ್ದ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.
ಯಲಹಂಕ ಮೂಲದ ವ್ಯಾಸ್ ಹಿರಲ್ ಮೋಹನ್ ಬಾಯಿ ಎಂಬ ಮಹಿಳೆ,
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜೂನ್ 17ರಂದು ಲಗೇಜ್ ವಿಚಾರಕ್ಕೆ ರಂಪಾಟ ಮಾಡಿದ್ದಳು. AI 2749 F ವಿಮಾನದಲ್ಲಿ ಸೂರತ್ಗೆ ತೆರಳುತ್ತಿದ್ದ ಈ ಮಹಿಳೆ, ಲಗೇಜ್ ಸೀಟ್ ಬಳಿ ಇರಿಸಿದ್ದಕ್ಕೆ ವಿಮಾನ ಸಿಬ್ಬಂದಿ ಪ್ರಶ್ನಿಸಿದಾಗ ಅನುಚಿತವಾಗಿ ವರ್ತಿಸಿದ್ದಾಳೆ.
ಸಿಬ್ಬಂದಿಯ ಜೊತೆ ಕಿರಿಕ್ ಮಾಡಿದ ಮಹಿಳೆ, ಸಹ ಪ್ರಯಾಣಿಕರೊಂದಿಗೂ ರಂಪಾಟ ಮಾಡಿದ್ದಾಳೆ. ವಿಮಾನ ಸಿಬ್ಬಂದಿ ಮಹಿಳೆಯನ್ನು ಇಳಿಸಿ ವಿಮಾನ ನಿಲ್ದಾಣ ಪೊಲೀಸರ ವಶಕ್ಕೆ ನೀಡಿದ್ದಾರೆ. ಅಷ್ಟಕ್ಕೂ ಸುಮ್ಮನಾಗದ ಮಹಿಳೆ ಪೊಲೀಸ್ ಠಾಣೆಯಲ್ಲೂ ಕಿರಿಚಾಡಿ, ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾದ ಆರೋಪವಿದೆ.
ಸದ್ಯ ಮಹಿಳೆ ವಿರುದ್ಧ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಕೆಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ