ರಾಜ್ಯದ ವಿವಿಧೆಡೆ ಭರ್ಜರಿ ಮಳೆ: ಸಿಡಿಲು ಬಡಿದು ಓರ್ವ ಮಹಿಳೆ ಸಾವು

Kannadaprabha News   | Asianet News
Published : Apr 30, 2021, 08:07 AM IST
ರಾಜ್ಯದ ವಿವಿಧೆಡೆ ಭರ್ಜರಿ ಮಳೆ: ಸಿಡಿಲು ಬಡಿದು ಓರ್ವ ಮಹಿಳೆ ಸಾವು

ಸಾರಾಂಶ

ಕಲಬುರಗಿ ಸೇರಿ ಕೆಲವೆಡೆ ಆಲಿಕಲ್ಲು ಮಳೆ| ಜನತಾ ಕರ್ಫ್ಯೂ ಇರುವುದರಿಂದ ವಾಹನ ಸಂಚಾರ ವಿರಳವಾಗಿತ್ತು. ಹೀಗಾಗಿ ಯಾವುದೇ ಸಮಸ್ಯೆಯಾಗಿಲ್ಲ| ಹುಬ್ಬಳ್ಳಿ- ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆ ಉತ್ತಮ ಮಳೆ| 

ಬೆಂಗಳೂರು(ಏ.30): ಕಲಬುರಗಿಯಲ್ಲಿ ಆಲಿಕಲ್ಲು ಮಳೆಯಾಗಿದ್ದರೆ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ಕೆಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಜೇವರ್ಗಿ ತಾಲೂಕಿನಲ್ಲಿ ಮಹಿಳೆಯೊಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ.

ಸಿಂದಗಿ ತಾಲೂಕಿನ ಕೋಕಟನೂರ ಗ್ರಾಮದ ನಿವಾಸಿ ಸಿದ್ದಮ್ಮ ಭೀಮಣ್ಣ ಘತ್ತರಗಿ (35) ಸಿಡಿಲಿಗೆ ಮೃತಪಟ್ಟವರು. ಇವರು ಜೇವರ್ಗಿ ತಾಲೂಕಿನ ಮಯೂರ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಲಬುರಗಿಯಲ್ಲಿ ಮಧ್ಯಾಹ್ನ ಅರ್ಧ ಗಂಟೆಗಳ ಕಾಲ ಗುಡುಗು, ಮಿಂಚಿನ ಮಳೆಯಾಗಿದೆ. ಕೆಲವು ಕಡೆ ಆಲಿಕಲ್ಲು ಬಿದ್ದಿದೆ. ಜನತಾ ಕರ್ಫ್ಯೂ ಇರುವುದರಿಂದ ವಾಹನ ಸಂಚಾರ ವಿರಳವಾಗಿತ್ತು. ಹೀಗಾಗಿ ಯಾವುದೇ ಸಮಸ್ಯೆಯಾಗಿಲ್ಲ.

ರಾಜ್ಯದಲ್ಲಿ ಮಳೆ : ಬಿರುಗಾಳಿಗೆ ಜೋಳಿಗೆಯಲ್ಲಿದ್ದ ಮಗು ಸಾವು

ಹುಬ್ಬಳ್ಳಿ- ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆ ಉತ್ತಮ ಮಳೆ ಸುರಿದಿದೆ. ಹುಬ್ಬಳ್ಳಿ ನಗರದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಉತ್ತಮವಾಗಿಯೇ ಮಳೆಯಾಗಿದೆ. ಸಂಜೆ 5.30 ರ ಹೊತ್ತಿಗೆ ಆರಂಭವಾದ ಗುಡುಗು, ಸಿಡಿಲಿನ ಅಬ್ಬರದ ಮಳೆ ಸಂಜೆ 7 ಗಂಟೆಯವರೆಗೂ ಮುಂದುವರಿದಿತ್ತು. ಜನತಾ ಕಫä್ರ್ಯವಿನ ಹಿನ್ನೆಲೆಯಲ್ಲಿ ಜನರೆಲ್ಲ ಮನೆಯಲ್ಲಿಯೇ ಇದ್ದುದರಿಂದ ತೊಂದರೆ ಆಗಲಿಲ್ಲ. ಉಳಿದಂತೆ ಹಾವೇರಿ ಜಿಲ್ಲೆ ರಾಣಿಬೆನ್ನೂರು, ಗದಗ ಜಿಲ್ಲೆಯ ಶಿರಹಟ್ಟಿ, ಡಂಬಳ, ಲಕ್ಷ್ಮೇಶ್ವರಗಳಲ್ಲೂ ಸಹ ಮಳೆಯಾಗಿದೆ. ಕೊಪ್ಪಳದಲ್ಲಿ ತುಂತುರು ಮಳೆ ಸುರಿದಿದೆ. ಚಿಕ್ಕಮಗಳೂರು ಜಿಲ್ಲಾದ್ಯಂತ ಸಾಧಾರಣ ಮಳೆಯಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕುಡುಕರ ಲಿವರ್‌ ಚಿಕಿತ್ಸೆಗೆ ಹಣ ಕೇಳಿದ ಶಾಸಕರು: ಪರಿಷತ್‌ನಲ್ಲಿ ಸ್ವಾರಸ್ಯಕರ ಚರ್ಚೆ
ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ