ವಿಧಾನಸೌಧ ಬೀಗ ಒಡೆದ ದೇವೇಗೌಡರು ಗೂಂಡಾ ಅಲ್ವೇ?: ಜಯಶ್ರೀ ಸವಾಲ್!

Published : Nov 27, 2018, 01:14 PM ISTUpdated : Nov 27, 2018, 01:25 PM IST
ವಿಧಾನಸೌಧ ಬೀಗ ಒಡೆದ ದೇವೇಗೌಡರು ಗೂಂಡಾ ಅಲ್ವೇ?: ಜಯಶ್ರೀ ಸವಾಲ್!

ಸಾರಾಂಶ

ಸಿಎಂ ಕುಮಾರಸ್ವಾಮಿಗೆ ಟಾಂಗ್ ನೀಡಿದ ರೈತ ಮಹಿಳೆ ಜಯಶ್ರೀ! ರೈತರನ್ನು ಗೂಂಡಾ, ದರೋಡೆಕೋರರು ಎಂದು ಜರೆದಿದ್ದ ಸಿಎಂ! ಸಿಎಂ ಹೇಳಿಕೆಗೆ ರೈತ ಹೋರಾಟಗಾರ್ತಿ ಜಯಶ್ರೀ ಪ್ರತ್ಯುತ್ತರ! ವಿಧಾನಸೌಧ ಬೀಗ ಒಡೆದಿದ್ದ ದೇವೇಗೌಡ ದರೋಡೆಕೋರ ಅಲ್ಲವೇ?

ಮಲ್ಲಿಕಾರ್ಜುನ ಹೊಸಮನಿ

ಮುಧೋಳ(ನ.27): ಕಬ್ಬಿಗೆ ಬೆಂಬಲ ಬೆಲೆ ನಿಗದಿಗಾಗಿ ಆಗ್ರಹಿಸಿ ನಡೆದಿದ್ದ ರೈತ ಪ್ರತಿಭಟನೆ ವೇಳೆ, ರೈತರನ್ನು ದರೋಡೆಕೋರರು ಎಂದು ಜರೆದಿದ್ದ ಸಿಎಂ ಕುಮಾರಸ್ವಾಮಿ ಅವರಿಗೆ ರೈತ ಮಹಿಳೆ ಜಯಶ್ರೀ ಗುರನ್ನವರ್ ಟಾಂಗ್ ನೀಡಿದ್ದಾರೆ.

ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿ ಇದ್ದಾಗ ಇದೇ ದೇವೇಗೌಡರು ವಿಧಾನಸೌಧದ ಬೀಗ ಒಡೆದಿದ್ದರು. ಹಾಗಾದರೆ ನಿಮ್ಮ ತಂದೆಯನ್ನು ಏನೆಂದು ಕರೆಯುತ್ತೀರಿ ಎಂದು ಜಯಶ್ರೀ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದ್ದಾರೆ.

"

ಮುಧೋಳದಲ್ಲಿ ನಡೆದ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಜಯಶ್ರೀ, ಬೆಳಗಾವಿಯಲ್ಲಿ ನಡೆದಿದ್ದ ಘಟನೆಯನ್ನು ಉಲ್ಲೇಖಿಸಿ ರೈತರನ್ನು ಗೂಂಡಾ, ದರೋಡೆಕೋರರು ಎಂದೆಲ್ಲಾ ಕರೆಯುವುದಕ್ಕೆ ಮುಖ್ಯಮಂತ್ರಿಗಳಿಗೆ ನಾಚಿಕೆಯಾಗಬೇಕು ಎಂದು ಹರಿಹಾಯ್ದಿದ್ದಾರೆ.

ನ್ಯಾಯಕ್ಕಾಗುಇ ಆಗ್ರಹಿಸಿ ನಿಮ್ಮ ಮನೆ ಮುಂದೆ ಬಂದರೆ ನಮಗೆ ಗೂಂಡಾಗಳು ಎಂದು ಕರೆಯುವ ನೀವು, ಆಗ ವಿಧಾನಸೌಧದ ಬೀಗ ಒಡೆದ ನಿಮ್ಮ ತಂದೆಯನ್ನು ಕಳ್ಳ ಎಂದು ಕರೆಯುವದಿಲ್ಲವೇ ಎಂದು ಜಯಶ್ರೀ ಪ್ರಶ್ನಿಸಿದ್ದಾರೆ. ಸದ್ಯ ಜಯಶ್ರೀ ಅವರ ಈ ಹೇಳಿಕೆ ಭಾರೀ ವೈರಲ್ ಆಗಿದ್ದು, ಜಯಶ್ರೀಗೆ ಬೆಂಬಲದ ಮಹಾಪೂರ ಹರಿದುಬರುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ