
ಬೆಳಗಾವಿ (ಜೂ.29): ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳಲ್ಲಿ ಮಹಿಳೆಯರಿಗೆ ಸುರಕ್ಷಿತೆ ಇಲ್ಲ ಎಂದು ಕೇಂದ್ರ ಸಚಿವೆ ಅನ್ನಪೂರ್ಣಾದೇವಿ ಆರೋಪ ಮಾಡಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಹಣ ಕೊಡದ ಹೊರತು ಜನ ಸಾಮಾನ್ಯರ ಕೆಲಸಗಳು ಆಗುತ್ತಿಲ್ಲ. ಮೋದಿ ಆಡಳಿತವನ್ನ ಹಿಟ್ಲರ್ ಶಾಹಿ ಎನ್ನುವ ಕಾಂಗ್ರೆಸ್ ನಾಯಕರು ತುರ್ತು ಪರಿಸ್ಥಿತಿ ನೆನಪಿಸಿಕೊಳ್ಳಲಿ. ಮಹಿಳಾ ಸಿಎಂ ಇರುವ ಪಶ್ಚಿಮ ಬಂಗಾಳದಲ್ಲೂ ಪದೇ ಪದೇ ಲೈ*ಗಿತ ದೌರ್ಜನ್ಯ ಕೇಸ್ಗಳು ಆಗುತ್ತಿದ್ದು, ಮನಸ್ಸಿಗೆ ಘಾಸಿ ತರುತ್ತವೆ. ಅದೇ ರೀತಿ ಕರ್ನಾಟಕದಲ್ಲೂ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಾಗಿದೆ ಎಂದು ಆಪಾದನೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ 11 ವರ್ಷ ಸಾಮಾನ್ಯ ಜನರಿಗಾಗಿ ಆಡಳಿತ ನೀಡಿದೆ. ಯುವಕರು, ಮಹಿಳೆಯರು, ರೈತರು, ಬಡವರ ಪ್ರಗತಿಗೆ ಯೋಜನೆ ತಂದಿದೆ. ಆಪರೇಷನ್ ಸಿಂದೂರ ಸೇರಿದಂತೆ ಕಾಂತ್ರಿಕಾರಿ ತೀರ್ಮಾನಗಳು ಆಗಿವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ