Raichur: ಸ್ಮಶಾನ ಜಾಗಕ್ಕಾಗಿ ಚರಂಡಿ ನೀರು ಮೈಮೇಲೆ ಸುರಿ​ದು​ಕೊಂಡ ಮಹಿಳೆ

Published : Jun 21, 2023, 10:37 AM IST
Raichur: ಸ್ಮಶಾನ ಜಾಗಕ್ಕಾಗಿ ಚರಂಡಿ ನೀರು ಮೈಮೇಲೆ ಸುರಿ​ದು​ಕೊಂಡ ಮಹಿಳೆ

ಸಾರಾಂಶ

ಸಫಾಯಿ ಕರ್ಮ​ಚಾರಿ ಸಮುದಾಯಕ್ಕೆ ಪ್ರತ್ಯೇಕ ಸ್ಮಶಾನ ಒದ​ಗಿ​ಸಲು ಅಧಿ​ಕಾ​ರಿ​ಗಳು ನಿರ್ಲಕ್ಷ್ಯ ಧೋರಣೆ ತೋರು​ತ್ತಿದ್ದಾರೆಂದು ಮಹಿಳೆಯೊಬ್ಬರು ಕಾಲು​ವೆಗೆ ಇಳಿದು ಚರಂಡಿ ನೀರನ್ನು ಮೈಮೇಲೆ ಸುರಿ​ದು​ಕೊಂಡ ಘಟನೆ ನಗ​ರ​ದಲ್ಲಿ ಜರು​ಗಿದೆ. 

ರಾಯಚೂರು (ಜೂ.21): ಸಫಾಯಿ ಕರ್ಮ​ಚಾರಿ ಸಮುದಾಯಕ್ಕೆ ಪ್ರತ್ಯೇಕ ಸ್ಮಶಾನ ಒದ​ಗಿ​ಸಲು ಅಧಿ​ಕಾ​ರಿ​ಗಳು ನಿರ್ಲಕ್ಷ್ಯ ಧೋರಣೆ ತೋರು​ತ್ತಿದ್ದಾರೆಂದು ಮಹಿಳೆಯೊಬ್ಬರು ಕಾಲು​ವೆಗೆ ಇಳಿದು ಚರಂಡಿ ನೀರನ್ನು ಮೈಮೇಲೆ ಸುರಿ​ದು​ಕೊಂಡ ಘಟನೆ ನಗ​ರ​ದಲ್ಲಿ ಜರು​ಗಿದೆ. ಸಫಾ​ಯಿ ​ಕ​ರ್ಮ​ಚಾರಿ ಗೀತಾಸಿಂಗ್‌ ಚರಂಡಿ​ಗಿ​ಳಿದ ಮಹಿಳೆ​. ಕಳೆದ ಕೆಲ ದಿನ​ಗ​ಳ​ ಹಿಂದೆ ಪ್ರತ್ಯೇಕ ಸ್ಮಶಾನ ಮಂಜೂರು ಮಾಡುವಂತೆ ಮನೆಯ ಮುಂದೆ ಶವವನ್ನಿಟ್ಟು ಪ್ರತಿಭಟನೆ ಮಾಡಲಾಗಿತ್ತು. 

ಈ ವೇಳೆ ನಗರಸಭೆ ಅಧಿ​ಕಾ​ರಿ ಮತ್ತು ತಹಸೀಲ್ದಾರ್‌ ಸ್ಥಳಕ್ಕೆ ​ಬಂದು ಸ್ಮಶಾನ ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದರು. ಇಷ್ಟು ದಿನ​ಗಳ ಕಳೆ​ದರೂ ಭರ​ವಸೆ ಈಡೇ​ರದ ಕಾರ​ಣಕ್ಕೆ ಅಸ​ಮಾ​ಧಾ​ನ​ಗೊಂಡ ಗೀತಾ ಸಿಂಗ್‌ ಜಿಲ್ಲಾ ಉಸ್ತುವಾರಿ ಸಚಿವ ಶರ​ಣ​ಪ್ರ​ಕಾಶ ಪಾಟೀಲ್‌ ಅವ​ರಿಗೆ ಸೋಮ​ವಾರ ಮನವಿ ಸಲ್ಲಿ​ಸಲು ಮುಂದಾ​ಗಿದ್ದರು, ಅದಕ್ಕೆ ಪೊಲೀ​ಸರು ಅವ​ಕಾಶ ನೀಡದ ಕಾರ​ಣಕ್ಕೆ ಸಿಟ್ಟಿ​ಗೆದ್ದ ಅವರು ಸಮೀ​ಪ​ದ ರಾಜಕಾಲುವೆಗೆ ಇಳಿದು ಚರಂಡಿ ನೀರನ್ನು ಮೈಮೇಲೆ ಹಾಕಿಕೊಂಡು ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದರು.

ಪೊಲೀಸ್ ಇಲಾಖೆಗೆ ಸರ್ಜರಿ: ಸಂದೀಪ್‌ ಪಾಟೀಲ್‌ ಸೇರಿ 13 ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಚಿತಾಗಾರದ ಪಕ್ಕ ಮಲಗಿದ ವಿದೇಶಿಗರು!: ಮಧ್ಯರಾತ್ರಿ ಸ್ಮಶಾನದ ಸುತ್ತಮುತ್ತ ಓಡಾಡಲು ಭಯಪಡುವ ಜನರ ಮಧ್ಯೆ, ಪ್ರವಾಸಿಗರು ಚಿತಾಗಾರದ ಸ್ಥಳದಲ್ಲಿಯೇ ರಾತ್ರಿ ಕಳೆದು, ಬೆಳಗ್ಗೆ ಪ್ರಯಾಣ ಬೆಳೆಸಿರುವ ಅಚ್ಚರಿ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ರುಮೇವಾಡಿಯಲ್ಲಿ ನಡೆದಿದೆ. ರಾಜ್ಯದ ವಿವಿಧ ಐತಿಹಾಸಿಕ ಹಾಗೂ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಆಸ್ಪ್ರೇಲಿಯಾ ಮೂಲದ ವಿದೇಶಿಗರಿಬ್ಬರು ಬುಲೆಟ್‌ ಮೂಲಕ ಪ್ರವಾಸ ಆರಂಭಿಸಿದ್ದಾರೆ. ಅದರಂತೆ ಬೆಳಗಾವಿ ಜಿಲ್ಲೆಯ ವಿವಿಧ ತಾಣಗಳನ್ನು ವೀಕ್ಷಣೆ ಮಾಡಿದ್ದಾರೆ. 

ಬಳಿಕ ಖಾನಾಪೂರದ ಕಡೆಗೆ ಪ್ರಯಾಣ ಬೆಳೆಸಿದ ಪ್ರವಾಸಿಗರು, ರಾತ್ರಿಯಾಗುತ್ತಿದ್ದಂತೆ ಖಾನಾಪೂರ ತಾಲೂಕಿನ ರುಮೇವಾಡಿ- ಅನಮೋಡ್‌ ರಸ್ತೆಬದಿ ಪಕ್ಕ ಚೌಗುಲಾ ಸಹೋದದರು ತಮ್ಮ ಕೃಷಿ ಜಮೀನಿನಲ್ಲಿ ಚಿತಾಗಾರ ನಿರ್ಮಿಸಿ, ಅದಕ್ಕೆ ಶೆಡ್‌ ಹಾಕಿ ಮಳೆ ಮತ್ತು ಬಿಸಿಲಿನಿಂದ ರಕ್ಷಣೆಗೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಚಿತಾಗಾರ ಸ್ಥಳದಲ್ಲಿಯೇ ಜೋಳಿಗೆ ಹಾಸಿಗೆ ಮಾಡಿಕೊಂಡು ರಾತ್ರಿ ಕಳೆದಿದ್ದಾರೆ. ಎಂದಿನಂತೆ ಬೆಳ್ಳಂ ಬೆಳಗ್ಗೆ ಜಮೀನಿಗೆ ಹೋಗಿದ್ದ ಚೌಗುಲಾ ಸಹೋದರರು ಚಿತಾಗಾರ ಪಕ್ಕದಲ್ಲಿ ತಮ್ಮ ಎರಡು ಬುಲೆಟ್‌ ವಾಹನಗಳನ್ನು ನಿಲ್ಲಿಸಿಕೊಂಡಿದ್ದಾರೆ. 

ತಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಗೆ ಪಿಎಸ್‌ಐ ಆಗಿ ಬಂದ ಮಗಳು: ಪುತ್ರಿಗೆ ಅಧಿಕಾರ ಹಸ್ತಾಂತರಿಸಿದ ತಂದೆ

ಅಲ್ಲದೇ ಚಿತಾಗಾರದ ಎರಡು ಬದಿ ಕಂಬಗಳಿಗೆ ಜೋಳಿಗೆಯನ್ನು ಕಟ್ಟಿಕೊಂಡು ಅದರಲ್ಲಿ ಮಲಗಿರುವ ದೃಶ್ಯವನ್ನು ಕಂಡು ಅಚ್ಚರಿಗೆ ಒಳಗಾಗಿದ್ದಾರೆ. ಅಲ್ಲದೇ ಈ ಸುದ್ದಿ ಗ್ರಾಮದಲ್ಲಿ ಹರಡುತ್ತಿದ್ದಂತೆ ಗ್ರಾಮದಲ್ಲಿರುವ ಯುವಕರು ಮತ್ತು ಜನರು ಕುತೂಹಲದಿಂದ ಓಡೋಡಿ ಬಂದು ವೀಕ್ಷಣೆ ಮಾಡಿದ್ದಾರೆ. ಬಳಿಕ ಪ್ರವಾಸಿಗರು ಸ್ಥಳದಲ್ಲಿದ್ದ ಎಲ್ಲರೊಂದಿಗೆ ಕೆಲ ಸಮಯ ಕಳೆದು ತಮ್ಮ ಬುಲೆಟ್‌ ಏರಿ ಗೋವಾದತ್ತ ಪ್ರಯಾಣ ಬೆಳೆಸಿದರು. ಸ್ಮಶಾನದಲ್ಲಿ ಮಲಗುವ ಮೂಲಕ ಸ್ಮಶಾನ ಕಂಡರೆ ದೂರ ಓಡುವ ಜನರಿಗೆ ಪ್ರವಾಸಿಗರಿಬ್ಬರು ಈ ಮೂಲಕ ಮೂಢನಂಬಿಕೆಯನ್ನೂ ತೊಡೆದುಹಾಕುವ ಯತ್ನ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!