'ಭಾರತ ವಿಶ್ವಕಪ್ ಗೆಲ್ಲಲಿ' ನವದಂಪತಿಗಳಿಂದ ಟೀಂ ಇಂಡಿಯಾಗೆ ಶುಭಾಶಯ

Published : Nov 19, 2023, 02:28 PM IST
'ಭಾರತ ವಿಶ್ವಕಪ್ ಗೆಲ್ಲಲಿ' ನವದಂಪತಿಗಳಿಂದ ಟೀಂ ಇಂಡಿಯಾಗೆ ಶುಭಾಶಯ

ಸಾರಾಂಶ

ಇಂದು ಭಾರತ ಆಸ್ಟ್ರೇಲಿಯಾ ನಡುವೆ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ನಡೆಯುತ್ತಿದ್ದು, ಇಡೀ ದೇಶವೇ ಟಿವಿ ಮುಂದೆ ಕುಳಿತಿದೆ. ಭಾರತ ತಂಡ ಗೆಲುವಿಗಾಗಿ ದೇಶಾದ್ಯಂತ ಕ್ರೀಡಾಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ಇತ್ತ ದಾಂಪತ್ಯಕ್ಕೆ ಕಾಲಿಟ್ಟ ಯುವ ಜೋಡಿ ಜೋಡಿಯೊಂದು ಭಾರತ ವಿಶ್ವಕಪ್ ಗೆಲ್ಲಲಿ ಎಂದು ಮದುವೆ ಮಂಟಪದಲ್ಲೇ ತಂಡದ ಸದಸ್ಯರ ಬ್ಯಾನರ್ ಹಿಡಿದು ಇಂಡಿಯಾ ಟೀಂ ಗೆ ಶುಭಕೋರಿದ್ದಾರೆ.

ಚಿಕ್ಕೋಡಿ (ನ.19): ಇಂದು ಭಾರತ ಆಸ್ಟ್ರೇಲಿಯಾ ನಡುವೆ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ನಡೆಯುತ್ತಿದ್ದು, ಇಡೀ ದೇಶವೇ ಟಿವಿ ಮುಂದೆ ಕುಳಿತಿದೆ. ಭಾರತ ತಂಡ ಗೆಲುವಿಗಾಗಿ ದೇಶಾದ್ಯಂತ ಕ್ರೀಡಾಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ಇತ್ತ ದಾಂಪತ್ಯಕ್ಕೆ ಕಾಲಿಟ್ಟ ಯುವ ಜೋಡಿ ಜೋಡಿಯೊಂದು ಭಾರತ ವಿಶ್ವಕಪ್ ಗೆಲ್ಲಲಿ ಎಂದು ಮದುವೆ ಮಂಟಪದಲ್ಲೇ ತಂಡದ ಸದಸ್ಯರ ಬ್ಯಾನರ್ ಹಿಡಿದು ಇಂಡಿಯಾ ಟೀಂ ಗೆ ಶುಭಕೋರಿದ್ದಾರೆ.

ವಿಶ್ವಕಪ್ ಫೈನಲ್‌ ವೇಳೆ ಮಳೆ ಬಂದ್ರೆ ಏನಾಗುತ್ತೆ? ಪಿಚ್ ರಿಪೋರ್ಟ್ ಏನು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಕೌಲಾಪೂರ ಹಾಗೂ ಮುದ್ದಾಪೂರ ಮದುವೆ ಸಂಭ್ರಮದಲ್ಲಿ ನವ ವಧು ವರರಿಂದ ಟೀಂ ಇಂಡಿಯಾಗೆ ಶುಭಾಶಯ ತಿಳಿಸಿದ್ದಾರೆ. ನವೀನ ಹಾಗೂ ಸ್ನೇಹಾ ಎಂಬ ವಧು ವರರಿಂದ ಇಂಡಿಯಾ ತಂಡದ ಸದಸ್ಯರ ಬ್ಯಾನರ್ ಹಿಡಿದು ಗೆದ್ದು ಬಾ ಇಂಡಿಯಾ ಎಂದು ಮದುವೆ ಮಂಟಪದಿಂದಲೇ ಶುಭಾಶಯ ಹೇಳಿದ್ದಾರೆ.

ವಿಶ್ವಕಪ್ ಏಕದಿನ ಕ್ರಿಕೆಟ್ ಆರಂಭದಿಂದಲೂ ಎಲ್ಲ ಪಂದ್ಯಗಳನ್ನು ಗೆದ್ದು ಫೈನಲ್ ಪ್ರವೇಶಿಸಿರುವ ಭಾರತ ತಂಡ. ವಿಶ್ವಕಪ್ ಗೆದ್ದೇ ಗೆಲ್ಲುತ್ತದೆ ಎಂದು ನವದಂಪತಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಆಸ್ಟ್ರೇಲಿಯಾ ಸೋಲು ಖಚಿತ, ಟೀಂ ಇಂಡಿಯಾ ಗೆಲುವು ನಿಶ್ಚಿತ ಎಂದ ಇಡೀ ಮದುವೆ ಮನೆಯ ಸದಸ್ಯರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!