ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಸಾಹಿತಿ ಬರಗೂರು ರಾಮಚಂದ್ರಪ್ಪ

Published : Jun 07, 2023, 01:28 PM IST
ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಸಾಹಿತಿ ಬರಗೂರು ರಾಮಚಂದ್ರಪ್ಪ

ಸಾರಾಂಶ

ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಈ ಸಂಬಂಧ ನಿನ್ನೆ (ಮಂಗಳವಾರ) ನಡೆದ ಸಭೆಯಲ್ಲಿ ಬರಗೂರು ರಾಮಚಂದ್ರಪ್ಪ ಅವರ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದ್ದರು. ಆದರೆ ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನವನ್ನ ಸಾಹಿತಿ ಬರಗೂರು ರಾಮಚಂದ್ರಪ್ಪ ತಿರಸ್ಕರಿಸಿದ್ದಾರೆ. 

ಬೆಂಗಳೂರು (ಜೂ.07): ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಈ ಸಂಬಂಧ ನಿನ್ನೆ (ಮಂಗಳವಾರ) ನಡೆದ ಸಭೆಯಲ್ಲಿ ಬರಗೂರು ರಾಮಚಂದ್ರಪ್ಪ ಅವರ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದ್ದರು. ಆದರೆ ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನವನ್ನ ಸಾಹಿತಿ ಬರಗೂರು ರಾಮಚಂದ್ರಪ್ಪ ತಿರಸ್ಕರಿಸಿದ್ದಾರೆ. 

ಶಾಲಾ ಪಠ್ಯ ಪರಿಷ್ಕರಣೆ ಗೊಂದಲ ನಿವಾರಣೆಗೆ ಸಮಿತಿ ರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಆದರೆ ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು ಪಠ್ಯ ಪರಿಷ್ಕರಣೆಯಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಾನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷನಾಗಿಲ್ಲ. ಪಠ್ಯ ಪರಿಷ್ಕರಣೆಗೆ ಹೊಸ ಸಮಿತಿ ರಚನೆ ಆಗಿಲ್ಲ. ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷನಾಗಲು ನಾನು ಒಪ್ಪಿಲ್ಲ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ.

ಸಿಎಂರನ್ನು ಅವಾಚ್ಯ ಪದಗಳಿಂದ ನಿಂದಿಸಿದ ವ್ಯಕ್ತಿ ಮೇಲೆ ಹಲ್ಲೆ: ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಉಮೇಶ್ ಶೆಟ್ಟಿ ದೂರು

ವಿವಾದಿತ ಪಠ್ಯ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ: ಆರೆಸ್ಸೆಸ್‌ ಸಂಸ್ಥಾಪಕ ಕೇಶವ ಬಲಿರಾಮ್‌ ಹೆಡಗೇವಾರ್‌, ಚಿಂತಕ ಚಕ್ರವರ್ತಿ ಸೂಲಿಬೆಲೆ ಮತ್ತು ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಅವರ ಪಠ್ಯಗಳೂ ಸೇರಿದಂತೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿ, ಆಕ್ಷೇಪ ಕೇಳಿಬಂದಿರುವ ಅಧ್ಯಾಯಗಳನ್ನು ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಆದರೆ, 2023-24ನೇ ಶೈಕ್ಷಣಿಕ ಸಾಲಿಗೆ ಈಗಾಗಲೇ ಬಹುತೇಕ ಪೂರ್ಣ ಪ್ರಮಾಣದಲ್ಲಿ ಪಠ್ಯಪುಸ್ತಕಗಳು ಮುದ್ರಣವಾಗಿ ಶಾಲೆಗಳನ್ನು ತಲುಪಿರುವ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯ ಮುದ್ರಿಸುವ ಪ್ರಕ್ರಿಯೆಗೆ ಕೈಹಾಕುವುದಿಲ್ಲ. ಬದಲಾಗಿ, ವಿತರಿಸಲಾಗಿರುವ ಪಠ್ಯದಲ್ಲಿ ವಿವಾದಿತ ಹಾಗೂ ಆಕ್ಷೇಪಣೆ ಕೇಳಿಬಂದಿರುವ ಪಾಠಗಳನ್ನು ಪಟ್ಟಿಮಾಡಿ, ಅವುಗಳನ್ನು ಮಕ್ಕಳಿಗೆ ಬೋಧನೆ ಮಾಡದಂತೆ ಶಾಲೆಗಳಿಗೆ ಸುತ್ತೋಲೆ ಹೊರಡಿಸಲು ತೀರ್ಮಾನಿಸಿದೆ. ಆದರೆ, ಈ ವಿಚಾರವನ್ನು ಮುಂದಿನ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಚರ್ಚಿಸಿ ಅನಂತರ ಅಧಿಕೃತವಾಗಿ ಪ್ರಕಟಿಸಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಂಗಳವಾರ ನಗರದ ಶಕ್ತಿ ಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, 2017ನೇ ಸಾಲಿನ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಮುಖ್ಯಸ್ಥರಾಗಿದ್ದ ಸಾಹಿತಿ ಬರಗೂರು ರಾಮಚಂದ್ರಪ್ಪ, ಶಿಕ್ಷಣ ತಜ್ಞ ನಿರಂಜನಾರಾಧ್ಯ ಸೇರಿದಂತೆ ವಿವಿಧ ಶಿಕ್ಷಣ ತಜ್ಞರು ಹಾಗೂ ಸಾಹಿತಿಗಳು, ಅಧಿಕಾರಿಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ಈ ಸಾಲಿನ ಮಟ್ಟಿಗೆ ವಿವಾದಿತ ಹಾಗೂ ಆಕ್ಷೇಪಣೆಗಳಿರುವ ಪಠ್ಯಗಳನ್ನು ಬೋಧನೆ, ಪರೀಕ್ಷೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯಿಂದ ಕೈಬಿಡಲು ತೀರ್ಮಾನಿಸಲಾಗಿದೆ. ಮುಂದಿನ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಈ ವಿಷಯ ಚರ್ಚಿಸಿ ಅಧಿಕೃತ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿಯವರು ಭರವಸೆ ನೀಡಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

'ಗೃಹಜ್ಯೋತಿ' ಫಲಾನುಭವಿಯಾಗಲು ಮೊದಲು ಬಾಕಿ ಇರುವ ಬಿಲ್ ಕಟ್ಟಿ: ಗ್ರಾಹಕರಿಗೆ ಎಸ್ಕಾಂಗಳಿಂದ ಬಿಗ್ ಶಾಕ್

ಹೆಡಗೇವಾರ್‌, ಚಕ್ರವರ್ತಿ ಸೂಲಿಬೆಲೆ, ಬನ್ನಂಜೆ ಗೋವಿಂದಾಚಾರ್ಯ ಅವರ ಪಠ್ಯಗಳು ಸೇರಿದಂತೆ ವಿವಿಧ ವಿವಾದಿತ ಪಠ್ಯಗಳ ಜೊತೆಗೆ ಸಮಾಜ ವಿಜ್ಞಾನ ವಿಷಯದಿಂದ ಕೆಲವು ಅವಹೇಳನಕಾರಿ ವಿಷಯಗಳನ್ನು ತೆಗೆದುಹಾಕಲು ಕೂಡ ನಾವು ಮನವಿ ಮಾಡಿದ್ದೇವೆ. ಮುಂದಿನ ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯಪುಸ್ತಕಗಳನ್ನು ರೂಪಿಸಲು ತಜ್ಞರ ಸಮಿತಿಯನ್ನು ರಚಿಸುವ ಬಗ್ಗೆಯೂ ಚರ್ಚಿಸಲಾಯಿತು ಮತ್ತು ಸಮಿತಿಯನ್ನು ರಚಿಸುವ ಮೊದಲು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಕುರಿತು ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆಯೂ ಸಲಹೆ ನೀಡಿದ್ದೇವೆ ಎಂದು ತಜ್ಞರು ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!