
ಕೊಪ್ಪಳ (ಆ.5) ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೆ ಲಂಚದ ಹಣ ಹೊಂದಿಸಲು ಪರಶುರಾಮ ಹೆಣಗಾಡಿದ್ದು ಬೆಳಕಿಗೆ ಬಂದಿದೆ.
ಪರಶುರಾಮ ಸ್ನೇಹಿತ ಯರ್ರಿಸ್ವಾಮಿ, ಸಹೋದರ ಹನುಮಂತಪ್ಪ ಹಾಗೂ ತಾಯಿ ಗಂಗಮ್ಮ ಸ್ಫೋಟಕ ಮಾಹಿತಿಯನ್ನು ಮಾಧ್ಯಮದವರೊಂದಿಗೆ ಹಂಚಿಕೊಂಡಿದ್ದಾರೆ. ಸ್ನೇಹಿತ ಯರ್ರಿಸ್ವಾಮಿ ಮಾತನಾಡಿ, ಗೆಳೆಯ ಸಾಯುವ ನಾಲ್ಕು ದಿನ ಮುನ್ನ ನನಗೆ ಕರೆ ಮಾಡಿ ಎಲ್ಲವನ್ನು ಹೇಳಿದ್ದ.
ಪಿಯುಸಿ ಫೇಲಾಗಿ ಬೆಂಗ್ಳೂರಲ್ಲಿ ಕೂಲಿ ಮಾಡಿ, 10 ಸರ್ಕಾರಿ ನೌಕರಿ ತ್ಯಜಿಸಿ ಪಿಎಸ್ಐ ಆಗಿದ್ದ ಪರಶುರಾಮ..!
ಪತ್ನಿಯ ಬಂಗಾರ ಅಡವಿಟ್ಟಿದ್ದನ್ನು ಹೇಳಿದ್ದ, ಅಷ್ಟೇ ಅಲ್ಲ ಬ್ಯಾಂಕಿನಲ್ಲಿ ಸಾಲವನ್ನೂ ಮಾಡಿದ್ದ. ಇದ್ಯಾವುದು ಸಾಲದ್ದಕ್ಕೆ ಫ್ಲ್ಯಾಟ್ವೊಂದನ್ನು ಮಾರಲು ಮುಂದಾಗಿದ್ದನ್ನು ನನ್ನ ಬಳಿ ಹೇಳಿಕೊಂಡಿದ್ದ. ಇದರ ಆಡಿಯೋ ಸಹ ನನ್ನ ಬಳಿ ಇದ್ದು, ಬಳಿಕ ನೀಡಲಾಗುವುದು. ಪರಶುರಾಮ ಲಂಚದ ಒತ್ತಡದಿಂದಲೇ ಸಾವನ್ನಪ್ಪಿದ್ದಾನೆ ಎನ್ನುವುದು ಸ್ಪಷ್ಟ ಎಂದು ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ