ಯಾದಗಿರಿ ರೇಷನ್‌ ಅಕ್ಕಿ ವಿದೇಶ ಪಾಲು: ಸಿಐಡಿ ತನಿಖೆಗೆ ಆದೇಶ

Published : Sep 17, 2025, 04:27 AM ISTUpdated : Sep 17, 2025, 04:57 AM IST
annabhagya

ಸಾರಾಂಶ

ಯಾದಗಿರಿ ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ವಿದೇಶಕ್ಕೆ ರವಾನೆ ಆಗುತ್ತಿರುವ ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ತನಿಖೆಗೆ ಒಪ್ಪಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಸಲೀಂ ಮಂಗಳವಾರ ಆದೇಶಿಸಿದ್ದಾರೆ.

ಬೆಂಗಳೂರು (ಸೆ.17): ಯಾದಗಿರಿ ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ವಿದೇಶಕ್ಕೆ ರವಾನೆ ಆಗುತ್ತಿರುವ ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ತನಿಖೆಗೆ ಒಪ್ಪಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಸಲೀಂ ಮಂಗಳವಾರ ಆದೇಶಿಸಿದ್ದಾರೆ. ಯಾದಗಿರಿ ಜಿಲ್ಲೆ ಗುರಮಿಠ್ಕಲ್ ತಾಲೂಕಿನಿಂದ ರಾಜ್ಯದ ಬಡವರ ಪಾಲಿನ ಪಡಿತರ ಅಕ್ಕಿಯನ್ನು ಗಲ್ಫ್‌ ದೇಶಗಳು, ಫ್ರಾನ್ಸ್‌ ಸೇರಿದಂತೆ ವಿದೇಶಕ್ಕೆ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದೆ ಎಂಬ ದಂಧೆಯನ್ನು ಸೆ.8ರಂದು ‘ಕನ್ನಡಪ್ರಭ’ ಬಯಲುಗೊಳಿಸಿತ್ತು. ಈ ಅಕ್ಕಿ ಹಗರಣವು ಭಾರಿ ಚರ್ಚೆಗೆ ಗ್ರಾಸವಾಗಿತ್ತು.

ಈ ಬಗ್ಗೆ ಗುರಮಿಠ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಐವರ ಬಂಧನವಾಗಿತ್ತು. ಈ ಪ್ರಕರಣದ ಜಾಲವು ಬಹು ವಿಸ್ತಾರವಾಗಿರುವ ಕಾರಣಕ್ಕೆ ಹೆಚ್ಚಿನ ತನಿಖೆಗೆ ಸಿಐಡಿಗೆ ಡಿಜಿಪಿ ವಹಿಸಿದ್ದಾರೆ ಎಂದು ತಿಳಿದು ಬಂದಿದೆ. ಅಕ್ಕಿ ಹಗರಣದ ಬಗ್ಗೆ ಸಿಐಡಿಯಲ್ಲಿ ಎಸ್ಪಿ ನೇತೃತ್ವದಲ್ಲಿ ತಂಡ ರಚನೆಯಲಾಗಿದ್ದು, ಮತ್ತಷ್ಟು ಜನರಿಗೆ ತನಿಖೆ ಬಿಸಿ ತಟ್ಟಲಿದೆ.

ಪ್ರಕರಣದ ಹಿನ್ನೆಲೆ

ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತು ಕುರಿತು "ಕನ್ನಡಪ್ರಭ" ವರದಿ ಸಂಚಲನ ಮೂಡಿಸಿದೆ. ಸೆ.5ರಂದು ಆಹಾರ ಇಲಾಖೆ ಅಧಿಕಾರಿಗಳು ಯಾದಗಿರಿ ಜಿಲ್ಲೆಯ ಗುರುಮಠಕಲ್‌ನ 2 ರೈಸ್‌ಮಿಲ್‌ಗಳ ಮೇಲೆ ದಾಳಿ ಮಾಡಿದಾಗ 5000-6000 ಟನ್‌ನಷ್ಟು ಪಡಿತರ ಅಕ್ಕಿ ದಾಸ್ತಾನು ಪತ್ತೆಯಾಗಿತ್ತು. ಈ ಅಕ್ಕಿಯನ್ನು ಪಾಲಿಶ್‌ ಮಾಡಿ, ಬೇರೆ ಬೇರೆ ಬ್ರ್ಯಾಂಡ್‌ಗಳ ಹೆಸರಲ್ಲಿ ವಿದೇಶಗಳಿಗೆ ಮಾರಾಟ ಮಾಡುತ್ತಿರುವ ಜಾಲ ಸಿಕ್ಕಿಬಿದ್ದು, ಎರಡೂ ರೈಸ್‌ಮಿಲ್‌ನ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಅಕ್ರಮದ ಬಗ್ಗೆ ಸೆ.8ರಂದು ಕನ್ನಡಪ್ರಭ ‘ಅನ್ನಭಾಗ್ಯ ಅಕ್ಕಿ ಫಾರಿನ್‌’ ತಲೆಬರದಡಿ ಪ್ರಕಟಿಸಿದ್ದ ಮುಖಪುಟದ ವರದಿ ಸಂಚಲನ ಮೂಡಿಸಿತ್ತು. ಈ ಕುರಿತ ಕನ್ನಡಪ್ರಭ ಸಂಪಾದಕೀಯ ಸರ್ಕಾರವನ್ನು ಎಚ್ಚರಿಸಿತ್ತು.

ಅಕ್ಕಿ ಹಗರಣದಲ್ಲಿ ಯಾದಗಿರಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು ಅವಮಾನದ ಸಂಗತಿ. ರೈಸ್‌ಮಿಲ್‌ವೊಂದರಲ್ಲಿ ಭಾರಿ ಪ್ರಮಾಣದ ಅಕ್ಕಿ ದಾಸ್ತಾನು ಪತ್ತೆಯಾಗಿರುವುದು ನೋಡಿದರೆ, ಚಿಲ್ಲರೆ ಅಂಗಡಿಗಳಿಂದಲ್ಲ, ನ್ಯಾಯಬೆಲೆ ಅಂಗಡಿಗಳ ಡೀಲರುಗಳಿಂದಲೇ ದಾಸ್ತಾನು ಅಕ್ರಮ ಪೂರೈಕೆ ಆಗಿರುವ ಬಗ್ಗೆ ಅನುಮಾನವಿದೆ.
- ಶರಣಬಸಪ್ಪಗೌಡ ದರ್ಶನಾಪುರ, ಸಚಿವ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!